AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರೆ ಹಿಡಿದು ಮಣ್ಣು ಅಗೆದ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರಿಂದ ಹೂ ಹಾರ -ಹೂ ಮಳೆ

ಕಾರ್ಮಿಕರ ಒಡಗೂಡಿ ಹಾರೆ ಹಿಡಿದು ಮಣ್ಣು ಅಗೆದ ರೇಣುಕಾಚಾರ್ಯ ಕೂಲಿಯಾಳುಗಳಿಗೆ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಉದ್ಯೋಗ ಖಾತ್ರಿ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು ಖುಷಿಯಿಂದ ಹೂವಿನ ಮಳೆಯನ್ನೇ ಸುರಿಸಿದ್ದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಹಾರೆ ಹಿಡಿದು ಮಣ್ಣು ಅಗೆದ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರಿಂದ ಹೂ ಹಾರ -ಹೂ ಮಳೆ
ಹೂಮಳೆಯಲ್ಲಿ ಮಿಂದೆದ್ದ ರೇಣುಕಾಚಾರ್ಯ
Skanda
| Edited By: |

Updated on: Apr 03, 2021 | 2:12 PM

Share

ದಾವಣಗೆರೆ: ಸದಾ ಒಂದಿಲ್ಲೊಂದು ಕಾರಣಕ್ಕೆ ಪ್ರಚಲಿತದಲ್ಲಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ರಾಜಕೀಯ ವಲಯದಾಚೆಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿ ಜನರೊಂದಿಗಿದ್ದಾಗಲೂ ಏನಾದರೂ ಸುದ್ದಿಯಾಗುತ್ತಲೇ ಇರುತ್ತದೆ. ಸದ್ಯ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರು ಹೂ ಮಳೆ ಸುರಿದು ಅಭಿನಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮಕ್ಕೆ ಉದ್ಯೋಗ ಖಾತ್ರಿ ಯೋಜನೆ ನೋಡಲು ಬಂದ ಶಾಸಕರಿಗೆ ಕೂಲಿ ಕಾರ್ಮಿಕರು ಹೂ ಮಳೆ ಸುರಿಸಿದ್ದಾರೆ.

ಕುಂಬಳೂರು ಗ್ರಾಮದಲ್ಲಿ ಸುಮಾರು ₹40 ಲಕ್ಷ ವೆಚ್ಚದಲ್ಲಿ ಉದ್ಯೋಗ ಖಾತ್ರಿ ಯೋಜನೆ ಮೂಲಕ ಗ್ರಾಮದ ಹಿರೇಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, 329 ಜನರಿಗೆ‌ ಅದರಿಂದ ಉದ್ಯೋಗ ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ ವೀಕ್ಷಣೆಗೆ ಬಂದ ಶಾಸಕ ರೇಣುಕಾಚಾರ್ಯ ಕೆರೆ ಕಾಮಗಾರಿ ವೀಕ್ಷಿಸಿ ಸ್ವತಃ ಕೂಲಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಕಾರ್ಮಿಕರ ಒಡಗೂಡಿ ಹಾರೆ ಹಿಡಿದು ಮಣ್ಣು ಅಗೆದ ರೇಣುಕಾಚಾರ್ಯ ಕೂಲಿಯಾಳುಗಳಿಗೆ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಉದ್ಯೋಗ ಖಾತ್ರಿ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು ಖುಷಿಯಿಂದ ಹೂವಿನ ಮಳೆಯನ್ನೇ ಸುರಿಸಿದ್ದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

RENUKACHARYA

ರೇಣುಕಾಚಾರ್ಯ

ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆಯ ಮಕ್ಕಳ ಬುಲೆಟ್ ಓಡಿಸಿದ ರೇಣುಕಾಚಾರ್ಯ ಯಾರಾದರೂ ಹೊಸ ವಾಹನ ತಂದರೆ ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿಸುವುದು ಮಾಮೂಲು. ಆದರೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಇದು ಸ್ವಲ್ಪ ವಿಭಿನ್ನ. ಇಲ್ಲಿನ ಜನ ದೇವಸ್ಥಾನದ ಬದಲಿಗೆ ಶಾಸಕ ರೇಣುಕಾಚಾರ್ಯ ಅವರ ಮನೆಗೆ ಬರುತ್ತಾರೆ. ಕಾರಣ ಶಾಸಕ ರೇಣುಕಾಚಾರ್ಯ ಜಂಗಮ ಎಂಬ ಒಂದು ಕಾರಣವೂ ಇರಬಹುದು.

ಇಂದು ಸಹ ಇಂಥದ್ದೇ ಒಂದು ಘಟನೆ ನಡೆದಿದೆ. ಹೊನ್ನಾಳಿ ತಾಲ್ಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಪದ್ಮ ರಂಗನಾಥ ಅವರು ತಮ್ಮ ಪುತ್ರನಿಗೆ ಬುಲೆಟ್ ಕೊಡಿಸಿದ್ದರು. ಆದರೆ, ಖರೀದಿಸಿದ್ದ ಬುಲೆಟ್ ಪೂಜೆಗೆ ದೇವಸ್ಥಾನಕ್ಕೆ ಹೋಗುವ ಬದಲು ನೇರವಾಗಿ ಶಾಸಕ ರೇಣುಕಾಚಾರ್ಯ ಅವರ ಮನೆಗೆ ಬಂದಿದೆ. ನಂತರ ಹೊಸ ಬುಲೆಟ್ ಸವಾರಿ ಮಾಡಿದ ಶಾಸಕ ರೇಣುಕಾಚಾರ್ಯ ಹೊನ್ನಾಳಿ ಪಟ್ಟಣದಲ್ಲಿ ಒಂದು ಸುತ್ತು ಬಂದು ಬುಲೆಟ್​ ಮಾಲೀಕರನ್ನು ಖುಷಿಪಡಿಸಿದ್ದಾರೆ.

ಇದನ್ನೂಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಶಾಸಕ ಎಂ.ಪಿ. ರೇಣುಕಾಚಾರ್ಯ, ಅಧಿಕಾರಿಗಳಿಂದ ಕಾಲ್ನಡಿಗೆ, ಸೈಕಲ್ ಜಾಥಾ 

ಸಿಎಂ ವಿರುದ್ಧ ಒಬ್ಬ ಸಚಿವ ದೂರು ನೀಡಿದ್ದು ಇದೇ ಮೊದಲು.. ರಾಜ್ಯಪಾಲರಿಗೆ ದೂರು ನೀಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ