AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಅವಘಡ: ಗುತ್ತಿಗೆ ನೌಕರ ಸಾವು

ಲೈನ್ ದುರಸ್ತಿ ವೇಳೆ ಸರ್ಕಾರಿ ಲೈನ್‌ಮೆನ್ ನೀಡಿದ ತಪ್ಪು ಮಾಹಿತಿಯಿಂದ ಗುತ್ತಿಗೆ ನೌಕರನೊಬ್ಬ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರದ ಕೇಶವ ನಗರದಲ್ಲಿ ನಡೆದಿದೆ.

ವಿದ್ಯುತ್ ಅವಘಡ: ಗುತ್ತಿಗೆ ನೌಕರ ಸಾವು
ಪೃಥ್ವಿಶಂಕರ
| Edited By: |

Updated on:Dec 03, 2020 | 12:45 PM

Share

ದಾವಣಗೆರೆ: ಲೈನ್ ದುರಸ್ತಿ ವೇಳೆ ಸರ್ಕಾರಿ ಲೈನ್‌ಮೆನ್ ನೀಡಿದ ತಪ್ಪು ಮಾಹಿತಿಯಿಂದ ಗುತ್ತಿಗೆ ನೌಕರನೊಬ್ಬ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರದ ಕೇಶವ ನಗರದಲ್ಲಿ ನಡೆದಿದೆ.

ಹಳೇ ಕಂಬವನ್ನ ತೆಗೆದು ಹೊಸ ಕಂಬ ನೆಡುವ ವೇಳೆ ಈ ಅವಘಡ ಸಂಭವಿಸಿತು. ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ (24) ಸ್ಥಳದಲ್ಲಿಯೇ ಸಾವನ್ನಪ್ಪಿದರೆ. ಮತ್ತೊಬ್ಬ ಗುತ್ತಿಗೆ ನೌಕರ ಮಹೇಶ್‌ಗೆ ತೀವ್ರ ಗಾಯಗಳಾಗಿವೆ.

ಹಳೇ ಕಂಬವನ್ನ ತೆಗೆದು ಹೊಸ ಲೈಟ್ ಕಂಬ ನೆಡಲು ಒಬ್ಬ ಸರ್ಕಾರಿ ನೌಕರ ಹಾಗೂ ಇಬ್ಬರು ಗುತ್ತಿಗೆ ನೌಕರರು ಕಂಬದ ಬಳಿ ಬಂದಿದ್ದರು. ಈ ವೇಳೆ ವಿದ್ಯುತ್ ಕಡಿತ ಮಾಡಲಾಗಿದೆ ಎಂದು ಹೇಳಿದ ಸರ್ಕಾರಿ ಲೈನ್​ಮೆನ್ ಇಬ್ಬರು ಗುತ್ತಿಗೆ ನೌಕರರನ್ನು ಕಂಬಕ್ಕೆ ಹತ್ತಲು ಬಿಟ್ಟರು. ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದರಿಂದ, ಆಘಾತಕ್ಕೆ ಗುತ್ತಿಗೆ ನೌಕರ ಮಾರುತಿ (24) ಸ್ಥಳದಲ್ಲಿಯೇ ಸಾವನ್ನಪ್ಪಿದರು.

ಮತ್ತೊಬ್ಬ ಗುತ್ತಿಗೆ ನೌಕರ ಮಹೇಶ್‌ಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರೂ ಗುತ್ತಿಗೆ ನೌಕರರು ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆ ನಡೆಯುವ ವೇಳೆ ಯುವಕ ಮಾರುತಿ, ಅಣ್ಣ ನನ್ನ ಬದುಕಿಸಿ ಬದುಕಿಸಿ ಎಂದು ಬೇಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ.

ಸ್ಥಳಕ್ಕೆ ಹರಿಹರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಯುವಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 4:00 pm, Sun, 29 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ