AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಹಾರ್ದಕ್ಕೆ ಸಾಕ್ಷಿಯಾದ ಸೀಮಂತ; ಪವಿತ್ರಾಗೆ ನಸೀಮಾಬಾನು ಮನೆಯಲ್ಲಿ ಉಡಿತುಂಬುವ ಕಾರ್ಯ

Seemantham: ಮಂಡ್ಯದ ನಿವಾಸಿ ಪವಿತ್ರಾ ಎಂಬ ಯುವತಿ ಹೋರಾಟದ ಸಂಗಾತಿಯೂ ಆಗಿರುವ ದಾವಣಗೆರೆ ಯುವಕ ಸತೀಶ್‌ ಅರವಿಂದ್‌ ಅವರನ್ನು ಮದುವೆಯಾಗಿದ್ದರು. ಪವಿತ್ರಾ ಈಗ ತುಂಬು ಗರ್ಭಿಣಿ. ಅವರನ್ನು ನಸೀಮಾ ಬಾನು ತಮ್ಮ ಮನೆಗೆ ಕರೆಸಿ ಸೀಮಂತ ಮಾಡಿ ಕಳುಹಿಸಿಕೊಡುವ ಮೂಲಕ ಸೌಹಾರ್ದಕ್ಕೆ ಸಾಕ್ಷಿಯಾದರು.

ಸೌಹಾರ್ದಕ್ಕೆ ಸಾಕ್ಷಿಯಾದ ಸೀಮಂತ; ಪವಿತ್ರಾಗೆ ನಸೀಮಾಬಾನು ಮನೆಯಲ್ಲಿ ಉಡಿತುಂಬುವ ಕಾರ್ಯ
ಸೌಹಾರ್ದಕ್ಕೆ ಸಾಕ್ಷಿಯಾದ ಸೀಮಂತ
TV9 Web
| Updated By: ಆಯೇಷಾ ಬಾನು|

Updated on: Aug 02, 2021 | 9:01 AM

Share

ದಾವಣಗೆರೆ: ಧರ್ಮಗಳ ನಡುವೆ ಬಾಂಧವ್ಯದ ಅಂತರಗಳು ಜಾಸ್ತಿಯಾಗುತ್ತಿರುವ ಸಮಯದಲ್ಲಿ ದಾವಣಗೆರೆಯಲ್ಲಿ ಸೌಹಾರ್ದಕ್ಕೆ ಸಾಕ್ಷಿಯಾಗುವಂಥ ಸೀಮಂತ ನಡೆದಿದೆ. ಮುಸ್ಲಿಂ ಮನೆಯಲ್ಲಿ ಹಿಂದೂ ಯುವತಿಗೆ ಉಡಿತುಂಬುವ ಕಾರ್ಯವಾಗಿದೆ. ಕೈಗೆ ಬಳೆ ತೊಡಿಸಿ, ತಲೆಗೆ ಹೂವು ಮುಡಿಸಿ, ಉಡುಗೆ ನೀಡಿ, ಹಣ್ಣು-ಹಂಪಲು, ಸಿಹಿತಿನಿಸು ಬಡಿಸಿ ಸೀಮಂತ ಮಾಡಲಾಯಿತು. ಬಳಿಕ ಸಹಭೋಜನ ನಡೆಸಲಾಯಿತು.

ಮಂಡ್ಯದ ನಿವಾಸಿ ಪವಿತ್ರಾ ಎಂಬ ಯುವತಿ ಹೋರಾಟದ ಸಂಗಾತಿಯೂ ಆಗಿರುವ ದಾವಣಗೆರೆ ಯುವಕ ಸತೀಶ್‌ ಅರವಿಂದ್‌ ಅವರನ್ನು ಮದುವೆಯಾಗಿದ್ದರು. ಪವಿತ್ರಾ ಈಗ ತುಂಬು ಗರ್ಭಿಣಿ. ಅವರನ್ನು ನಸೀಮಾ ಬಾನು ತಮ್ಮ ಮನೆಗೆ ಕರೆಸಿ ಸೀಮಂತ ಮಾಡಿ ಕಳುಹಿಸಿಕೊಡುವ ಮೂಲಕ ಸೌಹಾರ್ದಕ್ಕೆ ಸಾಕ್ಷಿಯಾದರು. ನಸೀಮಾಬಾನು ಅವರ ಪತಿ, ವಕೀಲ ಅನೀಸ್‌ ಪಾಷ ಇದಕ್ಕೆ ಬೆಂಬಲವಾಗಿ ನಿಂತರು.

‘ಹೆಣ್ಣಿಗೆ ಇಂಥ ಸಮಯದಲ್ಲಿಯೇ ಎಲ್ಲರೂ ಜೊತೆಯಲ್ಲಿ ಇರಬೇಕು. ಪ್ರೀತಿ ತೋರಬೇಕು ಎಂದು ಅನಿಸುವುದು. ನನಗೂ ಈಗ ಅದೇ ರೀತಿ ಭಾವನೆಗಳಿವೆ. ನಸೀಮಾ-ಅನೀಸ್‌ ದಂಪತಿ ನನ್ನನ್ನು ನನ್ನ ಮನೆಗಿಂತ ಹೆಚ್ಚು ಪ್ರೀತಿಯಿಂದ ಕರೆಸಿ ಸೀಮಂತ ಮಾಡಿರುವುದು ಖುಷಿ ನೀಡಿದೆ’ ಎಂದು ಪವಿತ್ರಾ ಖುಷಿ ವ್ಯಕ್ತ ಪಡಿಸಿದರು.

‘ಪವಿತ್ರಾ ಮತ್ತು ಸತೀಶ್‌ ಅರವಿಂದ ದಂಪತಿ ಬಗ್ಗೆ ಮನೆಯವರಿಂದ ಬಹಳಷ್ಟು ಕೇಳಿಪಟ್ಟಿದ್ದೇನೆ. ಈ ದಂಪತಿ ತಮ್ಮನ್ನು ಹೋರಾಟದಲ್ಲಿ ತೊಡಗಿಸಿಕೊಂಡವರು ಮನೆಯಿಂದ ದೂರ ಇರುತ್ತಾರೆ. ಅವರಿಗೆ ನಾವೇ ಬಂಧುಗಳಾಗಬೇಕು. ಅದಕ್ಕೆ ಏನಾದರೂ ಮಾಡಬೇಕು ಎಂದು ನಮ್ಮ ಮನೆಯವರು ಹೇಳುತ್ತಿದ್ದರು. ಹೀಗಾಗಿ ಪವಿತ್ರಾ ಅವರಿಗೆ ಸೀಮಂತ ಮಾಡಲು ನಿರ್ಧರಿಸಿದೆವು. ಸೀಮಂತದ ಪದ್ಧತಿ ಸರಿಯಾಗಿ ನಮಗ್ಯಾರಿಗೂ ಗೊತ್ತಿಲ್ಲ. ತಿಳಿದಷ್ಟು ಮಾಡಿದ್ದೇವೆ’ ಎಂದು ನಸೀಮಾಬಾನು ತಿಳಿಸಿದ್ದಾರೆ.

‘ಇದು ನಮ್ಮೊಳಗಿನ ಪ್ರೀತಿ. ಜೊತೆಗೆ ಭಾವೈಕ್ಯದ ಸಂಕೇತ. ಧರ್ಮ-ಧರ್ಮಗಳ ನಡುವೆ ದ್ವೇಷ ಕಡಿಮೆಯಾಗಬೇಕಿದ್ದರೆ ಧರ್ಮ ಮೀರಿ ಬಾಂಧವ್ಯ ಬೆಳೆಯಬೇಕು’ ಎಂಬುದು ಅನೀಸ್‌ ಪಾಷ ಅವರ ಅನಿಸಿಕೆ.

ಪವಿತ್ರಾ ಅವರು ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಬಳಿಕ ಜನಶಕ್ತಿ, ಮಹಿಳಾ ಮುನ್ನಡೆ ಮುಂತಾದ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿ ಸಂಘಟನೆ, ಕೋಮು ಸೌಹಾರ್ದ ವೇದಿಕೆ, ಜನಶಕ್ತಿಯಲ್ಲಿ ತೊಡಗಿಸಿಕೊಂಡಿರುವ ಸತೀಶ್‌ ಅರವಿಂದ್‌ ಅವರನ್ನು ಪ್ರೀತಿಸಿ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು.

seemantham

ಸೌಹಾರ್ದಕ್ಕೆ ಸಾಕ್ಷಿಯಾದ ಸೀಮಂತ

ಇದನ್ನೂ ಓದಿ: ಮಹಿಳೆಗೆ ಅಶ್ಲೀಲ ಉತ್ತರ ಕೊಟ್ಟ ಮೈಸೂರು ಮಹಾನಗರ ಪಾಲಿಕೆ ಜೋನಲ್​ ಅಧಿಕಾರಿಗೆ ಕಚೇರಿಯಲ್ಲೇ ಧರ್ಮದೇಟು: ವಿಡಿಯೋ ವೈರಲ್

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ