AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ಚುನಾವಣೆಗೆ ಸ್ಪರ್ಧೆ; ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಾಜಿ ಸಚಿವ ಮುನಿರತ್ನ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮುನಿರತ್ನ ಚುನಾವಣೆಗೆ ಸ್ಪರ್ಧೆ; ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಾಜಿ ಸಚಿವ ಮುನಿರತ್ನ ಅವರ ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಮತ್ತು ವೈಟ್​ಫೀಲ್ಡ್ ಡಿಸಿಪಿ ಗಿರೀಶ್ ವರ್ಗಾವಣೆ
Rakesh Nayak Manchi
|

Updated on:Apr 23, 2023 | 8:25 PM

Share

ದಾವಣಗೆರೆ: ಮಾಜಿ ಸಚಿವ ಮುನಿರತ್ನ (N Munirathna) ಅವರು ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ (Davanagere SP) ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಬೆಂಗಳೂರಿನ ವೈಟ್​​ಫೀಲ್ಡ್​​​ ಡಿಸಿಪಿ ಗಿರೀಶ್​ ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರನ್ನು​​ ವರ್ಗಾವಣೆ ಮಾಡಲಾಗಿದೆ. ಅದರಂತೆ ವೈಟ್​​ಫೀಲ್ಡ್ ವಿಭಾಗಕ್ಕೆ​​​ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ನೂತನ ಡಿಸಿಪಿ ಆಗಿ ನೇಮಕ ಮಾಡಲಾಗಿದ್ದು, ಅರೂಣ್ ಕೆ ಅವರನ್ನು ದಾವಣಗೆರೆ ನೂತನ ಎಸ್​ಪಿಯನ್ನಾಗಿ ನೇಮಕ ಮಾಡಲಾಗಿದೆ. ರಿಷ್ಯಂತ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸದೇ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಯಾವುದೇ ಅಧಿಕಾರಿಯ ಸಂಬಂಧಿಕರು ಚುನಾವಣೆಗೆ ಸ್ಪರ್ಧಿಸಿದರೆ ಅಂತಹ ಅಧಿಕಾರಿಯನ್ನ ಚುನಾವಣಾ ಸೇವೆಯಿಂದ ಬಿಡುಗಡೆ ಮಾಡಬೇಕು. ಇದು ಚುನಾವಣಾ ಆಯೋಗದ ನಿಯಮವಾಗಿದೆ. ಇದೇ ಕಾರಣಕ್ಕೆ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಅವರನ್ನು ಯಾವುದೇ ಹುದ್ದೆ ತೊರಿಸದೇ ವರ್ಗಾವಣೆ ಮಾಡಲಾಗಿದೆ. ಸಿಬಿ ರಿಷ್ಯಂತ್ ಅವರು ಸಚಿವ ಮುನಿರತ್ನ ಅವರ ದ್ವಿತೀಯ ಪುತ್ರಿಯ ಪತಿಯಾಗಿದ್ದಾರೆ. ರಿಷ್ಯಂತ್ ಅವರಿಂದ ತರವಾದ ಸ್ಥಾನಕ್ಕೆ ಕಲಬುರ್ಗಿ ಎಸ್​ಪಿ ಡಾ. ಅರುಣ್ ಕೆ ಅವರನ್ನು ನಿಯೋಜಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ರಿಷ್ಯಂತ್ ಅವರ ವರ್ಗಾವಣೆ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ವಿರುದ್ಧ ರಿಷ್ಯಂತ್ ಅವರು ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಲ ಪುಡಿ ರೌಡಿಗಳನ್ನ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Sun, 23 April 23

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?