AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davangere: ಕಾಣೆಯಾಗಿದ್ದ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಹತ್ಯೆ ಮಾಡಿ ಸುಟ್ಟು ಹಾಕಿದ್ದ ಆರೋಪಿಯನ್ನ ಬಂಧಿಸಿದ ಪೊಲಿಸರು

ನಾಲ್ಕು ತಿಂಗಳ ಹಿಂದೆ ಮಹಿಳೆಯೊಬ್ಬರು ಕಾಣೆಯಾಗಿ, ಕೊಲೆ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಕೊಲೆಗೆ ನಿಖರವಾದ ಕಾರಣ ಬೆಳಕಿಗೆ ಬಂದಿದ್ದು, ಹೀಗಿದೆ.

Davangere: ಕಾಣೆಯಾಗಿದ್ದ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಹತ್ಯೆ ಮಾಡಿ ಸುಟ್ಟು ಹಾಕಿದ್ದ ಆರೋಪಿಯನ್ನ ಬಂಧಿಸಿದ ಪೊಲಿಸರು
ಆರೋಪಿ ಸಲೀಂ ಮುನ್ನಾಖಾನ್
ಕಿರಣ್ ಹನುಮಂತ್​ ಮಾದಾರ್
|

Updated on: Jun 20, 2023 | 9:58 AM

Share

ದಾವಣಗೆರೆ: ನಾಲ್ಕು ತಿಂಗಳ ಹಿಂದೆ ಮಹಿಳೆಯೊಬ್ಬರು ಕಾಣೆಯಾಗಿ, ಕೊಲೆ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ವಿಜಯನಗರ(Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ನಿಟ್ಟೂರು ಗ್ರಾಮದ ಕವಿತಾ(35) ಎಂಬುವವರನ್ನು ಕೊಲೆ ಮಾಡಿ, ಆಕೆಯ ಶವವನ್ನ ಸುಟ್ಟುಹಾಕಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಹಲವಾಗಲು ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದರು. ಇದೀಗ 4 ತಿಂಗಳ ಬಳಿ ಕೊಲೆ ಆರೋಪದ ಮೇಲೆ ಇದೇ ತಾಲೂಕಿನ ಕುಂಚೂರು ಗ್ರಾಮದ ಸಲೀಂ ಮುನ್ನಾಖಾನ್ ಎಂಬಾತನನ್ನ ಬಂಧಿಸಿದ್ದಾರೆ.

ಘಟನೆ ವಿವರ

ದಾವಣಗೆರೆ ಜಿಲ್ಲೆಯ ಅಲೂರಿನ ತವರು ಮನೆಯಲ್ಲಿದ್ದ ಮೃತ ಕವಿತಾ 2023 ರ ಫೆಬ್ರುವರಿ 23ರಂದು ಹರಿಹರಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಮನೆಗೆ ವಾಪಾಸು ಬಂದಿರಲಿಲ್ಲ. ಗಂಡನ ಊರಾದ ನಿಟ್ಟೂರು ಸೇರಿದಂತೆ ಎಲ್ಲ ಕಡೆ ಹುಡುಕಾಡಿದರು ಪತ್ತೆಯಾಗದ ಕಾರಣ, ಕಾಣೆಯಾದ ಮಗಳನ್ನು ಪತ್ತೆ ಮಾಡಿಕೊಡುವಂತೆ ಪೊಲೀಸರಿಗೆ ಮೃತಳ ತಂದೆ ಭೀಮಪ್ಪ ಅವರು ಮಾರ್ಚ್ 7 ರಂದು ಹಲುವಾಗಲು ಠಾಣೆಗೆ ದೂರು ಸಲ್ಲಿಸಿದ್ದರು. ಈ ಕುರಿತು ಪ್ರಕರಣದ ತನಿಖೆ ನಡೆಸಿದ್ದ ಹಲವಾಗಲು ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಇದನ್ನೂ ಓದಿ:Tumakuru: ವೈಯಕ್ತಿಕ ದ್ವೇಷ; ಸ್ನೇಹಿತರೊಟ್ಟಿಗೆ ಸೇರಿ ಟೈಲ್ಸ್ ಅಂಗಡಿ ಮಾಲೀಕನನ್ನ ಕೊಲೆ ಮಾಡಿಸಿದ ಅಮ್ಮ ಮಗಳು

ತನಿಖೆ ವೇಳೆ ಸತ್ಯಾಂಶ ಬೆಳಕಿಗೆ

ಇನ್ನು ಮೃತಳೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಆರೋಪಿ ಸಲೀಂ ಫೆ.23ರಂದು ತೆಲಿಗಿ ಗ್ರಾಮಕ್ಕೆ ಬಂದಿದ್ದ ಕವಿತಾಳನ್ನು ತನ್ನ ಬೈಕ್ ಮೇಲೆ ಕೂರಿಸಿಕೊಂಡು ಕುಂಚೂರಿನ ಕೆರೆಯಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾತಿಗಿಳಿದಿದ್ದಾರೆ. ಈ ವೇಳೆ ಫೋನ್ ನಲ್ಲಿ ಮಾತನಾಡುವ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದ್ದು, ಕೋಪಗೊಂಡ ಸಲೀಂ ಕವಿತಾಳ ಕತ್ತು ಹಿಸುಕಿ ಸಾಯಿಸಿದ್ದ. ಈ ವಿಷಯ ಯಾರಿಗೂ ಗೊತ್ತಾಗದಂತೆ ತಡೆಯಲು ಕೆರೆಯಂಗಳದಲ್ಲಿಯೇ ಆಕೆಯ ಶವ ಕಟ್ಟಿಗೆಯಲ್ಲಿ ಸುಟ್ಟು ಹಾಕಿ ಮನೆಗೆ ಹಿಂತಿರುಗಿದ್ದಾನೆ. ಅಲ್ಲಿ ನಡೆದಿರುವ ಘಟನೆಯನ್ನು ಆರೋಪಿ ಈಚೆಗೆ ತನ್ನ ಸ್ನೇಹಿತನ ಬಳಿ ಹೇಳಿಕೊಂಡಿದ್ದರಿಂದ ಪ್ರಕರಣ ಪತ್ತೆಗೆ ಸಹಕಾರಿ ಆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ