AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯ ದಾರುಣ ಘಟನೆ: ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕೊನೆಯುಸಿರೆಳೆದ ನವಜಾತ ಶಿಶು

Oxygen: ನಿನ್ನೆ ತಡರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಗರ್ಭಿಣಿ ಸ್ವಾತಿಯನ್ನು ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದರು. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಯಾಗಿದ್ದು, ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾದರು. ಆದರೆ ಅಂಬುಲೆನ್ಸ್ ‌ನಲ್ಲಿ ಅಕ್ಸಿಜನ್ ಇರಲಿಲ್ಲ,

ದಾವಣಗೆರೆಯ ದಾರುಣ ಘಟನೆ: ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕೊನೆಯುಸಿರೆಳೆದ ನವಜಾತ ಶಿಶು
ದಾರುಣ: ದಾವಣಗೆರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆಂಬುಲೆನ್ಸ್​ನಲ್ಲಿಆಕ್ಸಿಜನ್ ಕೊರತೆಯಿಂದಾಗಿ ಕೊನೆಯುಸಿರೆಳೆದ ಅದಾಗತಾನೆ ಹುಟ್ಟಿದ್ದ ಮಗು
TV9 Web
| Edited By: |

Updated on:Apr 09, 2022 | 1:12 PM

Share

ದಾವಣಗೆರೆ: ರಾಜ್ಯದ ಗ್ರಾಮೀಣ ಭಾಗದಲ್ಲಿ ನಿನ್ನೆ ತಡರಾತ್ರಿ 2 ಗಂಟೆಗೆ ಮಹಿಳೆಯೊಬ್ಬರಿಗೆ ಹೆರಿಗೆಯಾಗಿದ್ದು, ನವಜಾತ ಶಿಶುವಿನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ, ಆ ಮಗುವನ್ನು ಮತ್ತೊಮದು ಆಸ್ಪತ್ರೆ ಸಾಗಿಸುವಾಗ ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆಯುಂಟಾಗಿದ್ದು (Lack of Oxygen in Ambulance), ಆ ನವಜಾತ ಶಿಶು (Neonatal Baby) ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶೃಂಗಾರಬಾಬು ತಾಂಡಾದ ಹಾಲೇಶ್-ಸ್ವಾತಿ ದಂಪತಿಯ ಮೊದಲ ಮಗು ಆಂಬುಲೆನ್ಸ್​ನಲ್ಲಿಆಕ್ಸಿಜನ್ ಕೊರತೆಯಿಂದಾಗಿ ಕೊನೆಯುಸಿರೆಳೆದಿದೆ (Davanagere).

ನಿನ್ನೆ ತಡರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಗರ್ಭಿಣಿ ಸ್ವಾತಿಯನ್ನು ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದರು. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಯಾಗಿದ್ದು, ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾದರು. ಆದರೆ ಅಂಬುಲೆನ್ಸ್ ‌ನಲ್ಲಿ ಅಕ್ಸಿಜನ್ ಇಲ್ಲ, ಬೇರೊಂದು ಅಂಬುಲೆನ್ಸ್ ದಾರಿ ಮಧ್ಯೆ ಬರುತ್ತದೆ ಎಂದು ಚಾಲಕ‌ ಕರೆದೊಯ್ದಿದ್ದಾನೆ. ಆದರೆ ಹೊನ್ನಾಳಿಗೆ ಹೋಗುವುದರೊಳಗೆ ಉಸಿರಾಟದ ತೊಂದರೆ ಬಿಗಡಾಯಿಸಿ, ಮಗು ಸಾವನ್ನಪ್ಪಿದೆ. ಇದರಿಂದ ರೊಚ್ಚಿಗೆದ್ದ ಪೋಷಕರು ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Also Read: Ram Navami 2022: ಶ್ರೀ ರಾಮ ನವಮಿಯ ಆಧ್ಯಾತ್ಮಿಕ ಮಹತ್ವ, ಪೂಜಾ ಮುಹೂರ್ತ, ಆಯೋಧ್ಯೆಯ ಅರ್ಥವೂ ವಿವರಿಸಲಾಗಿದೆ

Also Read: ಕೋಲಾರದಲ್ಲಿ ಶ್ರೀರಾಮ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ಪ್ರಕರಣ; ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Published On - 1:07 pm, Sat, 9 April 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ