AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ?

ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರೋರ್ವರ ಪುತ್ರ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧಿಸಲು ಬಂದಾಗ ಪೊಲೀಸರ ಮೇಲೆ ದಾಳಿ ನಡೆದಿದೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಗಲಾಟೆ ವಿಚಾರವಾಗಿ ಬಿಗುವಿನ ವಾತಾರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್​​ ಕೈಗೊಳ್ಳಲಾಗಿದೆ.

ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ 'ಕೈ' ಮುಖಂಡನ ಪುತ್ರನಿಂದ ನಡೀತಾ ಹಲ್ಲೆ?
ಆರೋಪಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jan 31, 2026 | 10:35 PM

Share

ದಾವಣಗೆರೆ, ಜನವರಿ 31: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಯುವಕರ ಮೇಲೆ ದಾಳಿ ಪ್ರಕರಣ ಸಂಬಂಧ ಬಂಧಿಸಲು ಬಂದ ಪೊಲೀಸರ ಮೇಲೆಯೇ ಕಾಂಗ್ರೆಸ್​​ ಮುಖಂಡ, ಸಚಿವರ ಆಪ್ತನ ಮಗ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರ ಹಸನ್ ಆರೋಪಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಆಪ್ತರೂ ಆಗಿರುವ ಅಯೂಬ್ ಪೈಲ್ವಾನ್ ಮನೆ ಮುಂದೆ ಭಾರಿ ಹೈಡ್ರಾಮಾ ನಡೆದಿದೆ. ಅಂತಿಮವಾಗಿ ಹಸನ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಎದುರು ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪು ಬಡಿದಾಡಿಕೊಂಡಿತ್ತು.ಗಲಾಟೆಯಲ್ಲಿ 6 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರು. ಯುವಕರ ಮೇಲೆ ದಾಳಿ ಮಾಡಿರೋದು ಅಯೂಬ್ ಪೈಲ್ವಾನ್ ಪುತ್ರರು ಎಂಬ ಕಾರಣಕ್ಕೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಬಡಾವಣೆ ಠಾಣೆ ಇನ್ಸ್​​ಪೆಕ್ಟರ್​​ ಗಾಯತ್ರಿ, ಕಾನ್ಸ್​ಟೇಬಲ್​​ಗಳಾದ ಕೆಂಚಪ್ಪ ಮತ್ತು ಹರೀಶ್ ಸೇರಿ ತಂಡ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಆರೋಪಿ ಹಸನ್, ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡಿರೋ ಪೊಲೀಸ್​​ ಸಿಬ್ಬಂದಿಗಳಾದ ಕೆಂಚಪ್ಪ ಮತ್ತು ಹರೀಶ್​​ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಗಲಾಟೆ ವಿಚಾರವಾಗಿ ಹಳೇ ದಾವಣಗೆರೆಯಲ್ಲಿ ಬಿಗುವಿನ ವಾತಾರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಇನ್ನು ನಗರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಲ್ಲಿ ಮೇಲಿಂದ ಮೇಲೆ ಸಚಿವರ ಆಪ್ತರ ಹೆಸರು ಕೇಳಿಬರುತ್ತಿದೆ. ಇತ್ತೀಚಿಗೆ ಡ್ರಗ್ಸ್ ಕೇಸ್​​ನಲ್ಲಿ ಶಾಮನೂರು ವೇದಮೂರ್ತಿ, ಅನ್ವರ್ ಪಾಷಾ ಜೈಲು ಸೇರಿದ್ದಾರೆ. ಅಕ್ಕಿ ಸಾಗಾಣಿಕೆಯಲ್ಲಿ ಜಮೀರ್ ಎಂಬಾತ ಸಿಕ್ಕಿ ಬಿದ್ದಿದ್ದ. ಈ ನಡುವೆ ಅಯೂಬ್ ಪೈಲ್ವಾನ್ ಪುತ್ರ ಹಾಡುಹಗಲೇ ಆಸ್ಪತ್ರೆ ಆವರಣದಲ್ಲಿ ಹೊಡೆದಾಟ ನಡೆಸಿದ್ದಾನೆ. ಜೊತೆಗೆ ಪೊಲೀಸರ ಮೇಲೆ ಹಲ್ಲೆಯ ಆರೋಪವೂ ಕೇಳಿಬಂದಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:23 pm, Sat, 31 January 26

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್