AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ಚುನಾವಣೆಗೆ ಸ್ಪರ್ಧೆ; ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಾಜಿ ಸಚಿವ ಮುನಿರತ್ನ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮುನಿರತ್ನ ಚುನಾವಣೆಗೆ ಸ್ಪರ್ಧೆ; ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಾಜಿ ಸಚಿವ ಮುನಿರತ್ನ ಅವರ ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಮತ್ತು ವೈಟ್​ಫೀಲ್ಡ್ ಡಿಸಿಪಿ ಗಿರೀಶ್ ವರ್ಗಾವಣೆ
Rakesh Nayak Manchi
|

Updated on:Apr 23, 2023 | 8:25 PM

Share

ದಾವಣಗೆರೆ: ಮಾಜಿ ಸಚಿವ ಮುನಿರತ್ನ (N Munirathna) ಅವರು ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ (Davanagere SP) ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಬೆಂಗಳೂರಿನ ವೈಟ್​​ಫೀಲ್ಡ್​​​ ಡಿಸಿಪಿ ಗಿರೀಶ್​ ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರನ್ನು​​ ವರ್ಗಾವಣೆ ಮಾಡಲಾಗಿದೆ. ಅದರಂತೆ ವೈಟ್​​ಫೀಲ್ಡ್ ವಿಭಾಗಕ್ಕೆ​​​ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ನೂತನ ಡಿಸಿಪಿ ಆಗಿ ನೇಮಕ ಮಾಡಲಾಗಿದ್ದು, ಅರೂಣ್ ಕೆ ಅವರನ್ನು ದಾವಣಗೆರೆ ನೂತನ ಎಸ್​ಪಿಯನ್ನಾಗಿ ನೇಮಕ ಮಾಡಲಾಗಿದೆ. ರಿಷ್ಯಂತ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸದೇ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಯಾವುದೇ ಅಧಿಕಾರಿಯ ಸಂಬಂಧಿಕರು ಚುನಾವಣೆಗೆ ಸ್ಪರ್ಧಿಸಿದರೆ ಅಂತಹ ಅಧಿಕಾರಿಯನ್ನ ಚುನಾವಣಾ ಸೇವೆಯಿಂದ ಬಿಡುಗಡೆ ಮಾಡಬೇಕು. ಇದು ಚುನಾವಣಾ ಆಯೋಗದ ನಿಯಮವಾಗಿದೆ. ಇದೇ ಕಾರಣಕ್ಕೆ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಅವರನ್ನು ಯಾವುದೇ ಹುದ್ದೆ ತೊರಿಸದೇ ವರ್ಗಾವಣೆ ಮಾಡಲಾಗಿದೆ. ಸಿಬಿ ರಿಷ್ಯಂತ್ ಅವರು ಸಚಿವ ಮುನಿರತ್ನ ಅವರ ದ್ವಿತೀಯ ಪುತ್ರಿಯ ಪತಿಯಾಗಿದ್ದಾರೆ. ರಿಷ್ಯಂತ್ ಅವರಿಂದ ತರವಾದ ಸ್ಥಾನಕ್ಕೆ ಕಲಬುರ್ಗಿ ಎಸ್​ಪಿ ಡಾ. ಅರುಣ್ ಕೆ ಅವರನ್ನು ನಿಯೋಜಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ರಿಷ್ಯಂತ್ ಅವರ ವರ್ಗಾವಣೆ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ವಿರುದ್ಧ ರಿಷ್ಯಂತ್ ಅವರು ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಲ ಪುಡಿ ರೌಡಿಗಳನ್ನ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Sun, 23 April 23

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್