AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಕಟ್ಟುವ ಬದಲು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ: ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ ಹೇಳಿಕೆ

ಮಠದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಹಾವಿನ ವಿಷ ಏರಿ ಅಸ್ವಸ್ಥಗೊಂಡಿದ್ದ ಸ್ವಾಮೀಜಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.

ದೇವಸ್ಥಾನ ಕಟ್ಟುವ ಬದಲು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ: ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ ಹೇಳಿಕೆ
ಸಂಸದ ಜಿಎಂ ಸಿದ್ದೇಶ್ವರ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 11, 2021 | 10:35 PM

Share

ದಾವಣಗೆರೆ: ಪೂಜಾರಿಗಳು ಸ್ನಾನ ಮಾಡಲ್ಲ, ತೀರ್ಥ ಕುಡಿಯೋಕೆ ಆಗಲ್ಲ. ದೇಗುಲದ ಬದಲು ಶಾಲೆ ಕಟ್ಟುವಂತೆ ಮಹಾನುಭಾವರು ಹೇಳ್ತಾರೆ. ಜನರು ದೇವಸ್ಥಾನ ಕಟ್ಟುತ್ತಾರೆ, ಆ ಪೂಜಾರಿಗಳು ಸ್ನಾನ ಮಾಡಲ್ಲ. ಪೂಜಾರಿಗಳು ಕೊಡುವ ತೀರ್ಥವನ್ನು ಕುಡಿಯೋಕೆ ಆಗುವುದಿಲ್ಲ. ಅದು ಕೇವಲ ಪೂಜಾರಿಗಳ ತಪ್ಪಲ್ಲ, ನಮ್ಮೆಲ್ಲರ ತಪ್ಪೂ ಇದೆ. ಹತ್ತಾರು ದೇವಸ್ಥಾನ ಕಟ್ಟುತ್ತೀರಾ ಪೂಜಾರಿ ನೇಮಿಸುತ್ತೀರಾ. ದೇವಸ್ಥಾನ ಕಟ್ಟುವ ಬದಲು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದು ಯಲ್ಲೋದಹಳ್ಳಿಯಲ್ಲಿ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್​ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಯಲ್ಲೋದಹಳ್ಳಿ ಗ್ರಾಮದಲ್ಲಿ ಮಾತನಾಡಿದ್ದಾರೆ. ದೇವಸ್ಥಾನ ಉದ್ಘಾಟಿಸಿ, ಕೆರೆಗೆ ಬಾಗಿನ ಅರ್ಪಿಸಿ ಸಿದ್ದೇಶ್ವರ್​ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ: ಇಮ್ಮಡಿ ಗುರುಮಲ್ಲ ಸ್ವಾಮೀಜಿ ಹಾವು ಕಚ್ಚಿ ನಿಧನ ಇಲ್ಲಿನ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರದ ಕಬ್ಬಿಣಕೋಲೇಶ್ವರ ಮಠದ ಇಮ್ಮಡಿ ಗುರುಮಲ್ಲ ಸ್ವಾಮೀಜಿ (38) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಮಠದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಹಾವಿನ ವಿಷ ಏರಿ ಅಸ್ವಸ್ಥಗೊಂಡಿದ್ದ ಸ್ವಾಮೀಜಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.

ರಾಯಚೂರು: ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಯಾಟಗಲ್‌ನಲ್ಲಿ ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ ಮಾಡಿದ ಘಟನೆ ನಡೆದಿದೆ. ನಿನ್ನೆ ತಡ ರಾತ್ರಿ ದುಷ್ಕರ್ಮಿಗಳು ದೇಗುಲ ಧ್ವಂಸಗೊಳಿಸಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ದುಷ್ಕರ್ಮಿಗಳು ವಿಗ್ರಹ ಕಿತ್ತೆಸೆದು ದೇಗುಲ ಕುರೂಪಗೊಳಿಸಿದ್ದಾರೆ. ಎದೆಯೆತ್ತರ ಗುಂಡಿ ತೋಡಿ ದೇಗುಲ ದ್ವಂಸ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ನಗರದ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್​ಗಿರಿ; ನಾಲ್ವರು ಆರೋಪಿಗಳ ಬಂಧನ

ಇದನ್ನೂ ಓದಿ: ಮಂಡ್ಯ, ಮೈಸೂರಿನ ದೇವಸ್ಥಾನಗಳಲ್ಲಿ ದೇವರ ವಿಗ್ರಹ ಧ್ವಂಸ; ಒಂದೇ ದಿನದಲ್ಲಿ ಆರೋಪಿಯ ಬಂಧನ

Published On - 10:33 pm, Sat, 11 December 21

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ