AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರನ ಕಾಲು ಕಟ್‌

ಅಪಘಾತಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಳವಾಗುತ್ತಿದೆ. ಅದರಂತೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ವೊಂದು ಡಿವೈಡರ್​ಗೆ ಡಿಕ್ಕಿಯಾಗಿ ಸವಾರನ ಕಾಲು ಕಟ್​ ಆಗಿದೆ. ಇತ್ತ ತುಮಕೂರಿನ ಮಧುಗಿರಿ ತಾಲೂಕಿನಲ್ಲಿ ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ: ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರನ ಕಾಲು ಕಟ್‌
ದಾವಣಗೆರೆ: ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರನ ಕಾಲು ಕಟ್‌
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 24, 2024 | 5:58 PM

Share

ದಾವಣಗೆರೆ, ಮೇ.24: ತಾಲೂಕಿನ ಆನಗೋಡು(Anagodu) ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ವೊಂದು ಡಿವೈಡರ್​ಗೆ ಡಿಕ್ಕಿಯಾಗಿದ್ದು, ಸವಾರನ ಕಾಲು ಕಟ್​ ಆಗಿದೆ. ಈ ಹಿನ್ನಲೆ ರಸ್ತೆಯಲ್ಲಿ ಬಿದ್ದು ಬೈಕ್​(Bike) ಸವಾರ ದಾವಣಗೆರೆಯ ಕೊಲ್ಕುಂಟೆ ನಿವಾಸಿ ಬಸವರಾಜ್ ನರಳಾಡಿದ್ದಾನೆ. ಕೂಡಲೇ ಗಾಯಾಳು ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಓರ್ವ ಮಹಿಳೆ ಸಾವು

ತುಮಕೂರು: ಮಧುಗಿರಿ ತಾಲೂಕಿನ ಪುರವರ ಗ್ರಾಮದ ಹೊರವಲಯದ ಜಯಮಂಗಲಿ ನದಿ ಸೇತುವೆ ಬಳಿಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹನುಮಕ್ಕ(45) ಸಾವನ್ನಪ್ಪಿದ ವ್ಯಕ್ತಿ. ಹನುಮಂತ ರೆಡ್ಡಿ, ಗಂಗಾಧರಪ್ಪ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಹಾಗೂ ಮೃತ ಮಹಿಳೆಯನ್ನು ಮಧುಗಿರಿ ಸಾರ್ವಜನಿಕರ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ: ಮೂವರು ಸಾವು

ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಬಸ್ ಚಕ್ರ

ವಿಜಯಪುರ, ಮೇ.24: ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಚಕ್ರ ಹರಿದ ಘಟನೆ ನಡೆದಿದೆ. ಇಂಡಿ ತಾಲೂಕಿನ ಸಾಲುಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಎಂಬುವವರ ಕಾಲಿಗೆ ತೀವ್ರ ಗಾಯವಾಗಿದ್ದು, ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಈ ಅವಘಡ ಸಂಭವಿಸಿದೆ. ಈ ಕುರಿತು ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 24 May 24

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?