AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳ್ಳಕೆರೆ ಬಳಿ ಕಾರು ಪಲ್ಟಿ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು

ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪುತ್ರನಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಳ್ಳಕೆರೆ ಬಳಿ ಕಾರು ಪಲ್ಟಿ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು
ನಾಡೋಜ ಬೆಳಗಲ್ಲು ವೀರಣ್ಣ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 02, 2023 | 11:17 AM

Share

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಕಾರ್ ಪಲ್ಟಿಯಾಗಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ(91) ಸಾವನ್ನಪ್ಪಿದ್ದಾರೆ. ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರು. ಅಪಘಾತದಲ್ಲಿ ಬೆಳಗಲ್ಲು ವೀರಣ್ಣನವರ ಪುತ್ರ ಹನುಮಂತಪ್ಪಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು.belagallu veeranna

ನಿನ್ನೆಯಷ್ಟೇ ಕಾರ್‌ ಸರ್ವೀಸ್ ಮಾಡಿಸಲಾಗಿತ್ತು. ಇಂದು ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಹೊರಟ‌ ವೇಳೆ ಕಾರ್ ನ ಹಿಂಬದಿ ವೀಲ್ ನಲ್ಲಿ ತಾಂತ್ರಿಕ‌ ದೋಷ ಕಾಣಿಸಿತ್ತು. ಚಳ್ಳಕೆರೆ ಪಟ್ಟಣ ತಲುಪಿದ‌ ಬಳಿಕ ರಿಪೇರಿ ಮಾಡಿಸಿದರಾಯಿತು ಎಂದುಕೊಂಡಿದ್ದೆವು. ಹಿರೇಹಳ್ಳಿ ಬಳಿ ಏಕಾಏಕಿ ಕಾರ್ ವ್ಹೀಲ್ ಎಕ್ಸಲ್ ಕಳಚಿದ ಕಾರಣ ಕಾರ್‌ ಪಲ್ಟಿ ಆಗಿದ್ದು ದುರಂತ ಸಂಭವಿಸಿದೆ ಎಂದು ಮೃತರ ಪುತ್ರ, ಗಾಯಾಳು ಹನಹಮಂತಪ್ಪ ತಿಳಿಸಿದ್ದಾರೆ.

ನಾಡೋಜ ಬೆಳಗಲ್ಲು ವೀರಣ್ಣ ಅವರು ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದಾರೆ. ಮೂಲತಃ ತೊಗಲು ಗೊಂಬೆಯಾಟದ ಕಲಾವಿದರಾದ ಇವರು ತೊಗಲು ಗೊಂಬೆಯಾಟದ ಹಿರಿಮೆಯನ್ನು ಸಪ್ತ ಸಾಗರದ ಆಚೆ ತಲುಪಿಸಿದ ಅಪರೂಪದ ಕಲಾವಿದರು. ಶ್ರೀರಾಮಾಂಜನೇಯ ತೊಗಲು ಗೊಂಬೆ ಕಲಾ ಮೇಳವನ್ನು ಕಟ್ಟಿ ಊರೂರು, ರಾಜ್ಯ, ದೇಶ, ವಿದೇಶ ಸುತ್ತಿದವರು. ವೀರಣ್ಣನವರು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:26 am, Sun, 2 April 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್