AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ

ಚರಂಡಿ ಸ್ವಚ್ಚಗೊಳಿಸುವಾಗ ವಿಷಗಾಳಿ ಸೇವಿಸಿ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂ ತಲಾ ಒಂದು ಲಕ್ಷ ಪರಿಹಾರ ಚೆಕ್​ನ್ನು ಜಗಳೂರು ಶಾಸಕ ಬಿ‌.ದೇವೇಂದ್ರಪ್ಪ ಅವರು ನೀಡಿದ್ದಾರೆ.

ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ
ಚೆಕ್​ ವಿತರಣೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 18, 2023 | 11:10 AM

Share

ದಾವಣಗೆರೆ: ಜಗಳೂರು(Jagaluru)ತಾಲೂಕಿನ ಬಸವನ‌ಕೋಟೆ ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚರಂಡಿ ಸ್ವಚ್ಚಗೊಳಿಸುವಾಗ ವಿಷಗಾಳಿ ಸೇವಿಸಿ ಸತ್ಯಪ್ಪ(45), ಮೈಲಪ್ಪ(49) ಎಂಬ ಇಬ್ಬರು ಕಾರ್ಮಿಕರರು(Workers) ಸಾವನ್ನಪ್ಪಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಇದೀಗ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ತಲಾ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ ಮಾಡಲಾಗಿದೆ. ಹೌದು ಮೃತರ ಮನೆಗಳಿಗೆ ತೆರಳಿದ ಜಗಳೂರು ಶಾಸಕ ಬಿ‌.ದೇವೇಂದ್ರಪ್ಪ ಅವರು ಇದೀಗ ಪರಿಹಾರದ ಚೆಕ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಈಗಾಗಲೇ ಗ್ರಾಮ ಪಂ‌ಚಾಯತಿಯಿಂದ ಮೃತರ ಕುಟುಂಬಗಳಿಗೆ ಸಹಾಯ ನೀಡಲಾಗಿದೆ. ಬರುವ ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಆ ಕುಟುಂಬಗಳಿಗೆ ಕಲ್ಪಿಸುವುದಾಗಿ ಶಾಸಕ ದೇವೇಂದ್ರಪ್ಪ ಭರವಸೆ ನೀಡಿದ್ದಾರೆ.

ಘಟನೆ ವಿವರ

ಮಾರ್ಚ್​ 21ರಂದು ಮೃತ ಪೌರ ಕಾರ್ಮಿಕರಿಗೆ ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ ಪಂಚಾಯತಿ ಪಿಡಿಒ ಶಶಿಧರ್‌ ಪಾಟೀಲ್ ಎಂಬುವವರು ಚರಂಡಿ ಸ್ವಚ್ಛಗೊಳಿಸಲು ಆದೇಶ ನೀಡಿದ್ದರು. ಅದರಂತೆ ಹಲವು ದಿನಗಳಿಂದ ತುಂಬಿದ್ದ ಚರಂಡಿಯ ಸ್ವಚ್ಚತೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಕಾರ್ಮಿಕರು ಮುಂದಾಗಿದ್ದರು. ಹೀಗೆ ಚರಂಡಿ ಸ್ವಚ್ಚಗೊಳಿಸುವಾಗ ವಿಷ ಗಾಳಿ ಸೇವಿಸಿ ಅಸ್ವಸ್ಥರಾಗಿದ್ದು, ಕೂಡಲೇ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು‌ ಪೌರಕಾರ್ಮಿಕರು ಸಾವನ್ನಪ್ಪಿದ್ದರು. ಇಬ್ಬರ ಕುಟುಂಬಗಳು ಅನಾಥವಾಗಿತ್ತು

ಇದನ್ನೂ ಓದಿ:ದಾವಣಗೆರೆ: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ, ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕ ಸಾವು

ಈ ರ್ದುಘಟನೆಯಿಂದ ಮನೆಯವರು ಆಘಾತಕ್ಕೀಡಾಗಿದ್ದರು. ಅಧಿಕಾರಿಗಳು ಹೇಳಿದ್ದ ಕೆಲಸ ಮಾಡಲು ಹೋಗಿ ಅಮಾಯಕ ಎರಡು ಜೀವ ಬಲಿಯಾಗಿತ್ತು. ಹಲವು ದಿನಗಳಿಂದ ಚರಂಡಿಯಲ್ಲಿ ಸರಾಗವಾಗಿ ನೀರು ಮುಂದೆ ಹರಿದುಹೋಗದ ಕಾರಣ ಅಪಾರ ಪ್ರಮಾಣದ ತ್ಯಾಜ್ಯ ಕಟ್ಟಿಕೊಂಡು ಕೊಳೆತಿದ್ದು, ಇದರಿಂದ ವಿಷಕಾರಿ ರಾಸಾಯನಿಕ ಉತ್ಪತ್ತಿಯಾಗಿತ್ತು. ತೆರೆದ ಚರಂಡಿಯಲ್ಲಿ ಇಳಿದಿದ್ದ ಕಾರ್ಮಿಕರು ತಾಸುಗಟ್ಟಲೆ ಬಗ್ಗಿ ತ್ಯಾಜ್ಯ ಹೊರ ತೆಗೆಯುವ ಸಮಯದಲ್ಲಿ ವಿಷ ಗಾಳಿ ಸೇವಿಸಿದ ಇಬ್ಬರೂ ಅಸ್ವಸ್ಥರಾಗಿ, ಸಾವನ್ನಪ್ಪಿದ್ದರು. ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 18 July 23

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು