AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನದ ನಾಣ್ಯ ನೀಡಿ ವಂಚನೆ; ಚಿನ್ನದ ಆಸೆಗೆ ಬಿದ್ದು 7 ಲಕ್ಷ ಕಳೆದುಕೊಂಡ ಮುಂಬೈನ ಪಾನ್ ವಾಲಾ

ಕಡಿಮೆ ಬೆಲೆಗೆ ನಾಣ್ಯಗಳನ್ನು ತಂದು ಮುಂಬೈನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂದು ಆಮಿಷ ಒಡ್ಡಿದ ಆರೋಪಿಗಳು 3600 ಚಿನ್ನದ ನಾಣ್ಯಗಳಿಗೆ 10 ಲಕ್ಷವಾಗುತ್ತದೆ. ನಾನು ಚೌಕಾಸಿ ಮಾಡಿ 7 ಲಕ್ಷಕ್ಕೆ ಕೊಡಿಸುತ್ತೇನೆ ಎಂದು ಗುಲಾಬ್ ಚಂದ್‌ ಅವರನ್ನು ನಂಬಿಸಿದ್ದಾರೆ.

ನಕಲಿ ಚಿನ್ನದ ನಾಣ್ಯ ನೀಡಿ ವಂಚನೆ; ಚಿನ್ನದ ಆಸೆಗೆ ಬಿದ್ದು 7 ಲಕ್ಷ ಕಳೆದುಕೊಂಡ ಮುಂಬೈನ ಪಾನ್ ವಾಲಾ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 02, 2021 | 8:02 AM

Share

ದಾವಣಗೆರೆ: ಹಳೆಯ ಕಾಲದ ಪಾರಂಪರಿಕ ನಾಣ್ಯ ನೀಡುವುದಾಗಿ ನಂಬಿಸಿ ಮುಂಬೈನ ಪಾನ್ ಬೀಡಾ ಶಾಪ್ ಮಾಲೀಕನಿಗೆ ಎಳು ಲಕ್ಷ ವಂಚಿಸಿರುವ ಘಟನೆ ದಾವಣಗೆರೆ ನಗರದ ಲೋಕಿಕೆರೆ ರಸ್ತೆಯ ಅಯ್ಯಪ್ಪ ದೇವಾಲಯದ ಬಳಿ ನಡೆದಿದೆ. ಪೂರ್ವ ಮುಂಬೈನ ಗುಲಾಬ್ ಚಂದ್ ಶೀತಲ್ ಪ್ರಸಾದ್ ಗುಪ್ತಾ ಅವರಿಗೆ ಹರ್ಷದ್ ರಾಜ್ ಕುಮಾರ್ ಪಾಠಕ್, ಕರ್ನಾಟಕದ ರಮೇಶ್ ಹಾಗೂ ಮಹಾರಾಷ್ಟ್ರದ ನಾಸಿಕ್‌ನ ಅಮನ್ ಶೇಖ್ ಹಾಗೂ ಜೀಶಾನ್ ಶೇಖ್ ಚಿನ್ನದ ನಾಣ್ಯ ನೀಡುವುದಾಗಿ ಮೋಸ ಮಾಡಿದ್ದಾರೆ.

ಗುಲಾಬ್ ಚಂದ್ ಹಾಗೂ ಹರ್ಷದ್‌ ರಾಜ್‌ಕುಮಾರ್ ಪಾಠಕ್ ಅಕ್ಕಪಕ್ಕದ ಮನೆಯವರಾಗಿದ್ದು, ಆರೋಪಿ ಹರ್ಷದ್ ರಾಜ್ ಕುಮಾರ್ ಪಾಠಕ್, ಅಮನ್ ಶೇಖ್ ಹಾಗೂ ಜೀಶನ್ ಶೇಖ್ ಅವರನ್ನು ಗುಲಾಬ್‌ ಚಂದ್‌ಗೆ ಪರಿಚಯ ಮಾಡಿಕೊಟ್ಟಿದ್ದಾನೆ. ಈ ವೇಳೆ ಅಮನ್ ಶೇಖ್ ಎಂಬಾತ ಕರ್ನಾಟಕದಲ್ಲಿ ನನ್ನ ಸ್ನೇಹಿತ ರಮೇಶ್ 5 ಕೆಜಿ ಪಾರಂಪರಿಕ ನಾಣ್ಯವನ್ನು ಇಟ್ಟಿದ್ದು, ಹಣಕಾಸಿನ ಸಮಸ್ಯೆಯಿಂದಾಗಿ ಕಡಿಮೆ ಬೆಲೆಗೆ ನಾಣ್ಯಗಳನ್ನು ಮಾರಾಟ ಮಾಡುತ್ತಿದ್ದಾನೆ. ಹುಬ್ಬಳ್ಳಿಯ ಚೆಕ್‌ ಪೋಸ್ಟ್ ಬಳಿ ನನ್ನ ಸಹೋದರ ಜೀಶನ್‌ ಬಳಿ ಈ ನಾಣ್ಯಗಳನ್ನು ನೋಡಿದ್ದೇನೆ ಎಂದು ಗುಲಾಬ್ ಚಂದ್‌ಗೆ ತಿಳಿಸಿದ್ದಾನೆ.

ಕಡಿಮೆ ಬೆಲೆಗೆ ನಾಣ್ಯಗಳನ್ನು ತಂದು ಮುಂಬೈನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂದು ಆಮಿಷ ಒಡ್ಡಿದ ಆರೋಪಿಗಳು 3600 ಚಿನ್ನದ ನಾಣ್ಯಗಳಿಗೆ 10 ಲಕ್ಷವಾಗುತ್ತದೆ. ನಾನು ಚೌಕಾಸಿ ಮಾಡಿ 7 ಲಕ್ಷಕ್ಕೆ ಕೊಡಿಸುತ್ತೇನೆ ಎಂದು ಗುಲಾಬ್ ಚಂದ್‌ ಅವರನ್ನು ನಂಬಿಸಿದ್ದಾರೆ.

ಇದನ್ನೆಲ್ಲಾ ನಂಬಿದ ಗುಲಾಬ್ ಚಂದ್, ತಮ್ಮ ಪತ್ನಿ ಹಾಗೂ ಹರ್ಷದ್ ರಾಜ್ ಕುಮಾರ್ ಜತೆ ಹುಬ್ಬಳ್ಳಿಗೆ ಹೊರಟು ಬಂದಿದ್ದಾರೆ. ಆದರೆ ಆರೋಪಿಗಳು ಲೋಕಿಕೆರೆ ರಸ್ತೆಯ ಅಯ್ಯಪ್ಪ ದೇವಾಲಯದ ಬಳಿ ಬರಲು ಹೇಳಿದ್ದಾರೆ. ಅದರಂತೆಯೇ ಲೋಕಿಕೆರೆಗೆ ಬಂದ ಗುಲಾಬ್‌ ಚಂದ್ ಕುಟುಂಬಕ್ಕೆ ರಮೇಶ್ ಎಂಬಾತ ನನ್ನ ಬಳಿ 3600 ಪಾರಂಪರಿಕ ನಾಣ್ಯಗಳು ಇವೆ ಎಂದು ಹೇಳಿ ಕುಂಕುಮ ಲೇಪಿಸಿರುವ ನಾಣ್ಯಗಳನ್ನು ನೀಡಿದ್ದಾನೆ. ಆದರೆ ಮುಂಬೈನಲ್ಲಿ ಹೋಗಿ ಈ ನಾಣ್ಯವನ್ನು ಪರೀಕ್ಷಿಸಿದಾಗ ತಾಮ್ರಲೇಪಿತ ನಾಣ್ಯಗಳು ಎಂದು ತಿಳಿದುಬಂದಿದೆ. ಸದ್ಯ ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಶುರುವಾದ ನಕಲಿ ಚಿನ್ನದ ದಂಧೆ; 4.80 ಲಕ್ಷ ರೂಪಾಯಿ ವಂಚಿಸಿದ ಓರ್ವನ ಬಂಧನ

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್