AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾದ ಮಹಿಳೆ ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂ. ಲಂಚ ಪಡೆದ ಪಿಎಸ್​ಐ ಲೋಕಾಯುಕ್ತ ಬಲೆಗೆ

ದಾವಣಗೆರೆಯಲ್ಲಿ ನಾಪತ್ತೆಯಾಗಿರುವ ಮಹಿಳೆಯನ್ನು ಹುಡುಕಿಕೊಡಲು ಲಂಚಕ್ಕೆ ಬೇಡಿಕೆ ಇಡಲಾಗಿದೆ. ಸದ್ಯ ತನ್ನ ಕರ್ತವ್ಯ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಣೆಯಾದ ಮಹಿಳೆ ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂ. ಲಂಚ ಪಡೆದ ಪಿಎಸ್​ಐ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ದಾವಣಗೆರೆ ಗ್ರಾಮಾಂತರ ಠಾಣೆಯ ಪಿಎಸ್​ಐ ಮತ್ತು ಪಿಸಿ
Rakesh Nayak Manchi
|

Updated on:May 01, 2023 | 10:02 PM

Share

ದಾವಣಗೆರೆ: ನಾಪತ್ತೆಯಾಗಿರುವ ಮಹಿಳೆಯನ್ನು ಹುಡುಕಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್​ಐ ಮತ್ತು ಸಿಬ್ಬಂದಿ ಲೋಕಾಯುಕ್ತ (Lokayukta) ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದಾವಣಗೆರೆ (Davanagere) ಗ್ರಾಮಾಂತರ ಪೊಲೀಸ್ ಠಾಣೆಯ ಎಸ್​ಐ ಶಿವನಗೌಡ ಹಾಗೂ ಪಿಸಿ ಲಿಂಗರಾಜ್ ನಾಯ್ಕ ಬಂಧಿತರು. ಮಹಿಳೆಯನ್ನು ಹುಡುಕಿಕೊಡಲು ಆಕೆಯ ಪತಿಗೆ ಪಿಎಸ್​ಐ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಬಂದ ದೂರಿನ ಅನ್ವಯ ತನಿಖೆಗೆ ಇಳಿದ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಇನ್​ಸ್ಪೆಕ್ಟರ್​ಗಳಾದ ರಾಷ್ಟ್ರಪತಿ ಹಾಗೂ ಅಂಜನೇಯ ಅವರು ಇಬ್ಬರನ್ನು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ರಂಗಸ್ವಾಮಿ ಎಂಬವರ ಪತ್ನಿ ನಾಪತ್ತೆಯಾಗಿದ್ದು, ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ‌ನಾಪತ್ತೆ ಪ್ರಕಣ ದಾಖಲಾಗಿದೆ. ಈ ನಡುವೆ ಆಕೆ ದಾವಣಗೆರೆಯಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದುಬಂದ ಹಿನ್ನೆಲೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಆದರೆ ಠಾಣಾ ಪಿಎಸ್​ಐ ಮತ್ತು ಶಿವನಗೌಡ ಹಾಗೂ ಪಿಸಿ ಲಿಂಗರಾಜ್ ನಾಯ್ಕ ಅವರು ತಮ್ಮ ಕರ್ತವ್ಯ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್: FIR ದಾಖಲು

ಮಹಿಳೆಯನ್ನು ಪತ್ತೆಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ರಂಗಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ ಇಂದು ಫೋನ್ ಪೇ ಮೂಲಕ 50 ಸಾವಿರ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಇತ್ತ ಲೋಕಾಯುಕ್ತ ಪೊಲೀಸರು ಠಾಣೆಗೆ ದಾಳಿ ನಡೆಸಿ ಎಸ್​ಐ ಮತ್ತು ಪಿಸಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Sat, 22 April 23

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?