AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಅಧಿಕಾರಿಗಳು ಇಂದು (ಜೂ.02) ರಂದು ಬೆಳ್ಳಂ ಬೆಳಿಗ್ಗೆ ದಾವಣಗೆರೆ ಬಡಾವಣೆ ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದ ಪೊಲೀಸ್​ ಪೇದೆ ಹನುಮಂತಪ್ಪ ಅವರನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ
TV9 Web
| Edited By: |

Updated on:Jun 02, 2024 | 1:25 PM

Share

ದಾವಣಗೆರೆ, ಜೂನ್​ 02: ವಾರೆಂಟ್ (Warrant)​ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ (Davangere) ಬಡಾವಣೆ ಪೊಲೀಸ್ (Police)​ ಠಾಣೆ​ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸರಸ್ವತಿ ನಗರದ‌ ನಿವಾಸಿ ಲಕ್ಕಪ್ಪ ಅಂಗಡಿ ಎಂಬುವರು ಸೈಯದ್ ತಹಿರುದ್ದೀನ್ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ ಚೆಕ್​ಬೌನ್ಸ್​ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಸೈಯದ್ ತಹಿರುದ್ದೀನ್ ಅವರ ವಿರುದ್ಧ ವಾರಂಟ್​ ನೀಡುವಂತೆ ಪೊಲೀಸ್​ ಪೇದೆ ಹನಮಂತಪ್ಪ ಅವರಿಗೆ ಲಕ್ಕಪ್ಪ ಅಂಗಡಿ ವಿನಂತಿಸಿದ್ದರು.

ಇದನ್ನೂ ಓದಿ: ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಾರಂಟ್​ ಜಾರಿ ಮಾಡಲು ಲಕ್ಕಪ್ಪ ಅಂಗಡಿ ಅವರ ಬಳಿ ಪೊಲೀಸ್​ ಪೇದೆ ಹನಮಂತಪ್ಪ ಪೋನ್ ಪೇ ಮೂಲ‌ಕ ಎರಡು ಸಾವಿರ ರೂ. ಬೇಡಿಕೆ ಪಡೆಯುತ್ತಿದ್ದರು. ಈ ವೇಳೆ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್​ಪೇಕ್ಟರ್​​ಗಳಾದ ಹೆಚ್​ಎಸ್​ ರಾಷ್ಟ್ರಪತಿ ಹಾಗೂ ಮಧುಸೂದನ್ ದಾಳಿ ಮಾಡಿ ರೆಡ್​ಹ್ಯಾಂಡ್​ ಆಗಿ ಹಿಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sun, 2 June 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು