AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಲಾಕ್​ಅಪ್ ಡೆತ್ ಪ್ರಕರಣಕ್ಕೆ ಹೊಸ ತಿರುವು; ತನಿಖೆಯನ್ನು ಸಿಐಡಿಗೆ ವಹಿಸಿದ ಪೊಲೀಸರು

ಆರೋಪಿಗೆ ಹಿಂಸೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆ. ಶಿಕ್ಷೆ ಕೊಡಲು ನ್ಯಾಯಾಲಯಗಳಿವೆ. ಇದನ್ನು ಬಿಟ್ಟು ಹಿಂಸೆ ನೀಡಿದ್ದು ತಪ್ಪು ಎಂದು ವಕೀಲರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ದಾವಣಗೆರೆ: ಲಾಕ್​ಅಪ್ ಡೆತ್ ಪ್ರಕರಣಕ್ಕೆ ಹೊಸ ತಿರುವು; ತನಿಖೆಯನ್ನು ಸಿಐಡಿಗೆ ವಹಿಸಿದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 08, 2021 | 4:25 PM

Share

ದಾವಣಗೆರೆ: ಇಲ್ಲಿ ಸಿಇಎನ್ ಠಾಣೆ ಪೊಲೀಸರ ವಶದಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿ ಹೊಸ ತಿರುವು ಲಭಿಸಿದೆ. ಲಾಕ್ ಅಪ್ ಡೆತ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ಬಹದ್ದೂರಘಟ್ಟ ಗ್ರಾಮದ ಕುಮಾರ (34) ಡಿಸೆಂಬರ್ 5ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಹತ್ತಾರು ಅನುಮಾನಗಳಿವೆ. ಸೂಕ್ತ ತನಿಖೆಗೆ ಆಗಲಿ ಎಂದು ಪೀಪಲ್ಸ್ ಲಾಯರ್ಸ್ ಗಿಲ್ಡ್ ಆಗ್ರಹ ವ್ಯಕ್ತಪಡಿಸಿದೆ. ಈ ಸಂಬಂಧ, ವಕೀಲರಿಂದ ಪ್ರತಿಭಟನೆ ನಡೆಸಿ ಎಸ್​ಪಿಗೆ ದೂರು ನೀಡಲಾಗಿದೆ. ಲಾಕ್ ಅಪ್ ಡೆತ್ ಪ್ರಕರಣ ಬುಕ್ ಮಾಡಲಾಗಿದ್ದು, ದಾವಣಗೆರೆ ಪೊಲೀಸರು ತನಿಖೆಯನ್ನು ಸಿಐಡಿಗೆ ವಹಿಸಿದ್ದಾರೆ.

ವಿಚಾರಣೆ ಹೆಸರಿನಲ್ಲಿ ಆರೋಪಿಯನ್ನ ಪೊಲೀಸ್ ಠಾಣೆ ಬದಲು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಿಂಸೆ ನೀಡಿದ್ದಾರೆ. ಆರೋಪಿಗೆ ಹಿಂಸೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆ. ಶಿಕ್ಷೆ ಕೊಡಲು ನ್ಯಾಯಾಲಯಗಳಿವೆ. ಇದನ್ನು ಬಿಟ್ಟು ಹಿಂಸೆ ನೀಡಿದ್ದು ತಪ್ಪು ಎಂದು ವಕೀಲರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಲಾಕ್ ಅಪ್ ಡೆತ್ ಪ್ರಕರಣ ಮುಚ್ಚಿ ಹಾಕಲು ಪೊಲೀಸರಿಂದ ಸೊಮೊಟೊ ದೂರು ದಾಖಲು ಮಾಡಲಾಗಿದೆ ಎಂದು ದಾವಣಗೆರೆಯಲ್ಲಿ ಕರ್ನಾಟಕ ನವ ನಿರ್ಮಾಣ ಸಮಿತಿ ಹಾಗೂ ಭಾರತೀಯ ದಲಿತ ಸಂಘರ್ಷ ಸಮಿತಿ ಆರೋಪ ಮಾಡಿದೆ. ಘಟನೆ ನಡೆದ ದಿನ ಮೌಖಿಕ ದೂರು‌ ನೀಡುವುದಾಗಿ ಹೇಳಿದ್ದೆವು. ಲಿಖಿತ ದೂರು ನೀಡಲು ಪೊಲೀಸರು ಹೇಳಿದ್ದರು. ಆದರೆ ತಡ ರಾತ್ರಿ ತಮಗೆ ಬೇಕಾದಂತೆ ಬರೆದುಕೊಂಡು ಮೃತ ವ್ಯಕ್ತಿಯ ಪತ್ನಿ ಕಡೆಯಿಂದ ಪೊಲೀಸರು ಸಹಿ ಹಾಕಿಸಿಕೊಂಡಿದ್ದಾರೆ.

ನಾವು ಕೇವಲ ಸಂಘಟನೆ ಸದಸ್ಯರಲ್ಲ ಮೃತನ ಸಂಬಂಧಿಕರು ಹೌದು. ಈ ಪ್ರಕರಣ ಮುಚ್ಚಿ ಹಾಕಲು ಸೊಮೊಟೊ ಕೇಸ್ ಮಾಡಲಾಗಿದೆ. ಒಟ್ಟು ಎಂಟು ಜನ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಸ್ಥರು

ಇದನ್ನೂ ಓದಿ: ಮುಂಬೈ: ಸೆಲ್ಫೀ ತೆಗೆಯುವ ವೇಳೆ ಬಿದ್ದು 14 ವರ್ಷದ ಬಾಲಕ ಸಾವು

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!