AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ

ವಿಚಿತ್ರ ಹಾಗೂ ನಿಗೂಢ ಸ್ಫೋಟದ ಸದ್ದು ಕೇಳಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಜನರ ಆತಂಕಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಗ್ರಾಮಗಳಿಗೂ ಈ ಸದ್ದು ಕೇಳಿದ್ದು, ಸ್ಫೋಟದ ಸದ್ದಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಚಿಕ್ಕಮಲ್ಲನಹೊಳೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ
ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma|

Updated on: Dec 16, 2025 | 8:36 AM

Share

ದಾವಣಗೆರೆ, ಡಿಸೆಂಬರ್ 16: ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಡಿಸೆಂಬರ್ 14ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಕೇಳಿಬಂದ ವಿಚಿತ್ರ ಸ್ಫೋಟದ ಶಬ್ದ ಗ್ರಾಮಸ್ಥರಲ್ಲಿ ಭಾರಿ ಆತಂಕ ಮೂಡಿಸಿದೆ. ಬಾಂಬ್ ಸ್ಫೋಟದಂತಿದ್ದ ಈ ಶಬ್ದಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಇದೇ ಶಬ್ದವು ಅಕ್ಕಪಕ್ಕದ ಹಲವು ಗ್ರಾಮಗಳಲ್ಲೂ ಕೇಳಿಸಿಕೊಂಡಿದ್ದು, ಆತಂಕ ಇನ್ನಷ್ಟು ಹೆಚ್ಚಾಗಿದೆ. ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಕೇಳಿದ ಸ್ಫೋಟದ ಸದ್ದು ಅಲ್ಲಿ ಮಾತ್ರವಲ್ಲದೆ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರು ತಾಲ್ಲೂಕಿನ ಕೋಲಮ್ಮನಹಳ್ಳಿ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಲ್ಲಹಳ್ಳಿ ಸೇರಿದಂತೆ ಮೂರ್ನಾಲ್ಕು ಗ್ರಾಮಗಳಲ್ಲಿ ಕೇಳಿಸಿಕೊಂಡಿದೆ ಎನ್ನಲಾಗಿದೆ.

ಅಚಾನಕ್ ಕೇಳಿಬಂದ ಈ ಸ್ಫೋಟದ ಸದ್ದು ಏನೆಂಬುದರ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದು, ಇಡೀ ಗ್ರಾಮದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಭೂ ಮತ್ತು ಗಣಿ ಇಲಾಖೆ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಬ್ದಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಮುಂದಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಆದರೆ ಇನ್ನೂ ಸ್ಪಷ್ಟ ಕಾರಣ ತಿಳಿಯದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆತಂಕ ಮಾತ್ರ ಕಡಿಮೆಯಾಗಿಲ್ಲ.

ಇದನ್ನೂ ಓದಿ: ಬೀಸುವ ಗಾಳಿಯಿಂದಲೇ ಬಾಟಲ್​ಗೆ ನೀರು ತುಂಬಿಕೊಳ್ಳಬಹುದು! ದಾವಣಗೆರೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳ ವಿಶಿಷ್ಟ ಸಂಶೋಧನೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ