ಮುನಿರತ್ನ ಚುನಾವಣೆಗೆ ಸ್ಪರ್ಧೆ; ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಾಜಿ ಸಚಿವ ಮುನಿರತ್ನ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮುನಿರತ್ನ ಚುನಾವಣೆಗೆ ಸ್ಪರ್ಧೆ; ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಾಜಿ ಸಚಿವ ಮುನಿರತ್ನ ಅವರ ಅಳಿಯ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಮತ್ತು ವೈಟ್​ಫೀಲ್ಡ್ ಡಿಸಿಪಿ ಗಿರೀಶ್ ವರ್ಗಾವಣೆ
Rakesh Nayak Manchi

Updated on: Apr 23, 2023 | 8:25 PM

ದಾವಣಗೆರೆ: ಮಾಜಿ ಸಚಿವ ಮುನಿರತ್ನ (N Munirathna) ಅವರು ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧಿಸುತ್ತಿರುವ ಹಿನ್ನೆಲೆ ಅವರ ಅಳಿಯನೂ ಆಗಿರುವ ದಾವಣಗೆರೆ ಎಸ್​ಪಿ (Davanagere SP) ಸಿಬಿ ರಿಷ್ಯಂತ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಬೆಂಗಳೂರಿನ ವೈಟ್​​ಫೀಲ್ಡ್​​​ ಡಿಸಿಪಿ ಗಿರೀಶ್​ ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರನ್ನು​​ ವರ್ಗಾವಣೆ ಮಾಡಲಾಗಿದೆ. ಅದರಂತೆ ವೈಟ್​​ಫೀಲ್ಡ್ ವಿಭಾಗಕ್ಕೆ​​​ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ನೂತನ ಡಿಸಿಪಿ ಆಗಿ ನೇಮಕ ಮಾಡಲಾಗಿದ್ದು, ಅರೂಣ್ ಕೆ ಅವರನ್ನು ದಾವಣಗೆರೆ ನೂತನ ಎಸ್​ಪಿಯನ್ನಾಗಿ ನೇಮಕ ಮಾಡಲಾಗಿದೆ. ರಿಷ್ಯಂತ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸದೇ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಯಾವುದೇ ಅಧಿಕಾರಿಯ ಸಂಬಂಧಿಕರು ಚುನಾವಣೆಗೆ ಸ್ಪರ್ಧಿಸಿದರೆ ಅಂತಹ ಅಧಿಕಾರಿಯನ್ನ ಚುನಾವಣಾ ಸೇವೆಯಿಂದ ಬಿಡುಗಡೆ ಮಾಡಬೇಕು. ಇದು ಚುನಾವಣಾ ಆಯೋಗದ ನಿಯಮವಾಗಿದೆ. ಇದೇ ಕಾರಣಕ್ಕೆ ದಾವಣಗೆರೆ ಎಸ್​ಪಿ ಸಿಬಿ ರಿಷ್ಯಂತ್ ಅವರನ್ನು ಯಾವುದೇ ಹುದ್ದೆ ತೊರಿಸದೇ ವರ್ಗಾವಣೆ ಮಾಡಲಾಗಿದೆ. ಸಿಬಿ ರಿಷ್ಯಂತ್ ಅವರು ಸಚಿವ ಮುನಿರತ್ನ ಅವರ ದ್ವಿತೀಯ ಪುತ್ರಿಯ ಪತಿಯಾಗಿದ್ದಾರೆ. ರಿಷ್ಯಂತ್ ಅವರಿಂದ ತರವಾದ ಸ್ಥಾನಕ್ಕೆ ಕಲಬುರ್ಗಿ ಎಸ್​ಪಿ ಡಾ. ಅರುಣ್ ಕೆ ಅವರನ್ನು ನಿಯೋಜಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ರಿಷ್ಯಂತ್ ಅವರ ವರ್ಗಾವಣೆ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ವಿರುದ್ಧ ರಿಷ್ಯಂತ್ ಅವರು ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಲ ಪುಡಿ ರೌಡಿಗಳನ್ನ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Sun, 23 April 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us