AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murugha Shree Arrested: ಮೊನ್ನೇ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ಮತ್ತೆ ಅರೆಸ್ಟ್!

Chitradurga Shivamurthy Sharanaru Arrested: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ 2ನೇ ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

Murugha Shree Arrested: ಮೊನ್ನೇ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ  ಮುರುಘಾಶ್ರೀ ಮತ್ತೆ ಅರೆಸ್ಟ್!
ಮುರುಘಾ ಶ್ರೀ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 20, 2023 | 3:21 PM

ದಾವಣಗೆರೆ/ಚಿತ್ರದುರ್ಗ, (ನವೆಂಬರ್ 20): ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (sexually assaulting)  ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ (Shivamurthy Sharanaru) ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು(ನವೆಂಬರ್ 20)  ಕೋರ್ಟ್ ಅರೆಸ್ಟ್​ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.

ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ್ದ ಮುರುಘಾಶ್ರೀ ಜಾಮೀನಿನ ಮೇಲೆ ನವೆಂಬರ್ 16ರಂದು ಬಿಡುಗಡೆಯಾಗಿದ್ದರು. ಆದ್ರೆ ಇದೀಗ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ. 2022 ಅಕ್ಟೋಬರ್ 13ರಂದು ಮುರುಘಾಶ್ರೀ ವಿರುದ್ಧ ಮೈಸೂರಿನ ನಜರ್​ಬಾದ್ ಪೊಲೀಸ್ ಠಾಣೆಯಲ್ಲಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಇದನ್ನೂ ಒದಿ: ಬಾಡಿ ವಾರಂಟ್ ಇದ್ದರೂ ಜೈಲಿನಿಂದ ಮುರುಘಾಶ್ರೀ ಬಿಡುಗಡೆ; ಕಾರಾಗೃಹ ಇಲಾಖೆಯಿಂದ ತನಿಖೆಗೆ ಸೂಚಿಸಿದ ನ್ಯಾಯಾಲಯ

ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀ ಬಂಧನವಾಗಿದೆ.

ಇತ್ತೀಚೆಗೆ 1ನೇ ಪೊಕ್ಸೋ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ನವೆಂಬರ್ 16ರಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಎರಡೂ ಕಡೆಯ ವಾದ ಆಲಿಸಿದ್ದ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಅರೆಸ್ಟ್ ವಾರೆಂಟ್ ಆದೇಶ ನೀಡಿತ್ತು. ಹೀಗಾಗಿ ಪೊಲೀಸರು ಮುರುಘಾಶ್ರೀಗಳನ್ನು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Mon, 20 November 23

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್