AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರೆ ಹಿಡಿದು ಮಣ್ಣು ಅಗೆದ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರಿಂದ ಹೂ ಹಾರ -ಹೂ ಮಳೆ

ಕಾರ್ಮಿಕರ ಒಡಗೂಡಿ ಹಾರೆ ಹಿಡಿದು ಮಣ್ಣು ಅಗೆದ ರೇಣುಕಾಚಾರ್ಯ ಕೂಲಿಯಾಳುಗಳಿಗೆ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಉದ್ಯೋಗ ಖಾತ್ರಿ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು ಖುಷಿಯಿಂದ ಹೂವಿನ ಮಳೆಯನ್ನೇ ಸುರಿಸಿದ್ದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಹಾರೆ ಹಿಡಿದು ಮಣ್ಣು ಅಗೆದ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರಿಂದ ಹೂ ಹಾರ -ಹೂ ಮಳೆ
ಹೂಮಳೆಯಲ್ಲಿ ಮಿಂದೆದ್ದ ರೇಣುಕಾಚಾರ್ಯ
Skanda
| Edited By: |

Updated on: Apr 03, 2021 | 2:12 PM

Share

ದಾವಣಗೆರೆ: ಸದಾ ಒಂದಿಲ್ಲೊಂದು ಕಾರಣಕ್ಕೆ ಪ್ರಚಲಿತದಲ್ಲಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ರಾಜಕೀಯ ವಲಯದಾಚೆಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿ ಜನರೊಂದಿಗಿದ್ದಾಗಲೂ ಏನಾದರೂ ಸುದ್ದಿಯಾಗುತ್ತಲೇ ಇರುತ್ತದೆ. ಸದ್ಯ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರು ಹೂ ಮಳೆ ಸುರಿದು ಅಭಿನಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮಕ್ಕೆ ಉದ್ಯೋಗ ಖಾತ್ರಿ ಯೋಜನೆ ನೋಡಲು ಬಂದ ಶಾಸಕರಿಗೆ ಕೂಲಿ ಕಾರ್ಮಿಕರು ಹೂ ಮಳೆ ಸುರಿಸಿದ್ದಾರೆ.

ಕುಂಬಳೂರು ಗ್ರಾಮದಲ್ಲಿ ಸುಮಾರು ₹40 ಲಕ್ಷ ವೆಚ್ಚದಲ್ಲಿ ಉದ್ಯೋಗ ಖಾತ್ರಿ ಯೋಜನೆ ಮೂಲಕ ಗ್ರಾಮದ ಹಿರೇಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, 329 ಜನರಿಗೆ‌ ಅದರಿಂದ ಉದ್ಯೋಗ ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ ವೀಕ್ಷಣೆಗೆ ಬಂದ ಶಾಸಕ ರೇಣುಕಾಚಾರ್ಯ ಕೆರೆ ಕಾಮಗಾರಿ ವೀಕ್ಷಿಸಿ ಸ್ವತಃ ಕೂಲಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಕಾರ್ಮಿಕರ ಒಡಗೂಡಿ ಹಾರೆ ಹಿಡಿದು ಮಣ್ಣು ಅಗೆದ ರೇಣುಕಾಚಾರ್ಯ ಕೂಲಿಯಾಳುಗಳಿಗೆ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಉದ್ಯೋಗ ಖಾತ್ರಿ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು ಖುಷಿಯಿಂದ ಹೂವಿನ ಮಳೆಯನ್ನೇ ಸುರಿಸಿದ್ದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

RENUKACHARYA

ರೇಣುಕಾಚಾರ್ಯ

ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆಯ ಮಕ್ಕಳ ಬುಲೆಟ್ ಓಡಿಸಿದ ರೇಣುಕಾಚಾರ್ಯ ಯಾರಾದರೂ ಹೊಸ ವಾಹನ ತಂದರೆ ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿಸುವುದು ಮಾಮೂಲು. ಆದರೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಇದು ಸ್ವಲ್ಪ ವಿಭಿನ್ನ. ಇಲ್ಲಿನ ಜನ ದೇವಸ್ಥಾನದ ಬದಲಿಗೆ ಶಾಸಕ ರೇಣುಕಾಚಾರ್ಯ ಅವರ ಮನೆಗೆ ಬರುತ್ತಾರೆ. ಕಾರಣ ಶಾಸಕ ರೇಣುಕಾಚಾರ್ಯ ಜಂಗಮ ಎಂಬ ಒಂದು ಕಾರಣವೂ ಇರಬಹುದು.

ಇಂದು ಸಹ ಇಂಥದ್ದೇ ಒಂದು ಘಟನೆ ನಡೆದಿದೆ. ಹೊನ್ನಾಳಿ ತಾಲ್ಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಪದ್ಮ ರಂಗನಾಥ ಅವರು ತಮ್ಮ ಪುತ್ರನಿಗೆ ಬುಲೆಟ್ ಕೊಡಿಸಿದ್ದರು. ಆದರೆ, ಖರೀದಿಸಿದ್ದ ಬುಲೆಟ್ ಪೂಜೆಗೆ ದೇವಸ್ಥಾನಕ್ಕೆ ಹೋಗುವ ಬದಲು ನೇರವಾಗಿ ಶಾಸಕ ರೇಣುಕಾಚಾರ್ಯ ಅವರ ಮನೆಗೆ ಬಂದಿದೆ. ನಂತರ ಹೊಸ ಬುಲೆಟ್ ಸವಾರಿ ಮಾಡಿದ ಶಾಸಕ ರೇಣುಕಾಚಾರ್ಯ ಹೊನ್ನಾಳಿ ಪಟ್ಟಣದಲ್ಲಿ ಒಂದು ಸುತ್ತು ಬಂದು ಬುಲೆಟ್​ ಮಾಲೀಕರನ್ನು ಖುಷಿಪಡಿಸಿದ್ದಾರೆ.

ಇದನ್ನೂಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಶಾಸಕ ಎಂ.ಪಿ. ರೇಣುಕಾಚಾರ್ಯ, ಅಧಿಕಾರಿಗಳಿಂದ ಕಾಲ್ನಡಿಗೆ, ಸೈಕಲ್ ಜಾಥಾ 

ಸಿಎಂ ವಿರುದ್ಧ ಒಬ್ಬ ಸಚಿವ ದೂರು ನೀಡಿದ್ದು ಇದೇ ಮೊದಲು.. ರಾಜ್ಯಪಾಲರಿಗೆ ದೂರು ನೀಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್