AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಲಕ್ಷ ಲಕ್ಷ ಗೋಲ್ ಮಾಲ್; ಪಿಡಿಓ ವಿರುದ್ಧ ಪೊಲೀಸ್ ಠಾಣೆಗೆ ಮೇಲಾಧಿಕಾರಿಯಿಂದ ದೂರು

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಪಂ ಪಿಡಿಓ ಟಿ. ಸಿದ್ದಪ್ಪ ಅವರ ವಿರುದ್ಧ ಹಣ ಅಕ್ರಮ ಆರೋಪ ಕೇಳಿ ಬಂದಿದೆ. ಈ ಹಿಂದೆ ಜಗಳೂರು ತಾಲೂಕಿನ ಬಿಳಿಚೋಡು ಹಾಗೂ ಬಸವನಕೋಟೆ ಗ್ರಾ.ಪಂ ಕಾರ್ಯದರ್ಶಿ ಇದ್ದಾಗ 27 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಈಗನ ಪಿಡಿಓಗಳು ದೂರು ನೀಡಿದ್ದಾರೆ.

ದಾವಣಗೆರೆಯಲ್ಲಿ ಲಕ್ಷ ಲಕ್ಷ ಗೋಲ್ ಮಾಲ್; ಪಿಡಿಓ ವಿರುದ್ಧ ಪೊಲೀಸ್ ಠಾಣೆಗೆ ಮೇಲಾಧಿಕಾರಿಯಿಂದ ದೂರು
ಪಿಡಿಓ ಟಿ. ಸಿದ್ದಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 09, 2024 | 10:10 AM

Share

ದಾವಣಗೆರೆ, ಅ.09: ಆತ ಮಹಾ ಪ್ರಚಂಡ ಅಧಿಕಾರಿ. ಯಾವುದೇ ಗ್ರಾ.ಪಂನಲ್ಲಿ ಅಧಿಕಾರ ನಡೆಸಲಿ. ಅಲ್ಲೊಂದು ಯಡವಟ್ಟು ಮಾಡಿಯೇ ಹೋಗುವುದು ಸಂಪ್ರದಾಯ ಆಗಿದೆ. ಈತನ ಕಾಟಕ್ಕೆ ಬೇಸತ್ತು ಆ ಪಂಚಾಯತ್​ನಿಂದ ಈ‌ ಪಂಚಾಯತ್. ಈ ಪಂಚಾಯತ್​ನಿಂದ ಆ ಪಂಚಾಯತ್​ಗೆ ವರ್ಗಾವಣೆ ಮಾಡುತ್ತಲೇ ಇದ್ದಾರೆ. ಆದರೆ ಆತ ತನ್ನ ಚಾಳಿ ಮಾತ್ರ ಬದಲಾಯಿಸುತ್ತಿಲ್ಲ. ಇದೀಗ ಈತನ ವಿರುದ್ಧ ಲಕ್ಷ ಲಕ್ಷ ಗೋಲ್ ಮಾಲ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇವರು ಮಾಡಿದ ಗೋಲ್ ಮಾಲ್ ಬಗ್ಗೆ ಇಲಾಖೆ ತನಿಖೆ ಮಾಡಿ ವರದಿ ಪಡೆದು‌ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ.

ಹಾಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಪಂ ಪಿಡಿಓ ಟಿ. ಸಿದ್ದಪ್ಪ ಈ ಗೋಲ್ ಮಾಲ್​ನ ರೂವಾರಿ. ಇವರು ಅಧ್ಯಕ್ಷರ ಸಹಿ ತಾನೇ ಮಾಡಿ ತಮಗೆ ಬೇಕಾದ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಿದ್ದಾರೆ. ಆದರೆ ಈ ಹಣವನ್ನು ಗ್ರಾ.ಪಂ ಪಿಡಿಓ ಸಿದ್ದಪ್ಪ ನುಂಗಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ದಾವಣಗೆರೆ: ಸ್ನೇಹಿತನ ಜೊತೆ ಸೇರಿ ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ; ಸಿಕ್ಕಿಬಿದ್ದಿದ್ದು ಹೇಗೆ?

ದೊಣ್ಣೆಹಳ್ಳಿ ಪಂಚಾಯಿತ್ ಪಿಡಿಓ ಆಗಿರುವ ಟಿ.ಸಿದ್ದಪ್ಪ ಈ ಹಿಂದೆ ಜಗಳೂರು ತಾಲೂಕಿನ ಬಿಳಿಚೋಡು ಹಾಗೂ ಬಸವನಕೋಟೆ ಗ್ರಾ.ಪಂ ಕಾರ್ಯದರ್ಶಿ ಇದ್ದಾಗ 27 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಿನ ಬಿಳಿಚೋಡು ಹಾಗೂ ಬಸವನಕೋಟೆ ಪಿಡಿಓಗಳು ವಂಚನೆ ಬಗ್ಗೆ ವರದಿ ನೀಡಿದ್ದಾರೆ. ಪಿಡಿಓ ಟಿ. ಸಿದ್ದಪ್ಪ ವಿರುದ್ಧ ಬಿಳಿಚೋಡು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಜಗಳೂರು ತಾಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಕೆಂಚಪ್ಪ ಅವರಿಗೆ ಬಿಳಿಚೋಡು ಗ್ರಾ.ಪಂ ನಲ್ಲಿ ಕೆರೆ ಅಭಿವೃದ್ಧಿಗೆ 2.84 ಲಕ್ಷ ಹಣ ಬಂದಿತ್ತು. ಇದನ್ನ ಬೇರೆ ಕಾಮಗಾರಿ ಹೆಸರಿಗೆ ಹಾಕಿ ಟಿ.ಸಿದ್ಧಪ್ಪ ಹಣ ದುರುಪಯೋಗ ಮಾಡಿಕೊಂಡಿದ್ದಾರೆ.

ಬಸವನಕೋಟೆ ಗ್ರಾ.ಪಂನಲ್ಲಿ ಅಧ್ಯಕ್ಷರ ಅಪ್ಪಣೆ ಇಲ್ಲದೇ ಲಕ್ಷಾಂತರ ರೂಪಾಯಿ ಗುತ್ತಿಗೆದಾರರಿಗೆ ಪಾವತಿ ಮಾಡಿದ್ದಾರೆ. ಸದ್ಯ ತನಿಖೆ ಮಾಡಿ ವರದಿ ನೀಡಿದ ಪ್ರಕಾರ ಒಟ್ಟು 27.51 ಲಕ್ಷ ರೂಪಾಯಿ ದುರುಪಯೋಗ ಪಡೆಸಿಕೊಂಡ ಆರೋಪ ಇವರ ಮೇಲಿದೆ. ಈ ಹಿಂದೆ ಕೂಡಾ ಇವರ ಮೇಲೆ ಹತ್ತಾರು ಆರೋಪಗಳು ಕೇಳಿ ಬಂದಿದ್ದವು.‌ ಆದರೆ ಅಧಿಕೃತವಾಗಿ ದೂರು ದಾಖಲಾಗಿರಲಿಲ್ಲ. ಈಗ ಪ್ರತಿ ಗ್ರಾಮ ಪಂಚಾಯತಿ ಲೆಕ್ಕ ಪರಿಶೀಲನೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಇದರಿಂದ ಸಿದ್ದಪ್ಪ ಮಾಡಿದ ಕರ್ಮಕಾಂಡಗಳು ಹೊರ ಬರುತ್ತಿವೆ. ಇತನ ವಿರುದ್ಧ ಇಲಾಖೆ ತನಿಖೆ ಕೂಡಾ ಶುರುವಾಗಿದೆ. ಸದ್ಯ ಪೊಲೀಸ್ ಠಾಣೆಗೆ ದೂರು ಮಾತ್ರ ದಾಖಲಾಗಿದೆ.‌ ಇನ್ನೂ ಎಫ್​ಐಆರ್ ದಾಖಲಾಗಿ ಪೊಲೀಸರು ತನಿಖೆ ಆರಂಭಿಸಿದ್ರೆ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವುದು ಖಚಿತ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?