AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯದ ನಡುವೆ ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಿ ಹಾರೈಸಿದ ಮುಸ್ಲಿಮರು

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ನಾಳೆ ಒಂದೇ ದಿನ ಬಾಕಿ ಇದೆ. ನಾಡಿದ್ದು (ಜನವರಿ 22) ಮಂದಿರ ಲೋಕಾರ್ಪಣೆಗೊಳ್ಳಲಿದೆ. ಇಡೀ ದೇಶದ ಹಿಂದೂಗಳು ಅ ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಅಲ್ಲದೆ, ಹಿಂದೂ ಕಾರ್ಯಕರ್ತರು ಮನೆ ಮನೆಗಳಿಗೆ ಅಯೋಧ್ಯೆ ಮಂತ್ರಾಕ್ಷತೆ ಹಾಗೂ ಪೋಟೋವನ್ನು ನೀಡುತ್ತಿದ್ದಾರೆ. ಮಂತ್ರಾಕ್ಷತೆ ಬಗ್ಗೆ ರಾಜಕಾರಣಿಗಳು ನೀಚ ರಾಜಕೀಯ ಮಾಡಿದರೆ ಇತ್ತ, ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯದವರು ಮಂತ್ರಾಕ್ಷತೆ ಸ್ವೀಕರಿಸಿ ರಾಮ ಮಂದಿರ ಉದ್ಘಾಟನೆಗೆ ಹಾರೈಸಿ ಭಾವೈಕ್ಯತೆ ಸಾರಿದ್ದಾರೆ.

ರಾಜಕೀಯದ ನಡುವೆ ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಿ ಹಾರೈಸಿದ ಮುಸ್ಲಿಮರು
ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆ ಸ್ವೀಕರಿಸಿದ ಮುಸ್ಲಿಂ ಮಹಿಳೆ (ಎಡಚಿತ್ರ) ಮತ್ತು ಮುಸ್ಲಿಂ ಮಹಿಳೆಗೆ ಸಿಹಿ ತಿನ್ನಿಸುತ್ತಿರುವುದು (ಬಲ ಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jan 20, 2024 | 9:14 PM

Share

ದಾವಣಗೆರೆ, ಜ.20: ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ಉದ್ಘಾಟನೆ ಕ್ಷಣಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಂಡು ದೀಪಾವಳಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ, ದೇಶಾದ್ಯಂತ ಅಯೋಧ್ಯೆ ಮಂತ್ರಾಕ್ಷತೆ ಹಾಗೂ ರಾಮ ಮಂದಿರ ಪೋಟೋವನ್ನು ಕೂಡ ಹಿಂದೂ ಕಾರ್ಯಕರ್ತರು, ಮುಖಂಡರು, ಮನೆ ಮನೆಗೆ ತೆರಳಿ ನೀಡುತ್ತಿದ್ದಾರೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ (Davanagere) ನೀಡಲಾಗುತ್ತಿದ್ದು, ಮುಸ್ಲಿಂ ಸಮುದಾಯದವರೂ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಶುಭ ಹಾರೈಸಿ ಭಾವೈಕ್ಯತೆ ಸಾರಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಡರ ನಾಯಕನಹಳ್ಳಿಯಲ್ಲಿ ವಿಭಿನ್ನವಾಗಿ ಮಂತ್ರಾಕ್ಷತೆ ರಾಮ ಮಂದಿರ ಪೋಟೋ ಮನೆ ಮನೆಗೂ‌ ನೀಡುತ್ತಿದ್ದು, ಅದರಲ್ಲೂ ಮಹಿಳೆಯರ ತಂಡ ಮಂತ್ರಾಕ್ಷತೆ ಪೋಟೋ ಜೊತೆ ಮಹಿಳೆಯರಿಗೆ ಬಳೆ ಅರಿಶಿಣ ಕುಂಕುಮ ಕೊಟ್ಟು ಶ್ರೀರಾಮ‌ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಭಿಯಾನ ನಡೆಸುತ್ತಿದ್ದಾರೆ.‌

ಈ ಅಭಿಯಾನದಲ್ಲಿ ಮುಸ್ಲಿಮರು ಕೂಡ ಭಾಗಿಯಾಗಿದ್ದು, ಅವರು ಕೂಡ ಶ್ರೀರಾಮ‌ನ ಮಂತ್ರಾಕ್ಷತೆ ಪೋಟೋ ಪಡೆದು ಸಂಭ್ರಮದಲ್ಲಿ ಭಾಗವಹಿಸಿದರು.‌ ನಾವು ಕೂಡ ರಾಮ ಭಕ್ತರೇ. ಎಲ್ಲಾ ದೇವರು ಒಂದೇ, ನಾವು ಕೂಡ ಭಾರತೀಯರು ಎನ್ನುವುದರ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಇದನ್ನೂ ಓದಿ: ಉಚ್ಛ್ರಾಯ ಸ್ಥಿತಿ ತಲುಪಿದ ರಾಮ ಜಪ, ಜೈಲಿನಲ್ಲಿ ಕೈದಿಗಳಿಗೂ ಅಯೋಧ್ಯೆ ಮಂತ್ರಾಕ್ಷತೆ, ತುಳಸಿ ಮಾಲೆ

ಶ್ರೀರಾಮ ಮಂದಿರ ವಿಚಾರವಾಗಿ ರಾಜಕೀಯ ಮುಖಂಡರು ಕೆಸರೆರಚಾಟ ನಡೆಸುತ್ತಿದ್ದು, ರಾಮನನ್ನು ನೋಡಲು ಅಲ್ಲಿಗೆ ಹೋಗಬೇಕೆ, ರಾಮ ದೇವರೇ ಅಲ್ಲ ಎಂದು ರಾಜಕಾರಣ ಮಾಡುತ್ತಿದ್ದಾರೆ.‌ ಅದರ ನಡುವೆ ಈ ಕಡರನಾಯಕನಹಳ್ಳಿಯಲ್ಲಿ ಭಾವೈಕ್ಯತೆಯಿಂದ ರಾಮ ಮಂದಿರ ಉದ್ಘಾಟನೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸುತ್ತಿದ್ದು, ಇಡೀ ಜಿಲ್ಲೆಯಲ್ಲಿಯೇ ಒಂದು ವಿಶಿಷ್ಠವಾಗಿ ಅಯೋಧ್ಯೆ ಮಂತ್ರಾಕ್ಷತೆಯನ್ನು ವಿತರಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂ ಮುಸ್ಲಿಂ ಎನ್ನುವ ಬೇಧ ಭಾವ ಇಲ್ಲದೆ ಎಲ್ಲರೂ ಒಟ್ಟಾಗಿ ಶ್ರೀರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ ಮಾಡಲು ಪಾಲ್ಗೊಂಡಿದ್ದಾರೆ.

ಅದೇನೇ ಇರಲಿ, ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಮೇಲೆ ಎಲ್ಲಾರ ಚಿತ್ತವಿದೆ. ಈ ನಡುವೆ ಈ ರೀತಿಯ ಭಾವೈಕ್ಯತೆಯಿಂದ ಮಂತ್ರಾಕ್ಷತೆ ವಿತರಣೆ‌ ಮಾಡಿದ್ದು ಮಾತ್ರ ವಿಶೇಷವೇ ಸರಿ. ಹೀಗೆ ಎಲ್ಲಾರೂ ಒಟ್ಟಾಗಿ ಬಾಳಲಿ ಎನ್ನುವದು ನಮ್ಮ ಕಳಕಳಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Sat, 20 January 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ