AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನದ ನಾಣ್ಯ ನೀಡಿ ವಂಚನೆ; ಚಿನ್ನದ ಆಸೆಗೆ ಬಿದ್ದು 7 ಲಕ್ಷ ಕಳೆದುಕೊಂಡ ಮುಂಬೈನ ಪಾನ್ ವಾಲಾ

ಕಡಿಮೆ ಬೆಲೆಗೆ ನಾಣ್ಯಗಳನ್ನು ತಂದು ಮುಂಬೈನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂದು ಆಮಿಷ ಒಡ್ಡಿದ ಆರೋಪಿಗಳು 3600 ಚಿನ್ನದ ನಾಣ್ಯಗಳಿಗೆ 10 ಲಕ್ಷವಾಗುತ್ತದೆ. ನಾನು ಚೌಕಾಸಿ ಮಾಡಿ 7 ಲಕ್ಷಕ್ಕೆ ಕೊಡಿಸುತ್ತೇನೆ ಎಂದು ಗುಲಾಬ್ ಚಂದ್‌ ಅವರನ್ನು ನಂಬಿಸಿದ್ದಾರೆ.

ನಕಲಿ ಚಿನ್ನದ ನಾಣ್ಯ ನೀಡಿ ವಂಚನೆ; ಚಿನ್ನದ ಆಸೆಗೆ ಬಿದ್ದು 7 ಲಕ್ಷ ಕಳೆದುಕೊಂಡ ಮುಂಬೈನ ಪಾನ್ ವಾಲಾ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on: Aug 02, 2021 | 8:02 AM

Share

ದಾವಣಗೆರೆ: ಹಳೆಯ ಕಾಲದ ಪಾರಂಪರಿಕ ನಾಣ್ಯ ನೀಡುವುದಾಗಿ ನಂಬಿಸಿ ಮುಂಬೈನ ಪಾನ್ ಬೀಡಾ ಶಾಪ್ ಮಾಲೀಕನಿಗೆ ಎಳು ಲಕ್ಷ ವಂಚಿಸಿರುವ ಘಟನೆ ದಾವಣಗೆರೆ ನಗರದ ಲೋಕಿಕೆರೆ ರಸ್ತೆಯ ಅಯ್ಯಪ್ಪ ದೇವಾಲಯದ ಬಳಿ ನಡೆದಿದೆ. ಪೂರ್ವ ಮುಂಬೈನ ಗುಲಾಬ್ ಚಂದ್ ಶೀತಲ್ ಪ್ರಸಾದ್ ಗುಪ್ತಾ ಅವರಿಗೆ ಹರ್ಷದ್ ರಾಜ್ ಕುಮಾರ್ ಪಾಠಕ್, ಕರ್ನಾಟಕದ ರಮೇಶ್ ಹಾಗೂ ಮಹಾರಾಷ್ಟ್ರದ ನಾಸಿಕ್‌ನ ಅಮನ್ ಶೇಖ್ ಹಾಗೂ ಜೀಶಾನ್ ಶೇಖ್ ಚಿನ್ನದ ನಾಣ್ಯ ನೀಡುವುದಾಗಿ ಮೋಸ ಮಾಡಿದ್ದಾರೆ.

ಗುಲಾಬ್ ಚಂದ್ ಹಾಗೂ ಹರ್ಷದ್‌ ರಾಜ್‌ಕುಮಾರ್ ಪಾಠಕ್ ಅಕ್ಕಪಕ್ಕದ ಮನೆಯವರಾಗಿದ್ದು, ಆರೋಪಿ ಹರ್ಷದ್ ರಾಜ್ ಕುಮಾರ್ ಪಾಠಕ್, ಅಮನ್ ಶೇಖ್ ಹಾಗೂ ಜೀಶನ್ ಶೇಖ್ ಅವರನ್ನು ಗುಲಾಬ್‌ ಚಂದ್‌ಗೆ ಪರಿಚಯ ಮಾಡಿಕೊಟ್ಟಿದ್ದಾನೆ. ಈ ವೇಳೆ ಅಮನ್ ಶೇಖ್ ಎಂಬಾತ ಕರ್ನಾಟಕದಲ್ಲಿ ನನ್ನ ಸ್ನೇಹಿತ ರಮೇಶ್ 5 ಕೆಜಿ ಪಾರಂಪರಿಕ ನಾಣ್ಯವನ್ನು ಇಟ್ಟಿದ್ದು, ಹಣಕಾಸಿನ ಸಮಸ್ಯೆಯಿಂದಾಗಿ ಕಡಿಮೆ ಬೆಲೆಗೆ ನಾಣ್ಯಗಳನ್ನು ಮಾರಾಟ ಮಾಡುತ್ತಿದ್ದಾನೆ. ಹುಬ್ಬಳ್ಳಿಯ ಚೆಕ್‌ ಪೋಸ್ಟ್ ಬಳಿ ನನ್ನ ಸಹೋದರ ಜೀಶನ್‌ ಬಳಿ ಈ ನಾಣ್ಯಗಳನ್ನು ನೋಡಿದ್ದೇನೆ ಎಂದು ಗುಲಾಬ್ ಚಂದ್‌ಗೆ ತಿಳಿಸಿದ್ದಾನೆ.

ಕಡಿಮೆ ಬೆಲೆಗೆ ನಾಣ್ಯಗಳನ್ನು ತಂದು ಮುಂಬೈನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂದು ಆಮಿಷ ಒಡ್ಡಿದ ಆರೋಪಿಗಳು 3600 ಚಿನ್ನದ ನಾಣ್ಯಗಳಿಗೆ 10 ಲಕ್ಷವಾಗುತ್ತದೆ. ನಾನು ಚೌಕಾಸಿ ಮಾಡಿ 7 ಲಕ್ಷಕ್ಕೆ ಕೊಡಿಸುತ್ತೇನೆ ಎಂದು ಗುಲಾಬ್ ಚಂದ್‌ ಅವರನ್ನು ನಂಬಿಸಿದ್ದಾರೆ.

ಇದನ್ನೆಲ್ಲಾ ನಂಬಿದ ಗುಲಾಬ್ ಚಂದ್, ತಮ್ಮ ಪತ್ನಿ ಹಾಗೂ ಹರ್ಷದ್ ರಾಜ್ ಕುಮಾರ್ ಜತೆ ಹುಬ್ಬಳ್ಳಿಗೆ ಹೊರಟು ಬಂದಿದ್ದಾರೆ. ಆದರೆ ಆರೋಪಿಗಳು ಲೋಕಿಕೆರೆ ರಸ್ತೆಯ ಅಯ್ಯಪ್ಪ ದೇವಾಲಯದ ಬಳಿ ಬರಲು ಹೇಳಿದ್ದಾರೆ. ಅದರಂತೆಯೇ ಲೋಕಿಕೆರೆಗೆ ಬಂದ ಗುಲಾಬ್‌ ಚಂದ್ ಕುಟುಂಬಕ್ಕೆ ರಮೇಶ್ ಎಂಬಾತ ನನ್ನ ಬಳಿ 3600 ಪಾರಂಪರಿಕ ನಾಣ್ಯಗಳು ಇವೆ ಎಂದು ಹೇಳಿ ಕುಂಕುಮ ಲೇಪಿಸಿರುವ ನಾಣ್ಯಗಳನ್ನು ನೀಡಿದ್ದಾನೆ. ಆದರೆ ಮುಂಬೈನಲ್ಲಿ ಹೋಗಿ ಈ ನಾಣ್ಯವನ್ನು ಪರೀಕ್ಷಿಸಿದಾಗ ತಾಮ್ರಲೇಪಿತ ನಾಣ್ಯಗಳು ಎಂದು ತಿಳಿದುಬಂದಿದೆ. ಸದ್ಯ ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಶುರುವಾದ ನಕಲಿ ಚಿನ್ನದ ದಂಧೆ; 4.80 ಲಕ್ಷ ರೂಪಾಯಿ ವಂಚಿಸಿದ ಓರ್ವನ ಬಂಧನ

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್