AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಕೇಸ್​: ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿರುವ ಕುರುಹು ಪತ್ತೆ

ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕಣಕ್ಕೆ ಸಂಬಂಧಿಸಿದಂತೆ ಒಂದು ಸ್ಫೋಟಕ ಕುರುಹು ಸಿಕ್ಕಿದೆ,

ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಕೇಸ್​: ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿರುವ ಕುರುಹು ಪತ್ತೆ
MP Renukacharya Son chandrashekhar
TV9 Web
| Edited By: |

Updated on:Nov 03, 2022 | 4:47 PM

Share

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ಬಳಿಕ ಕುರುಹು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್​​ ಇದ್ದ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ತುಂಗಾ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ಹಾಗೂ ಪೊಲೀಸರು ಸೇರಿದಂತೆ ನೂರಾರು ಜನ ಕಾಲವೆ ಬಳಿ ಜಮಾಯಿಸಿದ್ದಾರೆ.

ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಪಾಸ್ ಆಗಿತ್ತು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸುರಹೊನ್ನೆ ಬಳಿ ಪಾಸ್ ಆಗೋ ವಿಡಿಯೋ ಮಾತ್ರ ಲಭ್ಯವಾಗಿದೆ. ಆದರೆ ಸುರಹೊನ್ನೆಯಿಂದ ಹೊನ್ನಾಳಿಗೆ ಬಂದ ಬಗ್ಗೆ ಸುಳಿವಿಲ್ಲ. ಸುರಹೊನ್ನೆಯಿಂದ ಹೊನ್ನಾಳಿಗೆ ಬಂದ ಬಗ್ಗೆ ಯಾವುದೇ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿಲ್ಲ. ಇದೀಗ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವುದು ತಿಳಿದುಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಗ ಚಂದ್ರಶೇಖರ್​ಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ: ಸೂಕ್ಷ್ಮವಾಗಿ ಬಹುಮಾನ ನೀಡುವೆ ಎಂದ ರೇಣುಕಾಚಾರ್ಯ

ಭಾನುವಾರದಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಭಾನುವಾರ ರಾತ್ರಿ 11.30 ರಿಂದ ನಾಪತ್ತೆಯಾಗಿದ್ದು ಇದುವರೆಗೂ ಕೂಡ ಯಾವುದೇ ಸುಳಿವು ಸಿಗುತ್ತಿಲ್ಲ.. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದ. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ‌. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಇಲ್ಲಿಯವರೆಗೆ ಸಿಗ್ನಲ್ ಟ್ರೇಸ್ ಆಗಿಲ್ಲ. ಅಲ್ಲದೆ ಶಿವಮೊಗ್ಗ ದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ಸಿಸಿ ಕ್ಯಾಮರಾ ಪುಟೇಜ್ ಮಾತ್ರ ಸಿಕ್ಕಿದೆ.. ಆದರೆ ಸುರಹೊನ್ನೆಯಿಂದ ಹೊನ್ನಾಳಿ ಗೆ ಬಂದ ಮಾಹಿತಿ ಸಿಗುತ್ತಿಲ್ಲ.. ಆದರೆ ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್ ನಲ್ಲಿ ಸ್ವಿಚ್ ಆಫ್ ಆಗಿದೆ..

ಇನ್ನು ಶಾಸಕ ರೇಣುಕಾಚಾರ್ಯ ಮಾತ್ರ ಮಗನನ್ನು ನೆನೆದು ಗಳಗಳನೆ ಅಳುತ್ತಿದ್ದಾರೆ.. ಬೆಳಗ್ಗೆಯಿಂದ ರೇಣುಕಾಚಾರ್ಯ ಆಪ್ತರು ಸಂಬಂಧಿಕರು ಹಾಗೂ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಧೈರ್ಯವನ್ನು ತುಂಬುತ್ತಿದ್ದಾರೆ. ಅಲ್ಲದೆ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಈಶ್ವರಪ್ಪ ಸೇರಿದಂತೆ ಹಲವು ಮುಖಂಡರು ಕರೆ ಮಾಡಿ ದೈರ್ಯ ತುಂಬಿದ್ದಾರೆ.

Published On - 4:37 pm, Thu, 3 November 22

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್