AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಖಾತ್ರಿ ಕಾರ್ಡ್​​​​​ ಮಾಡಿಸಿ ಸತ್ತವರ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಪಿಡಿಒ ಅಮಾನತು

231 ಎಕರೆ ಗೋಮಾಳ್ ಜಮೀನನ್ನು ಉಳಿಸಲು ಕುರಿಗಳ ಸಹಿತ ತಾಲೂಕಾ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಾ ಕಚೇರಿಗೆ ಕುರಿಗಳೊಂದಿಗೆ ಮುತ್ತಿಗೆ ಹಾಕಿದರು.

ಉದ್ಯೋಗ ಖಾತ್ರಿ ಕಾರ್ಡ್​​​​​ ಮಾಡಿಸಿ ಸತ್ತವರ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಪಿಡಿಒ ಅಮಾನತು
PDO ಎ.ಟಿ.ನಾಗರಾಜ್
TV9 Web
| Edited By: |

Updated on:Jun 23, 2022 | 1:49 PM

Share

ದಾವಣಗೆರೆ: ಸತ್ತವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಕಾರ್ಡ್ (Employment Guarantee Card)​​​​​ ಮಾಡಿಸಿ ಲಕ್ಷಾಂತರ ರೂ. ವಂಚನೆ ಆರೋಪ ಹಿನ್ನೆಲೆ PDO ಎ.ಟಿ.ನಾಗರಾಜ್ ಸಸ್ಪೆಂಡ್​ ಮಾಡಿ, ಜಿ.ಪಂ. ಸಿಇಒ ಚನ್ನಪ್ಪ ಆದೇಶ ಹೊರಡಿಸಿದೆ. ಜಿಲ್ಲೆಯ ಜಗಳೂರು ತಾಲೂಕಿನ ಗ್ರಾಮಗಳಾದ ಅಣಬೂರ, ಹನಮಂತಾಪುರ ಗ್ರಾ.ಪಂ. ಪಿಡಿಒ ನಾಗರಾಜ್​ ಸತ್ತವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಕಾರ್ಡ್​ ಮಾಡಿಸಿ ಹಣ ಪಡೆಯುತ್ತಿದ್ದ. ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಸಾಮಗ್ರಿ ಖರೀದಿ ಮಾಡಿದ್ದು, 32 ಲಕ್ಷ ರೂಪಾಯಿಗೆ ಪಿಡಿಒ ನಾಗರಾಜ್ ಲೆಕ್ಕ ಕೊಟ್ಟಿಲ್ಲ. ಈ ಬಗ್ಗೆ ತನಿಖೆ ಮಾಡಿ ಆರೋಪ ಸಾಬೀತಾದ ಹಿನ್ನೆಲೆ ಅಮಾನತುಗೊಳಿಸಿದೆ.

ಗೋಮಾಳ ಜಮೀನು ಉಳಿಸುವಂತೆ ರೈತರಿಂದ ಪ್ರತಿಭಟನೆ

231 ಎಕರೆ ಗೋಮಾಳ್ ಜಮೀನನ್ನು ಉಳಿಸಲು ಕುರಿಗಳ ಸಹಿತ ತಾಲೂಕಾ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಾ ಕಚೇರಿಗೆ ಕುರಿಗಳೊಂದಿಗೆ ಮುತ್ತಿಗೆ ಹಾಕಿ, ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ರೈತರಿಂದ ವಿನೂತನ ಪ್ರತಿಭಟನೆ ಮಾಡಿದ್ದಾರೆ. ಗ್ರಾಮದ ಎಳು ಸರ್ವೇ ನಂಬರ್​ನಲ್ಲಿ ಸುಮಾರು 231 ಎರಕೆ ಜಮೀನು‌ ಗ್ರಾಮದ ಪ್ರಭಾವಿಗಳು‌ ಒತ್ತುವರಿ ಮಾಡಿದ್ದಾರೆ. ಇದರಿಂದ ಕುರಿ ಜಾನುವಾರು ಮೇಯಿಸಲು ಸ್ಥಳವಿಲ್ಲದಂತಾಗಿದೆ. ಸರ್ಕಾರಿ ಗೋಮಾಳ ಬಿಡಿಸಿ ಕೊಡಿ ಇಲ್ಲಾ ಉಗ್ರ ಹೋರಾಟ ಮಾಡುವುದಾಗಿ ರೈತ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ

ಮೈಸೂರು: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ ಮಾಡಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆಯಲಾಗಿದೆ. ನಂಜನಗೂಡು ತಾಲ್ಲೂಕು ಹಿರೀಕಾಟಿ ಗ್ರಾಮದಲ್ಲಿ ನಕಲಿ ಗೊಬ್ಬರ ತಯಾರಿಕಾ ಘಟಕ ನಡೆಸಲಾಗುತ್ತಿತ್ತು. ನಂಜನಗೂಡು ಹಾಗೂ ಮೈಸೂರು ಕೃಷಿ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ನೂರಾರು ಟನ್ ನಕಲಿ ರಸಗೊಬ್ಬರ ವಶಕ್ಕೆ ಪಡೆಯಲಾಗಿದೆ. ಜಮೀನು‌ ಮಾಲೀಕ‌ ಹಾಗೂ ಆರೋಪಿಗಳು ಪರಾರಿಯಾಗಿದ್ದು, ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಲಾಗಿದೆ. ಪ್ರತಿಷ್ಠಿತ ಕಂಪನಿಯ ಬ್ಯಾಗ್‌ಗಳಲ್ಲಿ ತುಂಬಿ ಆರೋಪಿಗಳು ಮಾರಾಟ ಮಾಡುತ್ತಿದ್ದರು. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:32 pm, Thu, 23 June 22

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?