AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ, ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದು ಹೇಳಿದ್ದಾರೆ.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Feb 09, 2023 | 5:31 PM

Share

ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ಒಂದು ದೊಡ್ಡ ಶಕ್ತಿ ಬಂದಿದೆ. ವಾಲ್ಮೀಕಿ ಸಮಾಜವನ್ನು (valmiki community) ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯ ರಕ್ಷಣೆ ಮಾಡಿದ್ದು ವಾಲ್ಮೀಕಿ ಸಮಾಜ. ಹೈದರಾಲಿಗೆ ಪಾಠ ಕಲಿಸಿದ್ದು ಮದಕರಿ ನಾಯಕ. ವಾಲ್ಮೀಕಿ ಅಂದ್ರೆ ಪರಿವರ್ತನೆ. ವಾಲ್ಮೀಕಿ ರಾಮಾಯಣದಲ್ಲಿ ಜೀವನಕ್ರಮ, ಜೀವನಶೈಲಿ ಬಗ್ಗೆ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai) ವಾಲ್ಮೀಕಿ ಸಮಾಜವನ್ನು ಗುಣಗಾನ ಮಾಡಿದರು.

ಇಂದು(ಫೆಬ್ರವರಿ 09) ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ನಾನು ಬಯಸಿ ಸಿಎಂ ಆಗಿಲ್ಲ. ನಿಮ್ಮೆಲ್ಲರ ಹಾರೈಕೆಯಿಂದ ಆಗಿದ್ದೇನೆ. ನಮ್ಮ ನಾಯಕ ನರೇಂದ್ರ ಮೋದಿಯಿಂದ ನಾನು ಸಿಎಂ ಆಗಿದ್ದೇನೆ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ. ಇದರಿಂದ ಕಲಿಯುಗದಲ್ಲಿ ಇದೊಂದು ಪರಿವರ್ತನೆ ಆಗುತ್ತದೆ. ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ನೀತಿ ಜಾರಿಗೆ ಬರಲಿದೆ. ಆದೇಶ ಪ್ರತಿ ಸ್ವಾಮೀಜಿಗೆ ತೋರಿಸಿದ್ದೇನೆ. ಮೀಸಲಾತಿ ಹೆಚ್ಚಳ ಬಗ್ಗೆ ಶೆಡ್ಯೂಲ್​9ರಲ್ಲಿ ಸೇರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದರು.

SC, ST ಸಮುದಾಯಕ್ಕೆ 75 ಯೂನಿಟ್​ ಉಚಿತ ವಿದ್ಯುತ್​ ನೀಡುತ್ತಿದ್ದೇವೆ. ಪರಿಶಿಷ್ಟ ಪಂಗಡದ ಮೇಲೆ ಪ್ರಧಾನಿ ಮೋದಿಗೆ ಅಪಾರ ಗೌರವವಿದೆ. ಬುಡಕಟ್ಟು ಸಮುದಾಯದ ಮಹಿಳೆಗೆ ರಾಷ್ಟ್ರಪತಿ ಹುದ್ದೆ ನೀಡಿದ್ದಾರೆ. ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದರು.

ಇನ್ನು ಇದೇ ವೇಳೆ ಎಸ್​​ಸಿ, ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿ ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ‌ಪುರಿಶ್ರೀ, 151 ಜಾತಿಗಳಿಗೆ ಮೀಸಲಾತಿ ಹೆಚ್ಚಳ ಆಗಿದೆ. ಸಿಎಂ ಬೊಮ್ಮಾಯಿ ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಿಸಿದ್ದಾರೆ. ಮೀಸಲಾತಿ ಹೆಚ್ಚಿಸುವುದು ಜೇನುಗೂಡಿಗೆ ಕಲ್ಲು ಹೊಡೆದಂತೆ. ಸಿಎಂ ಬೊಮ್ಮಾಯಿ ಇಂತಹ ಮಹತ್ವದ ಕೆಲಸ ಮಾಡಿದ್ದಾರೆ. ಕಲ್ಲು ಹೊಡೆದು ಜೇನು ಹುಳುಗಳಿಂದ ಕಚ್ಚಿಸಿಕೊಂಡಿದ್ದು ಸಿಎಂ. ವಾಲ್ಮೀಕಿ ಸಮುದಾಯಕ್ಕೆ ತುಪ್ಪ ಕೊಟ್ಟಿದ್ದಾರೆ. ಸಿಎಂ ಬೊಮ್ಮಾಯಿ ಅಭಿನವ ಬಸವಣ್ಣ ಎಂದು ಹಾಡಿಹೊಗಳಿದರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್