AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ, ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದು ಹೇಳಿದ್ದಾರೆ.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Feb 09, 2023 | 5:31 PM

Share

ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ಒಂದು ದೊಡ್ಡ ಶಕ್ತಿ ಬಂದಿದೆ. ವಾಲ್ಮೀಕಿ ಸಮಾಜವನ್ನು (valmiki community) ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯ ರಕ್ಷಣೆ ಮಾಡಿದ್ದು ವಾಲ್ಮೀಕಿ ಸಮಾಜ. ಹೈದರಾಲಿಗೆ ಪಾಠ ಕಲಿಸಿದ್ದು ಮದಕರಿ ನಾಯಕ. ವಾಲ್ಮೀಕಿ ಅಂದ್ರೆ ಪರಿವರ್ತನೆ. ವಾಲ್ಮೀಕಿ ರಾಮಾಯಣದಲ್ಲಿ ಜೀವನಕ್ರಮ, ಜೀವನಶೈಲಿ ಬಗ್ಗೆ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai) ವಾಲ್ಮೀಕಿ ಸಮಾಜವನ್ನು ಗುಣಗಾನ ಮಾಡಿದರು.

ಇಂದು(ಫೆಬ್ರವರಿ 09) ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ನಾನು ಬಯಸಿ ಸಿಎಂ ಆಗಿಲ್ಲ. ನಿಮ್ಮೆಲ್ಲರ ಹಾರೈಕೆಯಿಂದ ಆಗಿದ್ದೇನೆ. ನಮ್ಮ ನಾಯಕ ನರೇಂದ್ರ ಮೋದಿಯಿಂದ ನಾನು ಸಿಎಂ ಆಗಿದ್ದೇನೆ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ. ಇದರಿಂದ ಕಲಿಯುಗದಲ್ಲಿ ಇದೊಂದು ಪರಿವರ್ತನೆ ಆಗುತ್ತದೆ. ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ನೀತಿ ಜಾರಿಗೆ ಬರಲಿದೆ. ಆದೇಶ ಪ್ರತಿ ಸ್ವಾಮೀಜಿಗೆ ತೋರಿಸಿದ್ದೇನೆ. ಮೀಸಲಾತಿ ಹೆಚ್ಚಳ ಬಗ್ಗೆ ಶೆಡ್ಯೂಲ್​9ರಲ್ಲಿ ಸೇರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದರು.

SC, ST ಸಮುದಾಯಕ್ಕೆ 75 ಯೂನಿಟ್​ ಉಚಿತ ವಿದ್ಯುತ್​ ನೀಡುತ್ತಿದ್ದೇವೆ. ಪರಿಶಿಷ್ಟ ಪಂಗಡದ ಮೇಲೆ ಪ್ರಧಾನಿ ಮೋದಿಗೆ ಅಪಾರ ಗೌರವವಿದೆ. ಬುಡಕಟ್ಟು ಸಮುದಾಯದ ಮಹಿಳೆಗೆ ರಾಷ್ಟ್ರಪತಿ ಹುದ್ದೆ ನೀಡಿದ್ದಾರೆ. ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದರು.

ಇನ್ನು ಇದೇ ವೇಳೆ ಎಸ್​​ಸಿ, ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿ ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ‌ಪುರಿಶ್ರೀ, 151 ಜಾತಿಗಳಿಗೆ ಮೀಸಲಾತಿ ಹೆಚ್ಚಳ ಆಗಿದೆ. ಸಿಎಂ ಬೊಮ್ಮಾಯಿ ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಿಸಿದ್ದಾರೆ. ಮೀಸಲಾತಿ ಹೆಚ್ಚಿಸುವುದು ಜೇನುಗೂಡಿಗೆ ಕಲ್ಲು ಹೊಡೆದಂತೆ. ಸಿಎಂ ಬೊಮ್ಮಾಯಿ ಇಂತಹ ಮಹತ್ವದ ಕೆಲಸ ಮಾಡಿದ್ದಾರೆ. ಕಲ್ಲು ಹೊಡೆದು ಜೇನು ಹುಳುಗಳಿಂದ ಕಚ್ಚಿಸಿಕೊಂಡಿದ್ದು ಸಿಎಂ. ವಾಲ್ಮೀಕಿ ಸಮುದಾಯಕ್ಕೆ ತುಪ್ಪ ಕೊಟ್ಟಿದ್ದಾರೆ. ಸಿಎಂ ಬೊಮ್ಮಾಯಿ ಅಭಿನವ ಬಸವಣ್ಣ ಎಂದು ಹಾಡಿಹೊಗಳಿದರು.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ