AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷದ ಹಿಂದೆ ನಾಪತ್ತೆಯಾದ‌ ಮಹಿಳೆ ತನಿಖೆಗೆ ಅನಾಮಧೇಯ ಶವ ತೆಗೆದು ಡಿಎನ್​ಎ ಪರೀಕ್ಷೆ

2020ರಲ್ಲಿ 40 ವರ್ಷದ ಅರೆಬರೆ ಕೊಳೆತ ಮಹಿಳೆಯ ಶವ ಭದ್ರನಾಲೆ ಮುಖಾಂತರ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯ ಸೂಳೆಕೆರೆ ತಲುಪಿತ್ತು. ಗುರುತು ಸಿಗದ ಹಿನ್ನೆಲೆ ಪೊಲೀಸರು ಶವ ಹೂತಿದ್ದರು. ಆದರೆ ನಾಲ್ಕು ವರ್ಷದ ಹಿಂದೆ ನಾಪತ್ತೆಯಾದ ಮಹಿಳೆಯ ಗುರುತು ಹಾಗೂ ಶವದ ಗುರುತು ಸಾಮ್ಯತೆ ಇದ್ದು ಶವ ಹೊರಕ್ಕೆ ತೆಗೆದು ತನಿಖೆ ನಡೆಸಲಾಗುತ್ತಿದೆ.

ನಾಲ್ಕು ವರ್ಷದ ಹಿಂದೆ ನಾಪತ್ತೆಯಾದ‌ ಮಹಿಳೆ ತನಿಖೆಗೆ ಅನಾಮಧೇಯ ಶವ ತೆಗೆದು ಡಿಎನ್​ಎ ಪರೀಕ್ಷೆ
ಶವ ಹೊರ ತೆಗೆದ ಅಧಿಕಾರಿಗಳು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು|

Updated on: Feb 03, 2024 | 10:55 AM

Share

ದಾವಣಗೆರೆ, ಫೆ.03: ಡಿಎನ್‌ಎ (DNA) ಪರೀಕ್ಷೆಗಾಗಿ ಹೂತ ಶವ ಹೊರಕ್ಕೆ ತೆಗೆದು ವೈದ್ಯರು, ಅಧಿಕಾರಿಗಳು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಹೂತಿರುವ ಅನಾಮಧೇಯ ಶವ ಹಾಗೂ ನಾಲ್ಕು ವರ್ಷದ ಹಿಂದೆ ‌ನಾಪತ್ತೆಯಾದ ಮಹಿಳೆಗೆ ಸಾಮ್ಯತೆ ಇರುವ ಹಿನ್ನೆಲೆ ಕೋರ್ಟ್ ಆದೇಶ ನೀಡಿದ್ದು ನ್ಯಾಯಾಲಯದ ಆದೇಶದ ಹಿನ್ನೆಲೆ ಹೂತ ಶವ (Dead Body) ಹೊರಕ್ಕೆ ತೆಗೆಯಲಾಗಿದೆ. ಜಿಲ್ಲೆಯ ಚನ್ನಗಿರಿ ತಾಲೂಕು ಐತಿಹಾಸಿಕ ಸೂಳೆಕೆರೆ ಬದಿಯಲ್ಲಿ ವಾರಸುದಾರರು ಇಲ್ಲದ ಹಿನ್ನೆಲೆ ಪೊಲೀಸರು ನಿಯಮಾನುಸಾರ ಮಹಿಳೆಯ ಶವವನ್ನು ಹೂತಿದ್ದರು.

2020ರಲ್ಲಿ ಸುಮಾರು 40 ವರ್ಷದ ಅನಾಮಧೇಯ ಮಹಿಳೆಯ ಶವವನ್ನು ಹೂತಲಾಗಿತ್ತು. ತನಿಖೆಗಾಗಿ ಶವ ಹೊರಕ್ಕೆ ತೆಗೆಯಲಾಗಿದೆ. 2020ರಲ್ಲಿ 40 ವರ್ಷದ ಅರೆಬರೆ ಕೊಳೆತ ಮಹಿಳೆಯ ಶವ ಭದ್ರನಾಲೆ ಮುಖಾಂತರ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯ ಸೂಳೆಕೆರೆ ತಲುಪಿತ್ತು. ಆಗ ಗುರುತಿಸಲಾಗದಂತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ವಾರಸುದಾರರು ಇಲ್ಲದ ಹಿನ್ನೆಲೆ ಅಧಿಕಾರಿಗಳೇ ಶವಸಂಸ್ಕಾರ ಮಾಡಿದ್ದರು. ಆದರೆ ಈಗ ನಾಲ್ಕು ವರ್ಷದ ಹಿಂದೆ ಕಾಣೆಯಾದ ಶಿವಮೊಗ್ಗ ಜಿಲ್ಲೆಯ ಓರ್ವ ಮಹಿಳೆಗೆ ಹೂತ್ತಿದ್ದ ಮೃತದೇಹ ಸಾಮ್ಯತೆಯಾಗಿರುವ ಇರುವ ಹಿನ್ನೆಲೆ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರತೋಳಲು ಕೈಮರದ ನಾಗರತ್ನಮ್ಮ ಕಾಣೆಯಾದ ಬಗ್ಗೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಮಹಿಳೆಯ ಭಾವಚಿತ್ರ, ಸೂಳೆಕೆರೆ ಸಮೀಪದ ಭದ್ರಾ ನಾಲೆಯಲ್ಲಿ ದೊರೆತ ಅನಾಮದೇಯ ಶವ ಭಾಗಶಃ ಹೋಲಿಕೆಯಾಗಿದೆ. ಹೋಲಿಕೆ, ಶಂಕೆ ಹಿನ್ನೆಲೆ ಚನ್ನಗಿರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ದಾವಣಗೆರೆ ಎಫ್ ಎಸ್ ಎಲ್ ತಜ್ಞರು ಮತ್ತು ಚಿಗಟೇರಿ ಆಸ್ಪತ್ರೆಯ ವೈದ್ಯರ ಸಮ್ಮುಖದಲ್ಲಿ ಶವ ಹೊರಕ್ಕೆ ತೆಗೆಯಲಾಗಿದೆ. ಡಿಎನ್ಎ ಪರೀಕ್ಷೆಗೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಮೃತದೇಹ ರವಾನಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಆನೆ ಬಂಡೀಪುರದ ರಾಮಾಪುರ ಬಿಡಾರದಲ್ಲಿ ಸಾವು

ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಮಚ್ಚಿನಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕೀಲುಕೊಪ್ಪದಲ್ಲಿ ಘಟನೆ ನಡೆದಿದ್ದು, ಗೌತಮ್ ಎಂಬುವವನು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ತೆಗೆಯುವ ವಿಚಾರಕ್ಕೆ ರವಿಕುಮಾರ್ ಮತ್ತು ಗೌತಮ್ ಮಧ್ಯೆ ಗಲಾಟೆ ಶುರುವಾಗಿದೆ. ಈ ವೇಳೆ ಗೌತಮ್​ಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!