AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

Davanagere: ದೇಶದಲ್ಲಿ ಆರ್​ಎಸ್​ಎಸ್​ ಒಂದಿದೆ, ಡಿಎಸ್​ಎಸ್ ಹತ್ತಾರಿವೆ. ಹತ್ತಾರು ಸಂಘಟನೆ ಮಾಡುವುದನ್ನು ನಿಲ್ಲಿಸಿ ಒಂದಾಗಬೇಕು. ಎಸ್​ಸಿ, ಎಸ್​ಟಿ ಸಮುದಾಯದವರು ಒಂದಾಗಬೇಕೆಂದು ಮಾದಾರ ಚನ್ನಯ್ಯ ಸ್ವಾಮೀಜಿ ಕರೆ ನೀಡಿದ್ದಾರೆ.

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ
ಮಾದಾರ ಚನ್ನಯ್ಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 12, 2021 | 7:02 PM

Share

ದಾವಣಗೆರೆ: ವಿಧಾನಸಭೆಯಲ್ಲಿ ಎಸ್​ಸಿ, ಎಸ್​ಟಿಯ 52 ಶಾಸಕರಿದ್ದಾರೆ. ಬೇರೆ ಪಕ್ಷಗಳಿಂದ ಬಂದ ಶಾಸಕರ ಬೆಂಬಲದಿಂದ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. 13 ಶಾಸಕರ ಬೆಂಬಲದಿಂದ ಯಡಿಯೂರಪ್ಪ ಸಿಎಂ ಆಗಿದ್ದರು. ಎಸ್​ಸಿ/ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲಾಗಿಲ್ಲ. ಎಸ್​ಸಿ, ಎಸ್​ಟಿ ಸಮುದಾಯದವರು ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಿ ಎಂದು ದಾವಣಗೆರೆಯಲ್ಲಿ ನಡೆದ ಸ್ವಾಭಿಮಾನಿ ಎಸ್​ಸಿ, ಎಸ್​ಟಿ ಸಂವಾದದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಉಪಜಾತಿಗಳಿವೆ. ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ 50 ಉಪಜಾತಿಗಳಿವೆ. ಮುಂದಿನ ದಿನಗಳಲ್ಲಿ ಎಸ್​ಸಿ, ಎಸ್​ಟಿ ಸ್ವಾಮೀಜಿಗಳ ಸಭೆ ನಡೆಸುತ್ತೇವೆ. ಎಸ್​ಸಿ, ಎಸ್​ಟಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ದೇಶದಲ್ಲಿ ಆರ್​ಎಸ್​ಎಸ್​ ಒಂದಿದೆ, ಡಿಎಸ್​ಎಸ್ ಹತ್ತಾರಿವೆ. ಹತ್ತಾರು ಸಂಘಟನೆ ಮಾಡುವುದನ್ನು ನಿಲ್ಲಿಸಿ ಒಂದಾಗಬೇಕು. ಎಸ್​ಸಿ, ಎಸ್​ಟಿ ಸಮುದಾಯದವರು ಒಂದಾಗಬೇಕೆಂದು ಮಾದಾರ ಚನ್ನಯ್ಯ ಸ್ವಾಮೀಜಿ ಕರೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸ್ವಾಭಿಮಾನಿ ಎಸ್​ಸಿ, ಎಸ್​ಟಿ ಸಂವಾದ ನಡೆಸಲಾಗಿದೆ. ಈ ವೇಳೆ, ದಲಿತ ಮುಖ್ಯಮಂತ್ರಿ ಕೂಗು ಪ್ರತಿಧ್ವನಿಸಿದೆ. ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಸೇರಿ ಚಿಂತನೆ ನಡೆಸಿದ್ದಾರೆ. ಎಸ್​ಸಿ, ಎಸ್​ಟಿ ಸ್ವಾಮೀಜಿಗಳ ನಡೆ ಅಚ್ಚರಿ ಮೂಡಿಸಿದೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠ, ಛಲವಾದಿ ಗುರುಪೀಠದ ಶ್ರೀಗಳು ಭಾಗಿ ಆಗಿದ್ದಾರೆ. ರಾಜ್ಯದಲ್ಲಿ ಎಸ್​ಸಿ, ಎಸ್​ಟಿ ಸಮುದಾಯದ 52 ಶಾಸಕರಿದ್ದಾರೆ. ಆದರೆ ಅಧಿಕಾರ ಹಿಡಿಯಲು ಆಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬರಲು ಹಣದ ಆಫರ್ ಕೊಟ್ಟಿರಲಿಲ್ಲ: ಯುಟರ್ನ್ ಹೊಡೆದ ಶ್ರೀಮಂತ ಪಾಟೀಲ್

ಇದನ್ನೂ ಓದಿ: ಕೂಡು ಒಕ್ಕಲಿಗ ಎಂಬುದು ಲಿಂಗಾಯತ ಸಮುದಾಯದ ಉಪಪಂಗಡ: ಎಂ.ಬಿ. ಪಾಟೀಲ್ ಸ್ಪಷ್ಟನೆ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!