AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ, ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದು ಹೇಳಿದ್ದಾರೆ.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Feb 09, 2023 | 5:31 PM

Share

ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ಒಂದು ದೊಡ್ಡ ಶಕ್ತಿ ಬಂದಿದೆ. ವಾಲ್ಮೀಕಿ ಸಮಾಜವನ್ನು (valmiki community) ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯ ರಕ್ಷಣೆ ಮಾಡಿದ್ದು ವಾಲ್ಮೀಕಿ ಸಮಾಜ. ಹೈದರಾಲಿಗೆ ಪಾಠ ಕಲಿಸಿದ್ದು ಮದಕರಿ ನಾಯಕ. ವಾಲ್ಮೀಕಿ ಅಂದ್ರೆ ಪರಿವರ್ತನೆ. ವಾಲ್ಮೀಕಿ ರಾಮಾಯಣದಲ್ಲಿ ಜೀವನಕ್ರಮ, ಜೀವನಶೈಲಿ ಬಗ್ಗೆ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai) ವಾಲ್ಮೀಕಿ ಸಮಾಜವನ್ನು ಗುಣಗಾನ ಮಾಡಿದರು.

ಇಂದು(ಫೆಬ್ರವರಿ 09) ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ನಾನು ಬಯಸಿ ಸಿಎಂ ಆಗಿಲ್ಲ. ನಿಮ್ಮೆಲ್ಲರ ಹಾರೈಕೆಯಿಂದ ಆಗಿದ್ದೇನೆ. ನಮ್ಮ ನಾಯಕ ನರೇಂದ್ರ ಮೋದಿಯಿಂದ ನಾನು ಸಿಎಂ ಆಗಿದ್ದೇನೆ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ. ಇದರಿಂದ ಕಲಿಯುಗದಲ್ಲಿ ಇದೊಂದು ಪರಿವರ್ತನೆ ಆಗುತ್ತದೆ. ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ನೀತಿ ಜಾರಿಗೆ ಬರಲಿದೆ. ಆದೇಶ ಪ್ರತಿ ಸ್ವಾಮೀಜಿಗೆ ತೋರಿಸಿದ್ದೇನೆ. ಮೀಸಲಾತಿ ಹೆಚ್ಚಳ ಬಗ್ಗೆ ಶೆಡ್ಯೂಲ್​9ರಲ್ಲಿ ಸೇರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದರು.

SC, ST ಸಮುದಾಯಕ್ಕೆ 75 ಯೂನಿಟ್​ ಉಚಿತ ವಿದ್ಯುತ್​ ನೀಡುತ್ತಿದ್ದೇವೆ. ಪರಿಶಿಷ್ಟ ಪಂಗಡದ ಮೇಲೆ ಪ್ರಧಾನಿ ಮೋದಿಗೆ ಅಪಾರ ಗೌರವವಿದೆ. ಬುಡಕಟ್ಟು ಸಮುದಾಯದ ಮಹಿಳೆಗೆ ರಾಷ್ಟ್ರಪತಿ ಹುದ್ದೆ ನೀಡಿದ್ದಾರೆ. ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದರು.

ಇನ್ನು ಇದೇ ವೇಳೆ ಎಸ್​​ಸಿ, ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿ ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ‌ಪುರಿಶ್ರೀ, 151 ಜಾತಿಗಳಿಗೆ ಮೀಸಲಾತಿ ಹೆಚ್ಚಳ ಆಗಿದೆ. ಸಿಎಂ ಬೊಮ್ಮಾಯಿ ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಿಸಿದ್ದಾರೆ. ಮೀಸಲಾತಿ ಹೆಚ್ಚಿಸುವುದು ಜೇನುಗೂಡಿಗೆ ಕಲ್ಲು ಹೊಡೆದಂತೆ. ಸಿಎಂ ಬೊಮ್ಮಾಯಿ ಇಂತಹ ಮಹತ್ವದ ಕೆಲಸ ಮಾಡಿದ್ದಾರೆ. ಕಲ್ಲು ಹೊಡೆದು ಜೇನು ಹುಳುಗಳಿಂದ ಕಚ್ಚಿಸಿಕೊಂಡಿದ್ದು ಸಿಎಂ. ವಾಲ್ಮೀಕಿ ಸಮುದಾಯಕ್ಕೆ ತುಪ್ಪ ಕೊಟ್ಟಿದ್ದಾರೆ. ಸಿಎಂ ಬೊಮ್ಮಾಯಿ ಅಭಿನವ ಬಸವಣ್ಣ ಎಂದು ಹಾಡಿಹೊಗಳಿದರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್