AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು

ವಿಜಯನಗರ ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ಬೀಗರ ಊಟ ಮಾಡಿದ್ದ 96 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರಿಗೆ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಡಿಎಚ್ಒ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು
ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 28, 2024 | 2:36 PM

Share

ದಾವಣಗೆರೆ, ಏ.28: ಬೀಗರ ಊಟ ಮಾಡಿದ್ದ 96 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ನಡೆದಿದೆ. ಇದರಲ್ಲಿ 22 ಮಕ್ಕಳಿದ್ದು, ಅಸ್ವಸ್ಥರಿಗೆ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮದುವೆ ಸಮಾರಂಭದ ಬಳಿಕ‌ ನಿನ್ನೆ(ಏ.27) ಬೀಗರ ಊಟ ಮಾಡಿ ಮಲಗಿದ್ದವರ ಆರೋಗ್ಯದಲ್ಲಿ ತಡರಾತ್ರಿ ಏರುಪೇರಾಗಿದೆ. ಇನ್ನು ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಡಿಎಚ್ಒ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲರೂ ಸ್ಟೇಬಲ್ ಆಗಿದ್ದಾರೆ ಎಂದು ಡಿಎಚ್​ಒ ಸ್ಪಷ್ಡನೆ ನೀಡಿದ್ದಾರೆ.

ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವು

ರಾಯಚೂರು: ತಾಲೂಕಿನ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳಾದ ಆರತಿ (9) ಹಾಗೂ ಪ್ರಿಯಾಂಕಾ (7) ಅವರು ಇಂದು(ಏ.28) ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುಟುಂಬ ಕೃಷ್ಣಾ ನದಿ ನೀರನ್ನ ಕುಡಿಯುತ್ತಿತ್ತು ಎಂಬ ಮಾಹಿತಿ ದೊರೆತಿದ್ದು,  ಶನಿವಾರ (ಏ.27)ರ ಸಂಜೆ ಏಕಾಏಕಿ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ.

ಇದನ್ನೂ ಓದಿ:ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್‌ನಿಂದ ವಾಂತಿ-ಭೇದಿ, 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ವಾಂತಿ, ಭೇದಿಯಿಂದ ಇಬ್ಬರು ಮಕ್ಕಳು ಸಾವು ಪ್ರಕರಣ; ಆರೋಗ್ಯ ಇಲಾಖೆ ಅಲರ್ಟ್

ವಾಂತಿ,ಬೇಧಿಯಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣವನ್ನ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.  ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು, ಆರೋಗ್ಯ ಇಲಾಖೆ, ಆಹಾರ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮನೆಯಲ್ಲಿ ನೀರಿನ ಸ್ಯಾಂಪಲ್,ಆಹಾರದ ಸ್ಯಾಂಪಲ್ ಪಡೆದಿದ್ದು, ಮೃತ ಮಕ್ಕಳ ತಂದೆ ಮಾರುತಿ ಕರೆಸಿ ವಿಚಾರಣೆ ಶುರುಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Sun, 28 April 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ