AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಹೆಸರಲ್ಲಿ ನಡೆಯುತ್ತಿರುವ ಬೆಳವಣಿಗೆ ವಿರೋಧಿಸಿ ಶಾಂತಿ ನೆಲೆಗಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆಯರಿಂದ ಮೌನ ಧರಣಿ

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಬಹಿಷ್ಕಾರದಂತಹ ಬೆಳವಣಿಗೆಗಳನ್ನ ಖಂಡಿಸಿ ದಾವಣಗೆರೆ ನಗರದ ಅರಳಿಮರದ ಸರ್ಕಲ್ನಲ್ಲಿ ಮುಸ್ಲಿಂ ಮಹಿಳೆಯರು ಮೌನ ಧರಣಿ ನಡೆಸಿದ್ದಾರೆ.

ಹಿಜಾಬ್ ಹೆಸರಲ್ಲಿ ನಡೆಯುತ್ತಿರುವ ಬೆಳವಣಿಗೆ ವಿರೋಧಿಸಿ ಶಾಂತಿ ನೆಲೆಗಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆಯರಿಂದ ಮೌನ ಧರಣಿ
ಮುಸ್ಲಿಂ ಮಹಿಳೆಯರಿಂದ ಮೌನ ಧರಣಿ
Follow us
TV9 Web
| Updated By: ಆಯೇಷಾ ಬಾನು

Updated on:Mar 27, 2022 | 5:18 PM

ದಾವಣಗೆರೆ: ಹಿಂದೂ ದೇವರ ಜಾತ್ರೆಗಳಿಗೆ ಅನ್ಯಧರ್ಮದ ವ್ಯಾಪಾರಸ್ಥರಿಗೆ ಅವಕಾಶ ಕೊಡಬಾರದೆಂಬ ಕೂಗು ರಾಜ್ಯದೆಲ್ಲೆಡೆ ಕೇಳಿ ಬರುತ್ತಿದೆ. ಈ ವಿವಾದಕ್ಕೆ ಸಂಬಂಧಿಸಿ ಹೊಸದೊಂದು ಹೋರಾಟಕ್ಕೆ ಮುಸ್ಲಿಂ ಮಹಿಳೆಯರು ನಾಂದಿಯಾಡಿದ್ದಾರೆ. ದಾವಣಗೆರೆ ಅರಳಿಮರದ ಸರ್ಕಲ್ ನಲ್ಲಿ ಮುಸ್ಲಿಂ ಮಹಿಳೆಯರು ಮೌನ ಪ್ರತಿಭಟನೆ ನಡೆಸಿದ್ದಾರೆ.

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಬಹಿಷ್ಕಾರದಂತಹ ಬೆಳವಣಿಗೆಗಳನ್ನ ಖಂಡಿಸಿ ದಾವಣಗೆರೆ ನಗರದ ಅರಳಿಮರದ ಸರ್ಕಲ್ನಲ್ಲಿ ಮುಸ್ಲಿಂ ಮಹಿಳೆಯರು ಮೌನ ಧರಣಿ ನಡೆಸಿದ್ದಾರೆ. ಹಿಜಾಬ್ ಹೆಸರಲ್ಲಿ ನಡೆಯುತ್ತಿರುವ ಬೆಳವಣಿಗೆ ನಿಲ್ಲಬೇಕು. ಎಲ್ಲರೂ ಬದುಕುವಂಥ ವಾತಾವರಣ ನಿರ್ಮಾಣವಾಗಲಿ. ರಾಜ್ಯದಲ್ಲಿ ಶಾಂತಿ‌ ನೆಲೆಸುವವರೆಗೂ ಪ್ರತಿಭಟನೆ ನಿಲ್ಲಲ್ಲ ಎಂದು ದಾವಣಗೆರೆಯಲ್ಲಿ ಮುಸ್ಲಿಮ್ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸವರಾಜ್ ಬೊಮ್ಮಾಯಿ ಎಲ್ಲರ ಮುಖ್ಯಮಂತ್ರಿ. ಕೇವಲ ಒಂದು ಕೋಮು ಪಂಗಡಕ್ಕೆ ಮಾತ್ರ ಸೀಮಿತವಲ್ಲ. ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟ ಬಹಿಷ್ಕಾರದಂತಹ ಚಟುವಟಿಕೆ ನಡೆಯುತ್ತಿದೆ. ಬಹಿಷ್ಕಾರದ ಹೆಸರಿನಲ್ಲಿ ಬಡವರ ಶೋಷಣೆಯಾಗುತ್ತಿದೆ. ಸಂವಿಧಾನ ಬದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ನನ್ನ ದೇಶದಲ್ಲಿ ಆಶಾಂತಿ ವಾತಾವರಣ ಕದಡುವ ಪ್ರಯತ್ನದ ವಿರುದ್ಧ ನನ್ನ ಪ್ರತಿಭಟನೆ. ಇದು ಎಲ್ಲಿಯವೆರಗೆ ನಡೆಯುತ್ತೋ ನಮಗೆ ಗೊತ್ತಿಲ್ಲ ರಾಜ್ಯದಲ್ಲಿ ಶಾಂತಿ‌ ನೆಲಸುವವರೆಗೂ ನನ್ನ ಪ್ರತಿಭಟನೆ ಎಂದು ಮಹಿಳೆ ತಿಳಿಸಿದ್ದಾರೆ.

Mandya Tasildar suspend 1

ಮುಸ್ಲಿಂ ಮಹಿಳೆಯರಿಂದ ಮೌನ ಧರಣಿ

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕಿಲ್ಲ ಜಾಗ, ಭಜರಂಗ ದಳದಿಂದ ಕ್ಯಾಂಪೇನ್ ಹಿಜಾಬ್(Hijab) ಸಂಬಂಧ ಹೈಕೋರ್ಟ್(High Court) ತೀರ್ಪು ಹೊರ ಬೀಳುತ್ತಿದ್ದಂತೆ ಕೆಲ ಮುಸ್ಲಿಮರು ತೀರ್ಪನ್ನು ವಿರೋಧಿಸಿದ್ದರು. ಭಟ್ಕಳದಲ್ಲಿ ಮುಸ್ಲಿಂ ವರ್ತಕರು ಅಂಗಡಿಗಳನ್ನು ಮುಚ್ಚಿ ವಿರೋಧ ವ್ಯಕ್ತಪಡಿಸಿದ್ದರು. ಹೈಕೋರ್ಟ್ ಆದೇಶ ವಿರೋಧಿಸಿ ಧರಣಿಗೆ ಕರೆ ನೀಡಿದ್ದರು. ಹೀಗಾಗಿ ಕಾಪು ಮಾರಿ ಪೂಜೆಯಲ್ಲಿ(Kapu mari puja) ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಮಾರಿಗುಡಿ ಹರಾಜಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿಲ್ಲ. ಹಿಂದೂ ದೇಗುಲಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿವಿಧ ದೇಗುಲಗಳ ಮುಂದೆ ಬೇಡಿಕೆ ಇಡಲಾಗಿದೆ. ಮಂಗಳೂರಿನ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ.

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ನಿರ್ಬಂಧ ಹಿನ್ನೆಲೆ ಶಿವಮೊಗ್ಗ ನಗರದ ಪ್ರಸಿದ್ಧ ಮಾರಿಕಾಂಬ ಜಾತ್ರೆಯಲ್ಲೂ ನಿರ್ಬಂಧ ಹೇರಲಾಗಿದೆ. ಬಜರಂಗದಳ ಕಾರ್ಯಕರ್ತರ ಹರ್ಷ ಕೊಲೆ ಪರಿಣಾಮ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಮಾರಿಕಾಂಬ ಜಾತ್ರೆಯನ್ನು ಇಂದಿನಿಂದ ಆರಂಭಿಸಲಾಗಿದೆ. ಜಾತ್ರೆಯಲ್ಲಿ ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಈ ಬಗ್ಗೆ ಬಜರಂಗದಳ ಮುಖಂಡ ದೀನ್ ದಯಾಳ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಕುಟುಂಬಗಳಿಗೆ ಹೊಟ್ಟೆ ಮೇಲೆ ತಣ್ಣೀರ ಬಟ್ಟೆ; ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕಿಲ್ಲ ಜಾಗ, ಭಜರಂಗ ದಳದಿಂದ ಕ್ಯಾಂಪೇನ್

ನಮ್ಮ ಸಮುದಾಯ ಶಿಕ್ಷಣದಿಂದ ವಂಚಿತರಾಗಬಾರದು: ಮುಸ್ಲಿಂ ಸಮುದಾಯಕ್ಕೆ ಉಡುಪಿ ಖಾಜಿ ಕಿವಿಮಾತು

Published On - 5:17 pm, Sun, 27 March 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್