AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರನ ಕಾಲು ಕಟ್‌

ಅಪಘಾತಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಳವಾಗುತ್ತಿದೆ. ಅದರಂತೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ವೊಂದು ಡಿವೈಡರ್​ಗೆ ಡಿಕ್ಕಿಯಾಗಿ ಸವಾರನ ಕಾಲು ಕಟ್​ ಆಗಿದೆ. ಇತ್ತ ತುಮಕೂರಿನ ಮಧುಗಿರಿ ತಾಲೂಕಿನಲ್ಲಿ ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ: ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರನ ಕಾಲು ಕಟ್‌
ದಾವಣಗೆರೆ: ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರನ ಕಾಲು ಕಟ್‌
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 24, 2024 | 5:58 PM

Share

ದಾವಣಗೆರೆ, ಮೇ.24: ತಾಲೂಕಿನ ಆನಗೋಡು(Anagodu) ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ವೊಂದು ಡಿವೈಡರ್​ಗೆ ಡಿಕ್ಕಿಯಾಗಿದ್ದು, ಸವಾರನ ಕಾಲು ಕಟ್​ ಆಗಿದೆ. ಈ ಹಿನ್ನಲೆ ರಸ್ತೆಯಲ್ಲಿ ಬಿದ್ದು ಬೈಕ್​(Bike) ಸವಾರ ದಾವಣಗೆರೆಯ ಕೊಲ್ಕುಂಟೆ ನಿವಾಸಿ ಬಸವರಾಜ್ ನರಳಾಡಿದ್ದಾನೆ. ಕೂಡಲೇ ಗಾಯಾಳು ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಓರ್ವ ಮಹಿಳೆ ಸಾವು

ತುಮಕೂರು: ಮಧುಗಿರಿ ತಾಲೂಕಿನ ಪುರವರ ಗ್ರಾಮದ ಹೊರವಲಯದ ಜಯಮಂಗಲಿ ನದಿ ಸೇತುವೆ ಬಳಿಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹನುಮಕ್ಕ(45) ಸಾವನ್ನಪ್ಪಿದ ವ್ಯಕ್ತಿ. ಹನುಮಂತ ರೆಡ್ಡಿ, ಗಂಗಾಧರಪ್ಪ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಹಾಗೂ ಮೃತ ಮಹಿಳೆಯನ್ನು ಮಧುಗಿರಿ ಸಾರ್ವಜನಿಕರ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ: ಮೂವರು ಸಾವು

ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಬಸ್ ಚಕ್ರ

ವಿಜಯಪುರ, ಮೇ.24: ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಚಕ್ರ ಹರಿದ ಘಟನೆ ನಡೆದಿದೆ. ಇಂಡಿ ತಾಲೂಕಿನ ಸಾಲುಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಎಂಬುವವರ ಕಾಲಿಗೆ ತೀವ್ರ ಗಾಯವಾಗಿದ್ದು, ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಈ ಅವಘಡ ಸಂಭವಿಸಿದೆ. ಈ ಕುರಿತು ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 24 May 24

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ