AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಹಾಗೂ ಒಕ್ಕಲಿಗರ ಮೀಸಲಾತಿಯಲ್ಲಿ ತಿರುಗಾಮುರಗಾ: ಶಾಮನೂರು ಶಿವಶಂಕರಪ್ಪ

ರಾಜ್ಯ ಸರ್ಕಾರ ಲಿಂಗಾಯತರಿಗೆ ಮೀಸಲಾತಿ ‌ನೀಡಿದ್ದು ಅರ್ಥವಾಗಿಲ್ಲ. ಎಲ್ಲ ತಿರುಗಾಮುರಗಾ ಆಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಲಿಂಗಾಯತ ಹಾಗೂ ಒಕ್ಕಲಿಗರ ಮೀಸಲಾತಿಯಲ್ಲಿ ತಿರುಗಾಮುರಗಾ: ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
TV9 Web
| Edited By: |

Updated on: Dec 30, 2022 | 3:22 PM

Share

ದಾವಣಗೆರೆ: ರಾಜ್ಯ ಸರ್ಕಾರ ನಿನ್ನೆ (ಡಿ. 29) ರಂದು ಲಿಂಗಾಯತ ಪಂಚಮಸಾಲಿ (panchamasali) ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ 2D ಪ್ರತ್ಯೇಕ ಕೆಟಗರಿ ಮಾಡಿತ್ತು. ಈ ಸಂಬಂಧ ಗುರುವಾರ ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ (Belagavi Cabinet Meeting) ತೀರ್ಮಾನ ಕೈಗೊಂಡಿತ್ತು. ಈ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ ರಾಜ್ಯ ಸರ್ಕಾರ ಲಿಂಗಾಯತರಿಗೆ ಮೀಸಲಾತಿ ‌ನೀಡಿದ್ದು ಅರ್ಥವಾಗಿಲ್ಲ. ಎಲ್ಲ ತಿರುಗಾಮುರಗಾ ಆಗಿದೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲಿಂಗಾಯತ ಪಂಚಮಸಾಲಿಗೆ ಮೀಸಲಾತಿ ವಿಚಾರಕ್ಕೆ ಪ್ರತ್ಯೇಕ ಕೆಟಗೆರಿ ರಚನೆ ಮಾಡಿದ ಕುರಿತು ಸೂಕ್ತ ಮಾಹಿತಿ ‌ಪಡೆದು ಮಾತಾಡುವೆ ಎಂದರು.

ಇದನ್ನೂ ಓದಿ: ಮೀಸಲಾತಿ ಪರಿಹರಿಸಲು ಬೊಮ್ಮಾಯಿ ಸರ್ಕಾರದ ಹೊಸ ಸೂತ್ರ

ಇದು ಕೇವಲ ಚುನಾವಣಾ ಗಿಮಿಕ್: ಸಿದ್ದರಾಮಯ್ಯ

ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿ ಹಂಚಿಕೆಯಲ್ಲಿ ಗೊಂದಲಗಳಿವೆ. ಇದು ಕೇವಲ ಚುನಾವಣಾ ಗಿಮಿಕ್. ಇಂದಿರಾ ಸುಹಾನಿ ಕೇಸ್​ನಲ್ಲಿ ಮೀಸಲಾತಿ ಶೇ.50ರಷ್ಟು ಮೀರುವಂತಿಲ್ಲ. ಈಗ ಎಲ್ಲ ಮೀಸಲಾತಿ ಸೇರಿ ಶೇ.65.9ರಷ್ಟು ಆಗುತ್ತದೆ, ಇದು ಹೇಗೆ? ಎಂದು ಪ್ರಶ್ನಿಸಿದರು.

ಕಳಸಾ ಬಂಡೂರಿ DPR​​ಗೆ ಒಪ್ಪಿಗೆ ನೀಡಿದ್ದು ಕೂಡ ಚುನಾವಣಾ ಗಿಮಿಕ್. ಮೊದಲೇ ಯಾಕೆ ಡಿಪಿಆರ್​ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ. ಅಮಿತ್ ಶಾ ರಾಜ್ಯ ಪ್ರವಾಸದಿಂದ ದೊಡ್ಡ ಬದಲಾವಣೆ ಏನೂ ಆಗಲ್ಲ. ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ ಅಲ್ಲೇ ಠಿಕಾಣಿ ಹೂಡಿದ್ದರು. ‌ಆದರೆ ಅಲ್ಲಿ ಎನಾಯಿತು ಎಂದು ವಾಗ್ದಾಳಿ ಮಾಡಿದರು.

ಒಕ್ಕಲಿಗ ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಕೆಟಗರಿ

ಬೆಳಗಾವಿ: ಕರ್ನಾಟಕದಲ್ಲಿ ಎರಡು ಪ್ರಬಲ ಸಮುದಾಯದವಾಗಿರುವ ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ಕೆಟಗರಿ ಮಾಡಿದೆ. 3Aನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2C ಕೆಟಗರಿ ಹಾಗೂ 3Bನಲ್ಲಿದ್ದ ಲಿಂಗಾಯತರಿಗೆ 2D ಕೆಟಗರಿ ರಚಿಸಲು ಇಂದು(ಡಿಸೆಂಬರ್ 29) ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ.

ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ವಿಚಾರ, ಹರಿದು ಬಂದ ಜನರು

3ಎನಲ್ಲಿದ್ದ ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ಸಮ್ಮತಿಸಲಾಗಿದೆ. ಇನ್ನು 3ಬಿನಲ್ಲಿದ್ದ ಲಿಂಗಾಯತರಿಗೆ 2ಡಿ ಮೀಸಲಾತಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ. 2Aನಲ್ಲಿರುವ 102 ಪಂಗಡಗಳ ಮೀಸಲಾತಿಗೆ ಯಾವುದೇ ಧಕ್ಕೆ ಆಗಲ್ಲ. 2ಎ ನಲ್ಲಿರುವ 102 ಪಂಗಡಗಳ ಮೀಸಲಾತಿ ಟಚ್‌ ಮಾಡುವುದಿಲ್ಲ. ಯಾವುದೇ ಸಮುದಾಯದ ಮೀಸಲಾತಿಯಲ್ಲಿ ಬದಲಾಗಲ್ಲ. EWSನಲ್ಲಿರುವ ಶೇ.10ರಷ್ಟು ಮೀಸಲಾತಿಯಲ್ಲಿ ಎಷ್ಟು ಉಳಿಯುತ್ತೋ ಅದನ್ನು 2ಸಿ ಹಾಗೂ 2ಡಿಗೆ ಶಿಫ್ಟ್‌ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ