AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

Davanagere: ದೇಶದಲ್ಲಿ ಆರ್​ಎಸ್​ಎಸ್​ ಒಂದಿದೆ, ಡಿಎಸ್​ಎಸ್ ಹತ್ತಾರಿವೆ. ಹತ್ತಾರು ಸಂಘಟನೆ ಮಾಡುವುದನ್ನು ನಿಲ್ಲಿಸಿ ಒಂದಾಗಬೇಕು. ಎಸ್​ಸಿ, ಎಸ್​ಟಿ ಸಮುದಾಯದವರು ಒಂದಾಗಬೇಕೆಂದು ಮಾದಾರ ಚನ್ನಯ್ಯ ಸ್ವಾಮೀಜಿ ಕರೆ ನೀಡಿದ್ದಾರೆ.

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ
ಮಾದಾರ ಚನ್ನಯ್ಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 12, 2021 | 7:02 PM

Share

ದಾವಣಗೆರೆ: ವಿಧಾನಸಭೆಯಲ್ಲಿ ಎಸ್​ಸಿ, ಎಸ್​ಟಿಯ 52 ಶಾಸಕರಿದ್ದಾರೆ. ಬೇರೆ ಪಕ್ಷಗಳಿಂದ ಬಂದ ಶಾಸಕರ ಬೆಂಬಲದಿಂದ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. 13 ಶಾಸಕರ ಬೆಂಬಲದಿಂದ ಯಡಿಯೂರಪ್ಪ ಸಿಎಂ ಆಗಿದ್ದರು. ಎಸ್​ಸಿ/ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲಾಗಿಲ್ಲ. ಎಸ್​ಸಿ, ಎಸ್​ಟಿ ಸಮುದಾಯದವರು ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಿ ಎಂದು ದಾವಣಗೆರೆಯಲ್ಲಿ ನಡೆದ ಸ್ವಾಭಿಮಾನಿ ಎಸ್​ಸಿ, ಎಸ್​ಟಿ ಸಂವಾದದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಉಪಜಾತಿಗಳಿವೆ. ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ 50 ಉಪಜಾತಿಗಳಿವೆ. ಮುಂದಿನ ದಿನಗಳಲ್ಲಿ ಎಸ್​ಸಿ, ಎಸ್​ಟಿ ಸ್ವಾಮೀಜಿಗಳ ಸಭೆ ನಡೆಸುತ್ತೇವೆ. ಎಸ್​ಸಿ, ಎಸ್​ಟಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ದೇಶದಲ್ಲಿ ಆರ್​ಎಸ್​ಎಸ್​ ಒಂದಿದೆ, ಡಿಎಸ್​ಎಸ್ ಹತ್ತಾರಿವೆ. ಹತ್ತಾರು ಸಂಘಟನೆ ಮಾಡುವುದನ್ನು ನಿಲ್ಲಿಸಿ ಒಂದಾಗಬೇಕು. ಎಸ್​ಸಿ, ಎಸ್​ಟಿ ಸಮುದಾಯದವರು ಒಂದಾಗಬೇಕೆಂದು ಮಾದಾರ ಚನ್ನಯ್ಯ ಸ್ವಾಮೀಜಿ ಕರೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸ್ವಾಭಿಮಾನಿ ಎಸ್​ಸಿ, ಎಸ್​ಟಿ ಸಂವಾದ ನಡೆಸಲಾಗಿದೆ. ಈ ವೇಳೆ, ದಲಿತ ಮುಖ್ಯಮಂತ್ರಿ ಕೂಗು ಪ್ರತಿಧ್ವನಿಸಿದೆ. ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಸೇರಿ ಚಿಂತನೆ ನಡೆಸಿದ್ದಾರೆ. ಎಸ್​ಸಿ, ಎಸ್​ಟಿ ಸ್ವಾಮೀಜಿಗಳ ನಡೆ ಅಚ್ಚರಿ ಮೂಡಿಸಿದೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠ, ಛಲವಾದಿ ಗುರುಪೀಠದ ಶ್ರೀಗಳು ಭಾಗಿ ಆಗಿದ್ದಾರೆ. ರಾಜ್ಯದಲ್ಲಿ ಎಸ್​ಸಿ, ಎಸ್​ಟಿ ಸಮುದಾಯದ 52 ಶಾಸಕರಿದ್ದಾರೆ. ಆದರೆ ಅಧಿಕಾರ ಹಿಡಿಯಲು ಆಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬರಲು ಹಣದ ಆಫರ್ ಕೊಟ್ಟಿರಲಿಲ್ಲ: ಯುಟರ್ನ್ ಹೊಡೆದ ಶ್ರೀಮಂತ ಪಾಟೀಲ್

ಇದನ್ನೂ ಓದಿ: ಕೂಡು ಒಕ್ಕಲಿಗ ಎಂಬುದು ಲಿಂಗಾಯತ ಸಮುದಾಯದ ಉಪಪಂಗಡ: ಎಂ.ಬಿ. ಪಾಟೀಲ್ ಸ್ಪಷ್ಟನೆ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ