AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಗ್ಗೆ ಕೇಳಿ ನನ್ನನ್ನು ಟ್ರೋಲ್ ಮಾಡಬೇಡಿ: ಸಂಸದ ಜಿ ಎಂ ಸಿದ್ದೇಶ್ವರ ಸಿಡಿಮಿಡಿ

ಪದೇಪದೆ ಪೆಟ್ರೋಲ್ ಬಗ್ಗೆ ಕೇಳಿ ಟ್ರೋಲ್ ಮಾಡಬೇಡಿ. ನಮ್ಮ ಸಾಧನೆಗಳ ಬಗ್ಗೆ ಕೇಳಿ ಎಂದು ಅವರು ಮನವಿಯನ್ನೂ ಮಾಡಿದ್ದಾರೆ.

ಪೆಟ್ರೋಲ್ ಬಗ್ಗೆ ಕೇಳಿ ನನ್ನನ್ನು ಟ್ರೋಲ್ ಮಾಡಬೇಡಿ: ಸಂಸದ ಜಿ ಎಂ ಸಿದ್ದೇಶ್ವರ ಸಿಡಿಮಿಡಿ
ಜಿ ಎಂ ಸಿದ್ದೇಶ್ವರ
TV9 Web
| Updated By: guruganesh bhat|

Updated on: Sep 17, 2021 | 7:10 PM

Share

ದಾವಣಗೆರೆ: ಪೆಟ್ರೋಲ್ ಬಗ್ಗೆ ಕೇಳಿ ಕೇಳಿ ನನ್ನ ಟ್ರೋಲ್ ಮಾಡಬೇಡಿ ಎಂದು ದಾವಣಗೆರೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಸಿಡಿಮಿಡಿಗೊಂಡಿದ್ದಾರೆ. ಹಣಕಾಸು ಸಚಿವರ ಜಿಎಸ್ಟಿ ಸಭೆ ನನಗೆ ಗೊತ್ತೇ ಇಲ್ಲ. ಅದರಲ್ಲೂ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ತರುವುದು ಗೊತ್ತಿಲ್ಲ. ಎಲ್ಲಾ ರಾಜ್ಯಗಳು ಒಪ್ಪಿದರೆ ಈ ಕೆಲಸ ಆಗಬಹುದು. ಆದರೆ ಕೊವಿಡ್ ಇರುವುದರಿಂದ ಈ ಕೆಲಸ ಅಸಾಧ್ಯ. ಪದೇಪದೆ ಪೆಟ್ರೋಲ್ ಬಗ್ಗೆ ಕೇಳಿ ಟ್ರೋಲ್ ಮಾಡಬೇಡಿ. ನಮ್ಮ ಸಾಧನೆಗಳ ಬಗ್ಗೆ ಕೇಳಿ ಎಂದು ಅವರು ಮನವಿಯನ್ನೂ ಮಾಡಿದ್ದಾರೆ.

ಈಹಿಂದೆ ಪೆಟ್ರೋಲ್ ಕೊಡಿಸುವುದಾಗಿ ತಿಳಿಸಿದ್ದ ಸಂಸದ ಪದೇಪದೆ ಪೆಟ್ರೋಲ್‌ ದರ ಏರಿಕೆಯ ಬಗ್ಗೆ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಜಿ.ಎಂ.ಸಿದ್ದೇಶ್ವರ್ ಆಗಸ್ಟ್​ 8ರಂದು ಮಾಧ್ಯಮದವರಿಗೆ ಕೈಮುಗಿದು ಮನವಿ ಮಾಡಿದ್ದರು. ಪೆಟ್ರೋಲ್ ಬೆಲೆ ಅಂತರಾಷ್ಟ್ರೀಯ ವಿಚಾರ. ಸಾರ್ವಜನಿಕರು ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಆಕ್ರೋಶಗೊಂಡಿಲ್ಲ. ಪೆಟ್ರೋಲ್ ಬೆಲೆ ಹೆಚ್ಚಳದಿಂದ (Petrol Price Hike) ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ. ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಬಹುದು ಎಂದು ಅವರು ವಿನಂತಿಯನ್ನೂ ಸಹ ಮಾಡಿಕೊಂಡಿದ್ದರು.

ಇತ್ತೀಚಿಗೆ ಪೆಟ್ರೋಲ್ ಬೆಲೆ ಹೆಚ್ಚುತ್ತಿರುವ ಕುರಿತು ಬಿಜೆಪಿ ಸಂಸದರಾದ ಅವರಿಗೆ ಸಹಜವಾಗಿಯೇ ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಆದರೆ ಪೆಟ್ರೋಲ್ ಬೆಲೆ ಹೆಚ್ಚಳದ ಕುರಿತು ಉತ್ತರಿಸುವುದು ಪೇಚಿಗೀಡು ಮಾಡಬಹುದು ಅಂತನಿಸಿ ಸಂಸದ ಜಿ ಎಂ ಸಿದ್ದೇಶ್ವರ ಅವರು ನುಣುಚಿಕೊಳ್ಳಲು ಯತ್ನಿಸಿದರು. ಜತೆಗೆ ಪತ್ರಕರ್ತರಿಗೆ ಪೆಟ್ರೋಲ್ ಅಗತ್ಯವಿದ್ದಲ್ಲಿ ತಾವೇ ಸ್ವತಃ ಕೊಡಿಸುವುದಾಗಿಯೂ ಹೇಳಿದ್ದರು.

ಕಾಂಗ್ರೆಸ್ ಸೇರಿದಂತೆ ಕೆಲ ಪಕ್ಷಗಳು ಸೇರಿ ಸಂಸತ್ ಅಧಿವೇಶನ ನಡೆಸಲು ಬಿಡುತ್ತಿಲ್ಲ. ಸಂಸತ್ ಅಧಿವೇಶನದಲ್ಲಿ ದೇಶದ ವಿಚಾರ ಚರ್ಚೆ ಆಗಬೇಕು.  ಆದರೆ ವಿಪಕ್ಷಗಳು ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಕೃಷಿ ಕಾಯ್ದೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಆಗಲಿ. ಬೇಕಿದ್ದ ಕೃಷಿ ಕಾಯ್ದೆಗಳ ತಿದ್ದುಪಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಲ ಬದಲಾವಣೆ ತರಬಹುದು‌. ಆದರೆ ಚರ್ಚೆಗೆ ಅವಕಾಶವೇ ಇಲ್ಲದಂತಾಗಿದೆ ಎಂದು ಸಹ ಸಂಸದ ಜಿ ಎಂ ಸಿದ್ದೇಶ್ವರ್ ಹೇಳಿದ್ದರು.

ಇದನ್ನೂ ಓದಿ:

ನನ್ನ ಮನವಿಗೆ ಓಗೊಟ್ಟು ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸಿದೆ: ಸಂಸದ ಜಿ ಎಂ ಸಿದ್ದೇಶ್ವರ

Mount Everest Climbing: ಮೌಂಟ್ ಎವರೆಸ್ಟ್ ಪರ್ವತಾ ರೋಹಣಕ್ಕೆ ದಾವಣಗೆರೆ ಯುವಕ ಆಯ್ಕೆ, ಹಣಕಾಸು ನೆರವಿಗೆ ಮನವಿ

(MP GM Siddeshwara requested do not ask about Petrol and do not troll him)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ