AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಖಾತ್ರಿ ಕಾರ್ಡ್​​​​​ ಮಾಡಿಸಿ ಸತ್ತವರ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಪಿಡಿಒ ಅಮಾನತು

231 ಎಕರೆ ಗೋಮಾಳ್ ಜಮೀನನ್ನು ಉಳಿಸಲು ಕುರಿಗಳ ಸಹಿತ ತಾಲೂಕಾ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಾ ಕಚೇರಿಗೆ ಕುರಿಗಳೊಂದಿಗೆ ಮುತ್ತಿಗೆ ಹಾಕಿದರು.

ಉದ್ಯೋಗ ಖಾತ್ರಿ ಕಾರ್ಡ್​​​​​ ಮಾಡಿಸಿ ಸತ್ತವರ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಪಿಡಿಒ ಅಮಾನತು
PDO ಎ.ಟಿ.ನಾಗರಾಜ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 23, 2022 | 1:49 PM

Share

ದಾವಣಗೆರೆ: ಸತ್ತವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಕಾರ್ಡ್ (Employment Guarantee Card)​​​​​ ಮಾಡಿಸಿ ಲಕ್ಷಾಂತರ ರೂ. ವಂಚನೆ ಆರೋಪ ಹಿನ್ನೆಲೆ PDO ಎ.ಟಿ.ನಾಗರಾಜ್ ಸಸ್ಪೆಂಡ್​ ಮಾಡಿ, ಜಿ.ಪಂ. ಸಿಇಒ ಚನ್ನಪ್ಪ ಆದೇಶ ಹೊರಡಿಸಿದೆ. ಜಿಲ್ಲೆಯ ಜಗಳೂರು ತಾಲೂಕಿನ ಗ್ರಾಮಗಳಾದ ಅಣಬೂರ, ಹನಮಂತಾಪುರ ಗ್ರಾ.ಪಂ. ಪಿಡಿಒ ನಾಗರಾಜ್​ ಸತ್ತವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಕಾರ್ಡ್​ ಮಾಡಿಸಿ ಹಣ ಪಡೆಯುತ್ತಿದ್ದ. ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಸಾಮಗ್ರಿ ಖರೀದಿ ಮಾಡಿದ್ದು, 32 ಲಕ್ಷ ರೂಪಾಯಿಗೆ ಪಿಡಿಒ ನಾಗರಾಜ್ ಲೆಕ್ಕ ಕೊಟ್ಟಿಲ್ಲ. ಈ ಬಗ್ಗೆ ತನಿಖೆ ಮಾಡಿ ಆರೋಪ ಸಾಬೀತಾದ ಹಿನ್ನೆಲೆ ಅಮಾನತುಗೊಳಿಸಿದೆ.

ಗೋಮಾಳ ಜಮೀನು ಉಳಿಸುವಂತೆ ರೈತರಿಂದ ಪ್ರತಿಭಟನೆ

231 ಎಕರೆ ಗೋಮಾಳ್ ಜಮೀನನ್ನು ಉಳಿಸಲು ಕುರಿಗಳ ಸಹಿತ ತಾಲೂಕಾ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಾ ಕಚೇರಿಗೆ ಕುರಿಗಳೊಂದಿಗೆ ಮುತ್ತಿಗೆ ಹಾಕಿ, ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ರೈತರಿಂದ ವಿನೂತನ ಪ್ರತಿಭಟನೆ ಮಾಡಿದ್ದಾರೆ. ಗ್ರಾಮದ ಎಳು ಸರ್ವೇ ನಂಬರ್​ನಲ್ಲಿ ಸುಮಾರು 231 ಎರಕೆ ಜಮೀನು‌ ಗ್ರಾಮದ ಪ್ರಭಾವಿಗಳು‌ ಒತ್ತುವರಿ ಮಾಡಿದ್ದಾರೆ. ಇದರಿಂದ ಕುರಿ ಜಾನುವಾರು ಮೇಯಿಸಲು ಸ್ಥಳವಿಲ್ಲದಂತಾಗಿದೆ. ಸರ್ಕಾರಿ ಗೋಮಾಳ ಬಿಡಿಸಿ ಕೊಡಿ ಇಲ್ಲಾ ಉಗ್ರ ಹೋರಾಟ ಮಾಡುವುದಾಗಿ ರೈತ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ

ಮೈಸೂರು: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ ಮಾಡಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆಯಲಾಗಿದೆ. ನಂಜನಗೂಡು ತಾಲ್ಲೂಕು ಹಿರೀಕಾಟಿ ಗ್ರಾಮದಲ್ಲಿ ನಕಲಿ ಗೊಬ್ಬರ ತಯಾರಿಕಾ ಘಟಕ ನಡೆಸಲಾಗುತ್ತಿತ್ತು. ನಂಜನಗೂಡು ಹಾಗೂ ಮೈಸೂರು ಕೃಷಿ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ನೂರಾರು ಟನ್ ನಕಲಿ ರಸಗೊಬ್ಬರ ವಶಕ್ಕೆ ಪಡೆಯಲಾಗಿದೆ. ಜಮೀನು‌ ಮಾಲೀಕ‌ ಹಾಗೂ ಆರೋಪಿಗಳು ಪರಾರಿಯಾಗಿದ್ದು, ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಲಾಗಿದೆ. ಪ್ರತಿಷ್ಠಿತ ಕಂಪನಿಯ ಬ್ಯಾಗ್‌ಗಳಲ್ಲಿ ತುಂಬಿ ಆರೋಪಿಗಳು ಮಾರಾಟ ಮಾಡುತ್ತಿದ್ದರು. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:32 pm, Thu, 23 June 22

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು