AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3000 ರೂ, 3 ಕೆಜಿ ಮಟನ್ ಕೊಟ್ಟರೂ ಮನೆಯ ಇ-ಸ್ವತ್ತು ಆಗುತ್ತಿಲ್ಲ: ಪಿಡಿಒ ವಿರುದ್ಧ ಹೀಗೊಂದು ಲಂಚದ ಆರೋಪ!

ಸರ್ಕಾರಿ ಕಚೇರಿಗಳಲ್ಲಿ, ಪೋಲಿಸ್ ಇಲಾಖೆಯ ಕಚೇರಿಗಳಲ್ಲಿ ಲಂಚ ಕೇಳುವ ಬಗ್ಗೆ, ಲಂಚಕ್ಕಾಗಿ ಪೀಡಿಸುವ ಕುರಿತು ಆಗಾಗ ಆರೋಪಗಳನ್ನು ಕೇಳುತ್ತಿರುತ್ತೇವೆ. ಆದರೆ ದಾವಣಗೆರೆಯನ್ನು ವಿಚಿತ್ರ ಲಂಚ ಪ್ರಕರಣ ವರದಿಯಾಗಿದೆ. ಜಗಳೂರು ತಾಲೂಕಿನ ಹನಮಂತಾಪುರ ಗ್ರಾಮದಲ್ಲಿ ವಿಭಿನ್ನ ಆರೋಪವೊಂದು ಕೇಳಿಬಂದಿದೆ. ಅದೇನು ಎಂಬ ಮಾಹಿತಿ ಇಲ್ಲಿದೆ.

3000 ರೂ, 3 ಕೆಜಿ ಮಟನ್ ಕೊಟ್ಟರೂ ಮನೆಯ ಇ-ಸ್ವತ್ತು ಆಗುತ್ತಿಲ್ಲ: ಪಿಡಿಒ ವಿರುದ್ಧ ಹೀಗೊಂದು ಲಂಚದ ಆರೋಪ!
ಸಾಂದರ್ಭಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 17, 2025 | 9:07 AM

Share

ದಾವಣಗೆರೆ, ಏಪ್ರಿಲ್ 17: ಸಾವಿರಾರು ರೂಪಾಯಿ, ಲಕ್ಷಾಂತರ ರೂಪಾಯಿ ಲಂಚ ಪಡೆದ ಅಥವಾ ಲಂಚಕ್ಕಾಗಿ (Bribery) ಪೀಡಿಸುವ ಆರೋಪಗಳನ್ನು ಆಗಾಗ ಅಲ್ಲಲ್ಲಿ ಕೇಳಿರುತ್ತೇವೆ. ಆದರೆ, ದಾವಣಗೆರೆಯ (Davanagere) ಜಗಳೂರು ತಾಲೂಕಿನ ಹನಮಂತಾಪುರದಲ್ಲಿ ಪಿಡಿಒ ವಿರುದ್ಧ ಗ್ರಾಮ ಪಂಚಾಯತ್  ಸದಸ್ಯರೊಬ್ಬರು ವಿಭಿನ್ನ ಆರೋಪ ಮಾಡಿದ್ದಾರೆ. ಪಿಡಿಒ ಅವರಿಗೆ ಮೂರು ಸಾವಿರ ರೂಪಾಯಿ ಹಾಗೂ ಮೂರು ಕೆಜಿ ಮಟನ್ ಕೊಟ್ಟಿದ್ದೇನೆ. ಆದರೂ ಮನೆಯ ಇ-ಸ್ವತ್ತು ಆಗುತ್ತಿಲ್ಲ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎದುರು ಗ್ರಾಮ ಪಂಚಾಯತ್  ಸದಸ್ಯ ಕುಬೇರಪ್ಪ ಆರೋಪ ಮಾಡಿದ್ದಾರೆ.

ಆರೋಪ ಕೇಳಿಬಂದ ತಕ್ಷಣವೇ ಪಿಡಿಒ ಬಳಿ ಡಾ. ನಾಗಲಕ್ಷ್ಮಿ ಚೌಧರಿ ಸ್ಪಷ್ಟನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಪಿಡಿಒ ಓಬಣ್ಣ, ತಾವು ಅಧಿಕಾರ ವಹಿಸಿ ಮೂರು ತಿಂಗಳಷ್ಟೇ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರದಿಂದ ಗರ್ಭಿಣಿಯರಿಗೆ ಆಹಾರ ಸಾಮಗ್ರಿ ಸರಿಯಾಗಿ ತಲುಪುತ್ತಿಲ್ಲ. ಜೊತೆಗೆ ಗ್ರಾಮದಲ್ಲಿ ಅನಾದಿಕಾಲದಿಂದ ಮುಟ್ಟಾದ ಹೆಣ್ಣು ಮಕ್ಕಳನ್ನು ಗ್ರಾಮದ ಹೊರಗಡೆ ಇಡುವ ಪದ್ಧತಿ ಕೆಲವು ಕಡೆ ಇದೆ ಎಂಬ ಆರೋಪಗಳ ಬಗ್ಗೆಯೂ ಚೌಧರಿ ಮಾಹಿತಿ ಪಡೆದಿದ್ದಾರೆ. ಮುಟ್ಟು ಮೈಲಿಗೆ ಅಲ್ಲ. ಮನುಕುಲದ ಸೃಷ್ಟಿಗೆ ಮುಟ್ಟು ಕಾರಣ ಎಂದು ಅವರು ಗ್ರಾಮಸ್ಥರಿಗೆ ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ
Image
ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ
Image
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
Image
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
Image
ಲಾರಿ ಮುಷ್ಕರ ತೀವ್ರ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವ ಸಾಧ್ಯತೆ

ಎಪಿಎಂಸಿ ಆವರಣದಲ್ಲಿ ಮಳೆ ಅವಾಂತರ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಜಗಳೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಗಾಳಿ ಮಳೆಯಿಂದಾಗಿ ಖರೀದಿ ಕೇಂದ್ರಕ್ಕೆ ರಾಗಿ ತಂದಿದ್ದ ರೈತರು ಕಂಗಾಲಾಗಿದ್ದಾರೆ. 4 ದಿನಗಳಿಂದ ಸರ್ಕಾರ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುತ್ತಿರುವ ಕಾರಣ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬೆಳೆ ತಂದಿದ್ದರು. ಅಕಾಲಿಕ ಮಳೆಯಿಂದಾಗಿ ಟ್ರ್ಯಾಕ್ಟರ್​ಗಳಲ್ಲಿ ರಾಗಿ ತಂದಿರುವ ರೈತರಿಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ದಾವಣಗೆರೆ: ಅನೈತಿಕ ಸಂಬಂಧ ಆರೋಪಿಸಿ ಮಹಿಳೆ ಮೇಲೆ ಹಲ್ಲೆ, 6 ಮಂದಿ ಅರೆಸ್ಟ್​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ