AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬೆಲೆ ಏರಿಕೆಯಾದ ತಕ್ಷಣ ವೈಭವೀಕರಣ ಮಾಡುವುದು ಬಿಡಿ; ಅಡುಗೆ ಎಣ್ಣೆ ದರದ ಬಗ್ಗೆ ಸಂಸದ ಜಿಎಂ ಸಿದ್ದೇಶ್ವರ್ ಹೇಳಿಕೆ

ಅಡುಗೆ ಎಣ್ಣೆಯ ಬೆಲೆ ಏರಿಕೆಯಾದ ತಕ್ಷಣ ವೈಭವೀಕರಣ ಮಾಡುವುದು ಬಿಡಬೇಕು. ಕೆಲಕಾಲದ ನಂತರ ಬೆಲೆ ಇಳಿಕೆಯಾಗುತ್ತದೆ ಎಂದು ಸಂಸದ ಜಿಎಂ ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ. ಇದೀಗ ಅವರ ಮಾತು ಚರ್ಚೆ ಹುಟ್ಟುಹಾಕಿದೆ.

ದಾವಣಗೆರೆ: ಬೆಲೆ ಏರಿಕೆಯಾದ ತಕ್ಷಣ ವೈಭವೀಕರಣ ಮಾಡುವುದು ಬಿಡಿ; ಅಡುಗೆ ಎಣ್ಣೆ ದರದ ಬಗ್ಗೆ ಸಂಸದ ಜಿಎಂ ಸಿದ್ದೇಶ್ವರ್ ಹೇಳಿಕೆ
ಸಂಸದ ಜಿಎಂ ಸಿದ್ದೇಶ್ವರ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 05, 2021 | 3:37 PM

Share

ದಾವಣಗೆರೆ: ಅಡುಗೆ ಎಣ್ಣೆ ದರದ ಬಗ್ಗೆ ಸಂಸದ ಜಿಎಂ ಸಿದ್ದೇಶ್ವರ್ ಮಾತನಾಡಿದ್ದು, ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಅಡುಗೆ ಎಣ್ಣೆಯ ಬೆಲೆ ಏರಿಕೆ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘‘ನನಗೂ ಗೊತ್ತಿದೆ. ನಮ್ಮನೆಯಲ್ಲಿ ಸಹ ಅಡಿಗೆ‌ ಮಾಡುತ್ತೇವೆ. ಕಾದು ನೋಡಿ. ಇಷ್ಟರಲ್ಲಿಯೇ ಅಡಿಗೆ ಎಣ್ಣೆ ಬೆಲೆ ಸಹ ಕಡಿಮೆ ಆಗುತ್ತದೆ. ಬೆಲೆ ಹೆಚ್ಚಾದ ತಕ್ಷಣ ವೈಭವೀಕರಣ ಮಾಡುವುದು ಬಿಡಿ’’ ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ. ಅಡುಗೆ ಎಣ್ಣೆ ದರ ಸಹ ಕಡಿಮೆ ಆಗುತ್ತೆ ಕಾದು ನೋಡಿ ಎಂದು ಅವರು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಡ್ಡಿ ಸಮೇತ ತಿರುಗೇಟು: ಕೆಎಸ್ ಈಶ್ವರಪ್ಪ ಶಿವಮೊಗ್ಗ: ಹಾನಗಲ್​ ಉಪಚುನಾವಣೆಯಲ್ಲಿ ಗೆದ್ದು ಹಾರಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತಿರುಗೇಟು ನೀಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರ ಹೇಳಿಕೆಯ ಕುರಿತಂತೆ ಅವರು ಶಿವಮೊಗ್ಗದಲ್ಲಿ ಪ್ರತಿ್ಕರಿಯೆ ನೀಡಿದ್ದಾರೆ. ಸಿಂದಗಿ ಸೋಲಿನ ಕುರಿತು ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಆದರೆ ಹಾನಗಲ್ ಗೆಲುವಿನ ಬಗ್ಗೆ ಹಾರಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಪೆಟ್ರೋಲ್​, ಡೀಸೆಲ್ ಬೆಲೆ ಇಳಿಕೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಕಾಂಗ್ರೆಸ್​ ಪಕ್ಷದವರು ಮಾತ್ರ ಟೀಕೆ ಮಾಡುತ್ತಿದ್ದಾರೆ ಎಂದೂ ಅವರು ಕಿಡಿಕಾರಿದ್ದಾರೆ.

ಇದಕ್ಕೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಬೆಲೆ ಇಳಿಕೆ ಮೋದಿ ಕೊಟ್ಟ ದೀಪಾವಳಿ ಕೊಡುಗೆಯಲ್ಲ. ಇದು ದೇಶಾದ್ಯಂತ ನಡೆದ ಬೈಎಲೆಕ್ಷನ್ ಕೊಡುಗೆಯಾಗಿದೆ. ಬಿಜೆಪಿ ಸೋಲಿಸಿದರೆ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗುತ್ತೆ. ಇಂತಹ ಪಾಠ ಹೇಳಿಕೊಟ್ಟ ಪ್ರಧಾನಿ ಮೋದಿಗೆ ಧನ್ಯವಾದ ಎಂದು ಟಾಂಗ್ ನೀಡಿದ್ದರು.

ಇದನ್ನೂ ಓದಿ:

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 21 ಮಂದಿ ಸಾವು: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಯಾರಾದರೂ ಕಾಣೆಯಾದರೆ, ಕರೆಗೆ ಸ್ಪಂದಿಸದಿದ್ದರೆ ತಕ್ಷಣ 112ಗೆ ಮಾಹಿತಿ ನೀಡಿ; ಡಿಸಿಪಿ ಸಂಜೀವ ಪಾಟೀಲ್

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ