AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಪೆಟ್ರೋಲ್ ಬೆಲೆ ಹೆಚ್ಚಳದ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ, ನಿಮಗೆ ಪೆಟ್ರೋಲ್ ಬೇಕಾದರೆ ನಾನೇ ಕೊಡಿಸುವೆ: ಸಂಸದ ಜಿ ಎಂ ಸಿದ್ದೇಶ್ವರ್

ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ ಎಂದು ಅವರು ಸಹ ಅವರು ಹೇಳಿದ್ದಾರೆ.

ಪದೇಪದೇ ಪೆಟ್ರೋಲ್ ಬೆಲೆ ಹೆಚ್ಚಳದ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ, ನಿಮಗೆ ಪೆಟ್ರೋಲ್ ಬೇಕಾದರೆ ನಾನೇ ಕೊಡಿಸುವೆ: ಸಂಸದ ಜಿ ಎಂ ಸಿದ್ದೇಶ್ವರ್
ಸಂಸದ ಜಿ ಎಂ ಸಿದ್ದೇಶ್ವರ್
TV9 Web
| Updated By: guruganesh bhat|

Updated on:Aug 08, 2021 | 5:51 PM

Share

ದಾವಣಗೆರೆ: ಪದೇಪದೆ ಪೆಟ್ರೋಲ್‌ ದರ ಏರಿಕೆಯ ಬಗ್ಗೆ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಜಿ.ಎಂ.ಸಿದ್ದೇಶ್ವರ್ ಮಾಧ್ಯಮದವರಿಗೆ ಕೈಮುಗಿದು ಮನವಿ ಮಾಡಿದ್ದಾರೆ. ಪೆಟ್ರೋಲ್ ಬೆಲೆ ಅಂತರಾಷ್ಟ್ರೀಯ ವಿಚಾರ. ಸಾರ್ವಜನಿಕರು ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಆಕ್ರೋಶಗೊಂಡಿಲ್ಲ. ಪೆಟ್ರೋಲ್ ಬೆಲೆ ಹೆಚ್ಚಳದಿಂದ (Petrol Price Hike) ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ. ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಬಹುದು ಎಂದು ಅವರು ವಿನಂತಿಯನ್ನೂ ಸಹ ಮಾಡಿಕೊಂಡಿದ್ದಾರೆ.

ಇತ್ತೀಚಿಗೆ ಪೆಟ್ರೋಲ್ ಬೆಲೆ ಹೆಚ್ಚುತ್ತಿರುವ ಕುರಿತು ಬಿಜೆಪಿ ಸಂಸದರಾದ ಅವರಿಗೆ ಸಹಜವಾಗಿಯೇ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಆದರೆ ಪೆಟ್ರೋಲ್ ಬೆಲೆ ಹೆಚ್ಚಳದ ಕುರಿತು ಉತ್ತರಿಸುವುದು ಪೇಚಿಗೀಡು ಮಾಡಬಹುದು ಅಂತನಿಸಿ ಸಂಸದ ಜಿ ಎಂ ಸಿದ್ದೇಶ್ವರ ಅವರು ನುಣುಚಿಕೊಳ್ಳಲು ಯತ್ನಿಸಿದರು. ಜತೆಗೆ ಪತ್ರಕರ್ತರಿಗೆ ಪೆಟ್ರೋಲ್ ಅಗತ್ಯವಿದ್ದಲ್ಲಿ ತಾವೇ ಸ್ವತಃ ಕೊಡಿಸುವುದಾಗಿಯೂ ಹೇಳಿದರು.

ಕಾಂಗ್ರೆಸ್ ಸೇರಿದಂತೆ ಕೆಲ ಪಕ್ಷಗಳು ಸೇರಿ ಸಂಸತ್ ಅಧಿವೇಶನ ನಡೆಸಲು ಬಿಡುತ್ತಿಲ್ಲ. ಸಂಸತ್ ಅಧಿವೇಶನದಲ್ಲಿ ದೇಶದ ವಿಚಾರ ಚರ್ಚೆ ಆಗಬೇಕು.  ಆದರೆ ವಿಪಕ್ಷಗಳು ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಕೃಷಿ ಕಾಯ್ದೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಆಗಲಿ. ಬೇಕಿದ್ದ ಕೃಷಿ ಕಾಯ್ದೆಗಳ ತಿದ್ದುಪಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಲ ಬದಲಾವಣೆ ತರಬಹುದು‌. ಆದರೆ ಚರ್ಚೆಗೆ ಅವಕಾಶವೇ ಇಲ್ಲದಂತಾಗಿದೆ ಎಂದು ಸಹ ಸಂಸದ ಜಿ ಎಂ ಸಿದ್ದೇಶ್ವರ್ ಹೇಳಿದರು.

ಇದನ್ನೂ ಓದಿ:  

Petrol Price Today: ಸತತ 22 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

ಪೆಟ್ರೋಲ್​ಗೆ ಹಣ ಸುರಿದು ಕಂಗಾಲಾಗುತ್ತಿರುವವರಿಗೆ ಸಿಹಿ ಸುದ್ದಿ; ಓಲಾ ಇ-ಸ್ಕೂಟರ್ ಆಗಸ್ಟ್ 15 ರಂದು ಲಾಂಚ್ ಆಗುತ್ತಿದೆ!

(MP GM Siddeshwar says Dont question me on petrol price hike I will give you petrol if you want)

Published On - 5:16 pm, Sun, 8 August 21

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?