AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಿಡಿಗೇಡಿಗಳ‌ ಕಿತಾಪತಿ; ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಅಡಿಕೆ ಮರಗಳಿಗೆ ಬೆಂಕಿ

ದ್ವೇಷಕ್ಕೆ ಅಡಿಕೆ ಹಾಗೂ ಬಾಳೆ ಗಿಡಗಳು ಬೆಂಕಿಗಾಹುತಿಯಾದ ಘಟನೆ ದಾವಣಗೆರೆ(Davanagere) ತಾಲೂಕಿನ ಹುಣಸಡಕಟ್ಟೆ ಗ್ರಾಮದಲ್ಲಿ ನಡೆದಿದೆ. ಕಳೆದ ವರ್ಷ ಇದೇ ತೋಟದಿಂದ ಬರೊಬ್ಬರಿ ಎಳು‌ ಲಕ್ಷ ರೂಪಾಯಿ ಆದಾಯ ಬಂದಿತ್ತು. ಈ ವರ್ಷ ಬೆಂಕಿಗೆ ಬಲಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹೊಟ್ಟೆಕಿಚ್ಚಿನಿಂದ ಫಲಕ್ಕೆ ಬಂದ ಅಡಿಕೆ ಮರಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಶಂಕೆ ವ್ಯಕ್ತವಾಗಿದೆ.

ದಾವಣಗೆರೆ: ಕಿಡಿಗೇಡಿಗಳ‌ ಕಿತಾಪತಿ; ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಅಡಿಕೆ ಮರಗಳಿಗೆ ಬೆಂಕಿ
ದಾವಣಗೆರೆಯಲ್ಲಿ ಸಾವಿರಾರು ಅಡಿಕೆ ಮರಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 18, 2024 | 11:12 AM

Share

ದಾವಣಗೆರೆ, ಫೆ.18: ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ಬಾಳೆ ಗಿಡಗಳು ಬೆಂಕಿಗಾಹುತಿಯಾದ ಘಟನೆ ದಾವಣಗೆರೆ(Davanagere) ತಾಲೂಕಿನ ಹುಣಸಡಕಟ್ಟೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್​ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು,  1,300 ಅಡಿಕೆ ಹಾಗೂ 1,400 ಬಾಳೆ ಗಿಡಗಳು ಸುಟ್ಟು ಭಸ್ಮವಾಗಿದೆ. ರೈತನ ಕುಟುಂಬ ಗ್ರಾಮದಲ್ಲಿ ಇಲ್ಲದನ್ನ ತಿಳಿದ ಕಿಡಿಗೇಡಿಗಳು, ದ್ವೇಷದಿಂದ ಬೆಂಕಿ ಇಟ್ಟ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳೀಯರು ಸೇರಿ ಅರ್ಧ ಅಡಿಕೆ ಹಾಗೂ ಬಾಳೆ ತೋಟವನ್ನು ಬೆಂಕಿಯಿಂದ ಉಳಿಸಿದ್ದಾರೆ.

ಫಲಕ್ಕೆ ಬಂದ ಅಡಿಕೆ ಮರಗಳನ್ನ ಬೆಂಕಿ ಇಟ್ಟ ದುಷ್ಕರ್ಮಿಗಳು

ಇನ್ನು ಕಳೆದ ವರ್ಷ ಇದೇ ತೋಟದಿಂದ ಬರೊಬ್ಬರಿ ಎಳು‌ ಲಕ್ಷ ರೂಪಾಯಿ ಆದಾಯ ಬಂದಿತ್ತು. ಈ ವರ್ಷ ಬೆಂಕಿಗೆ ಬಲಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹೊಟ್ಟೆಕಿಚ್ಚಿನಿಂದ ಫಲಕ್ಕೆ ಬಂದ ಅಡಿಕೆ ಮರಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಶಂಕೆಯಿದ್ದು, ಈ ಕುರಿತು ರೈತ ವಿಶ್ವನಾಥ್​ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು‌ ನೀಡಿದ್ದು, ಪೊಲೀಸರು ತನಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ದ್ವೇಷಕ್ಕೆ ಬಲಿಯಾದ ಅಡಿಕೆ ಗಿಡಗಳು: ಹಗಲಿರುಳು ಬೆಳೆಸಿದ್ದ ಬೆಳೆ ಬೆಂಕಿಗಾಹುತಿ: ಕಂಗಾಲಾದ ರೈತ

ಹಸು ಮೇಲೆ ಚಿರತೆ ದಾಳಿ, ಹಸು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಾರ್ಪೆಹಳ್ಳಿಯಲ್ಲಿ ಚಿರತೆ ದಾಳಿಗೆ ಹಸು ಬಲಿಯಾದ ಘಟನೆ ನಡೆದಿದೆ. ಗೋಪಾಲಪ್ಪ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕಳೆದ ತಿಂಗಳಷ್ಟೇ ಹಸುವನ್ನ ಖರೀದಿಸಲಾಗಿತ್ತು. ತಡರಾತ್ರಿ ಕೊಟ್ಟಿಗೆಗೆ ನುಗಿದ್ದ ಚಿರತೆ ದಾಳಿಗೆ ಹಸು ಸಾವನ್ನಪ್ಪಿದೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದು, ಸ್ಥಳಕ್ಕೆ ಶಿರಾ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 am, Sun, 18 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ