AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಲಾಕ್​ಅಪ್ ಡೆತ್ ಪ್ರಕರಣಕ್ಕೆ ಹೊಸ ತಿರುವು; ತನಿಖೆಯನ್ನು ಸಿಐಡಿಗೆ ವಹಿಸಿದ ಪೊಲೀಸರು

ಆರೋಪಿಗೆ ಹಿಂಸೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆ. ಶಿಕ್ಷೆ ಕೊಡಲು ನ್ಯಾಯಾಲಯಗಳಿವೆ. ಇದನ್ನು ಬಿಟ್ಟು ಹಿಂಸೆ ನೀಡಿದ್ದು ತಪ್ಪು ಎಂದು ವಕೀಲರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ದಾವಣಗೆರೆ: ಲಾಕ್​ಅಪ್ ಡೆತ್ ಪ್ರಕರಣಕ್ಕೆ ಹೊಸ ತಿರುವು; ತನಿಖೆಯನ್ನು ಸಿಐಡಿಗೆ ವಹಿಸಿದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 08, 2021 | 4:25 PM

Share

ದಾವಣಗೆರೆ: ಇಲ್ಲಿ ಸಿಇಎನ್ ಠಾಣೆ ಪೊಲೀಸರ ವಶದಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿ ಹೊಸ ತಿರುವು ಲಭಿಸಿದೆ. ಲಾಕ್ ಅಪ್ ಡೆತ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ಬಹದ್ದೂರಘಟ್ಟ ಗ್ರಾಮದ ಕುಮಾರ (34) ಡಿಸೆಂಬರ್ 5ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಹತ್ತಾರು ಅನುಮಾನಗಳಿವೆ. ಸೂಕ್ತ ತನಿಖೆಗೆ ಆಗಲಿ ಎಂದು ಪೀಪಲ್ಸ್ ಲಾಯರ್ಸ್ ಗಿಲ್ಡ್ ಆಗ್ರಹ ವ್ಯಕ್ತಪಡಿಸಿದೆ. ಈ ಸಂಬಂಧ, ವಕೀಲರಿಂದ ಪ್ರತಿಭಟನೆ ನಡೆಸಿ ಎಸ್​ಪಿಗೆ ದೂರು ನೀಡಲಾಗಿದೆ. ಲಾಕ್ ಅಪ್ ಡೆತ್ ಪ್ರಕರಣ ಬುಕ್ ಮಾಡಲಾಗಿದ್ದು, ದಾವಣಗೆರೆ ಪೊಲೀಸರು ತನಿಖೆಯನ್ನು ಸಿಐಡಿಗೆ ವಹಿಸಿದ್ದಾರೆ.

ವಿಚಾರಣೆ ಹೆಸರಿನಲ್ಲಿ ಆರೋಪಿಯನ್ನ ಪೊಲೀಸ್ ಠಾಣೆ ಬದಲು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಿಂಸೆ ನೀಡಿದ್ದಾರೆ. ಆರೋಪಿಗೆ ಹಿಂಸೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆ. ಶಿಕ್ಷೆ ಕೊಡಲು ನ್ಯಾಯಾಲಯಗಳಿವೆ. ಇದನ್ನು ಬಿಟ್ಟು ಹಿಂಸೆ ನೀಡಿದ್ದು ತಪ್ಪು ಎಂದು ವಕೀಲರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಲಾಕ್ ಅಪ್ ಡೆತ್ ಪ್ರಕರಣ ಮುಚ್ಚಿ ಹಾಕಲು ಪೊಲೀಸರಿಂದ ಸೊಮೊಟೊ ದೂರು ದಾಖಲು ಮಾಡಲಾಗಿದೆ ಎಂದು ದಾವಣಗೆರೆಯಲ್ಲಿ ಕರ್ನಾಟಕ ನವ ನಿರ್ಮಾಣ ಸಮಿತಿ ಹಾಗೂ ಭಾರತೀಯ ದಲಿತ ಸಂಘರ್ಷ ಸಮಿತಿ ಆರೋಪ ಮಾಡಿದೆ. ಘಟನೆ ನಡೆದ ದಿನ ಮೌಖಿಕ ದೂರು‌ ನೀಡುವುದಾಗಿ ಹೇಳಿದ್ದೆವು. ಲಿಖಿತ ದೂರು ನೀಡಲು ಪೊಲೀಸರು ಹೇಳಿದ್ದರು. ಆದರೆ ತಡ ರಾತ್ರಿ ತಮಗೆ ಬೇಕಾದಂತೆ ಬರೆದುಕೊಂಡು ಮೃತ ವ್ಯಕ್ತಿಯ ಪತ್ನಿ ಕಡೆಯಿಂದ ಪೊಲೀಸರು ಸಹಿ ಹಾಕಿಸಿಕೊಂಡಿದ್ದಾರೆ.

ನಾವು ಕೇವಲ ಸಂಘಟನೆ ಸದಸ್ಯರಲ್ಲ ಮೃತನ ಸಂಬಂಧಿಕರು ಹೌದು. ಈ ಪ್ರಕರಣ ಮುಚ್ಚಿ ಹಾಕಲು ಸೊಮೊಟೊ ಕೇಸ್ ಮಾಡಲಾಗಿದೆ. ಒಟ್ಟು ಎಂಟು ಜನ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಸ್ಥರು

ಇದನ್ನೂ ಓದಿ: ಮುಂಬೈ: ಸೆಲ್ಫೀ ತೆಗೆಯುವ ವೇಳೆ ಬಿದ್ದು 14 ವರ್ಷದ ಬಾಲಕ ಸಾವು

Follow Us
Web contact
Web contact

TV9 Kannada

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ