AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಸರಣಿ ಸಾವಿಗೆ ದಾವಣಗೆರೆಯ ಸೂಳೆಕೆರೆ ನೀರು ಕಾರಣವಾ? ಲ್ಯಾಬ್ ವರದಿ ಫಲಿತಾಂಶ ಇಲ್ಲಿದೆ

ರಾಜ್ಯ ಸರ್ವೇಕ್ಷಣಾ ಘಟಕದ ಸೂಚನೆ ಮೇರೆಗೆ ಸೂಳೆಕೆರೆಯಿಂದ 6 ಮಾದರಿಗಳನ್ನು ಕಲ್ಚರ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 5 ಮಾದರಿಗಳಲ್ಲಿ ಯಾವುದೇ ಸೂಕ್ಷ್ಮಾಣು ಕಂಡುಬಂದಿಲ್ಲ. ಆದರೆ, ಜಾಕ್ ವೆಲ್-3ರ ಒಂದು ಮಾದರಿಯಲ್ಲಿ ಎರೋಮೊನಾಸ್ ಸೋರ್ಬಿಯಾ ಎಂಬ ಸೂಕ್ಷ್ಮಾಣು ಕಂಡು ಬಂದಿದೆ. ಆದ್ದರಿಂದ ಈ ಜಾಕ್‌ವೆಲ್‌ನಿಂದ ಪೂರೈಕೆಯಾಗುವ ನೀರನ್ನು ಮತ್ತೊಮ್ಮೆ ಕ್ಲೋರಿನೇಷನ್ ಮಾಡಿಸಿ, ಪರೀಕ್ಷೆಗೆ ಒಳಪಡಿಸಿ ಕುಡಿಯಲು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಸರಣಿ ಸಾವಿಗೆ ದಾವಣಗೆರೆಯ ಸೂಳೆಕೆರೆ ನೀರು ಕಾರಣವಾ? ಲ್ಯಾಬ್ ವರದಿ ಫಲಿತಾಂಶ ಇಲ್ಲಿದೆ
ಕಾವಾಡಿಗರ ಹಟ್ಟಿಯಲ್ಲಿ ಸರಣಿ ಸಾವಿಗೆ ದಾವಣಗೆರೆಯ ಸೂಳೆಕೆರೆ ನೀರು ಕಾರಣವಾ?
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 18, 2023 | 9:33 AM

Share

ದಾವಣಗೆರೆ/ಚಿತ್ರದುರ್ಗ: ಪಕ್ಕದ ಚಿತ್ರದುರ್ಗದ (Chitradurga) ಕಾವಾಡಿಗರ ಹಟ್ಟಿಯಲ್ಲಿ (Kavadigar Hatti) ಸಂಭವಿಸಿದ ಸರಣಿ ಸಾವಿಗೂ ( serial deaths), ದಾವಣಗೆರೆಯ ಸೂಳೆಕೆರೆ ನೀರಿಗೂ (Sulekere, Shanti Sagara) ಸಂಬಂಧವಿದೆಯಾ? ಇದನ್ನು ಪತ್ತೆ ಹಚ್ಚಲು ನಡೆಸಿದ ಪ್ರಯೋಗಾಲಯ ವರದಿ ಏನು ಹೇಳುತ್ತದೆ? ಇಲ್ಲಿದೆ ವರದಿ. ಕಾವಾಡಿಗರಹಟ್ಟಿಯಲ್ಲಿ ಕಾಲರಾಗೆ ಕಾರಣವಾಗಿದ್ದು ಸೂಕ್ಷ್ಮಾಣು ವಿಬ್ರಿಯೊ ಕಾಲರಾ. ಆದರೆ ಈ ಬ್ಯಾಕ್ಟೀರಿಯಾ ಸೂಳೆಕೆರೆ ನೀರಿನಲ್ಲಿ ಕಂಡು ಬಂದಿಲ್ಲ ಎಂದು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದ್ದಾರೆ. ಹಾಗಾಗಿ ಚಿತ್ರದುರ್ಗದ ಕಾವಾಡಿಗರ ಹಟ್ಟಿ ಸಾವಿಗೂ ಹಾಗೂ ದಾವಣಗೆರೆ (Davanagere) ಜಿಲ್ಲೆಯ ಸೂಳೆಕೆರೆ ನೀರುಗೂ ಸಂಬಂಧವಿಲ್ಲ ಎನ್ನಲಾಗಿದೆ.

ರಾಜ್ಯ ಸರ್ವೇಕ್ಷಣಾ ಘಟಕದ ಸೂಚನೆ ಮೇರೆಗೆ ಸೂಳೆಕೆರೆಯಿಂದ 6 ಮಾದರಿಗಳನ್ನು ಕಲ್ಚರ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 5 ಮಾದರಿಗಳಲ್ಲಿ ಯಾವುದೇ ಸೂಕ್ಷ್ಮಾಣು ಕಂಡುಬಂದಿಲ್ಲ.

Also Read: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ: ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆ, ಕೇಸ್​ ಬುಕ್

ಆದರೆ, ಜಾಕ್ ವೆಲ್-3ರ ಒಂದು ಮಾದರಿಯಲ್ಲಿ ಎರೋಮೊನಾಸ್ ಸೋರ್ಬಿಯಾ ಎಂಬ ಸೂಕ್ಷ್ಮಾಣು ಕಂಡು ಬಂದಿದೆ. ಆದ್ದರಿಂದ ಈ ಜಾಕ್‌ವೆಲ್‌ನಿಂದ ಪೂರೈಕೆಯಾಗುವ ನೀರನ್ನು ಮತ್ತೊಮ್ಮೆ ಕ್ಲೋರಿನೇಷನ್ ಮಾಡಿಸಿ, ಪರೀಕ್ಷೆಗೆ ಒಳಪಡಿಸಿ ಕುಡಿಯಲು ಪೂರೈಕೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Also Read: ಚಿತ್ರದುರ್ಗ: ಕಲುಷಿತ ನೀರಿನ ಆತಂಕ, ಕವಾಡಿಗರಹಟ್ಟಿ ಗ್ರಾಮ ಖಾಲಿ ಖಾಲಿ

ಚಿತ್ರದುರ್ಗ‌ ನಗರಕ್ಕೆ ಶೇ. 80 ರಷ್ಟು ಪ್ರದೇಶಕ್ಕೆ ಸೂಳೆಕೆರೆ ನೀರು ಪೂರೈಕೆ ಆಗುತ್ತಿದೆ.‌ ಮೇಲಾಗಿ‌ ಇತ್ತಿಚಿಗೆ ಸೂಳೆಕೆರೆ ನೀರು‌ ಕುಡಿಯಲು ಯೋಗ್ಯವಿಲ್ಲ ಎಂದು ವರದಿ ಬಂದಿದೆ. ಇದೇ ಕಾರಣಕ್ಕೆ ಪ್ರಯೋಗಾಲಯಕ್ಕೆ‌ ಇಲ್ಲಿನ ನೀರಿನ ಮಾದರಿ ಕಳುಸಲಾಗಿದ್ದು‌ ಕಾವಾಡಿಗರಹಟ್ಟಿ ಕಾಲರಾಗೂ ಸೂಳೆಕೆರೆ ನೀರಿಗೂ ಸಂಬಂಧವಿಲ್ಲ ಎಂಬುದು ಪ್ರಯೋಗಾಲಯದ ವರದಿಗಳಿಂದ ಇದೀಗ ಸ್ಪಷ್ಟವಾಗಿದೆ.

ದಾವಣಗೆರೆ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?