AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಿಂದ ಶಾಲೆಯಲ್ಲಿ ಕಸಗೂಡಿಸುತ್ತಾ ಶಾಸಕರಾದ ದೇವೇಂದ್ರಪ್ಪ -ಒಬ್ಬ ಮಗನನ್ನು IRS, ಮತ್ತೊಬ್ಬನನ್ನು ನರ್ಸಿಂಗ್​​ ಮಾಡಿಸಿದರು!

ದೇವೇಂದ್ರಪ್ಪದು ತುಂಬು ಜೀವನ-ತುಂಬಿದ ಕೊಡ: 30 ವರ್ಷದಿಂದ ಶಾಲೆಯಲ್ಲಿ ಕಸಗೂಡಿಸುತ್ತಾ ಶಾಸಕರಾದರು-ಒಬ್ಬ ಮಗನನ್ನು IRS, ಮತ್ತೊಬ್ಬನನ್ನು ನರ್ಸಿಂಗ್​​ ಮಾಡಿಸಿದರು!

30 ವರ್ಷದಿಂದ ಶಾಲೆಯಲ್ಲಿ ಕಸಗೂಡಿಸುತ್ತಾ ಶಾಸಕರಾದ ದೇವೇಂದ್ರಪ್ಪ -ಒಬ್ಬ ಮಗನನ್ನು IRS, ಮತ್ತೊಬ್ಬನನ್ನು ನರ್ಸಿಂಗ್​​ ಮಾಡಿಸಿದರು!
ಜವಾನಗಿರಿಯಿಂದ ವಿಧಾನ ಸಭೆಗೆ ಶಾಸಕ ದೇವೇಂದ್ರಪ್ಪದು ತುಂಬು ಜೀವನ-ತುಂಬಿದ ಕೊಡ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 05, 2023 | 12:02 PM

Share

ಅಂದು ಆತನ ಕೆಲ್ಸವೇ ಅದಾಗಿತ್ತು. ದಿನಾ ಬೆಳಗಾದ್ರೆ ಶಾಲೆಯ (School) ಕಸ ಗುಡಿಸುವುದು. ನೀರು ತುಂಬುವುದು. ಶಾಲೆ ಆರಂಭವಾಗುತ್ತಿದ್ದಂತೆ ಗಂಟೆ ಬಾರಿಸುವುದು. ಹೀಗೆ ಮೂರು ದಶಕಗಳ ಕಾಲ ಆತ ನಿರಂತರ ಜವಾನಗಿರಿ ಮಾಡಿದ್ದ. ಇಂತಹ ಓರ್ವ ವ್ಯಕ್ತಿ ಈಗ ಅಷ್ಟು ದೊಡ್ಡ ಸ್ಥಾನಕ್ಕೆ ಹೋಗುತ್ತಾನೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಆತ ಮಾತ್ರ ಇಂದು ಎಷ್ಟೇ ದೊಡ್ಡ ಸ್ಥಾನಕ್ಕೆ ಏರಿದ್ದರೂ ಸಹ ತನಗೆ ಅನ್ನ ಹಾಕಿದ ಸಂಸ್ಥೆಯನ್ನ ಮಾತ್ರ ಮರೆತಿಲ್ಲ. ನಿನ್ನೆ ಗುರುವಾರ ರಾಜ್ಯಾದ್ಯಂತ ಬೆಳಿಗ್ಗೆ ಶಾಲೆಗಳು ಪುನರಾರಂಭವಾದಾಗ ಆತ ಸಹ ಶಾಲೆಗೆ ಬಂದು ಕಸಗುಡಿಸಿ ಗುರುವೃಂದಕ್ಕೆ ನಮಸ್ಕರಿಸಿ, ಗಂಟೆ ಬಾರಿಸಿದಾಗ ಬಹುತೇಕರು ಭಾವುಕರಾಗಿದ್ದರು! ಇಲ್ಲಿದೆ ನೋಡಿ ಜವಾನಗಿರಿಯಿಂದ ವಿಧಾನ ಸಭೆಗೆ ಶಾಸಕ ದೇವೇಂದ್ರಪ್ಪ ಸ್ಟೋರಿ (Jagalur Congress MLA B Devendrappa).

ಕೆಟ್ಟ ಬಡತನ. ಓದಿದ್ದು ಹತ್ತನೇ ತರಗತಿ. ಇಂತಹ ಪರಿಸ್ಥಿತಿ ಯಾವುದಾದ್ರು ಒಂದು ಕೆಲ್ಸಾ ಮಾಡಿ ಹೊಟ್ಟೆ ತುಂಬಿಸಿಕೊಳ್ಳವ ಸ್ಥಿತಿ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಜವಾನ ಹುದ್ದೆ ಖಾಲಿ ಇತ್ತು. ಕಷ್ಟಾ ಪಟ್ಟು ಅವರಿವರ ಕಾಲು ಹಿಡಿದು ಜವಾನ ಹುದ್ದೆ ಗುಟ್ಟಿಸಿಕೊಂಡ. ಹೀಗೆ ಮೂರು ದಶಕಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕೆಲ್ಸಾ ಮಾಡಿದರು. ಇಂದು ಅದೇ ಕ್ಷೇತ್ರದ ಶಾಸಕರಾಗಿ ಬಿ. ದೇವೇಂದ್ರಪ್ಪ ಆಯ್ಕೆಯಾಗಿದ್ದಾರೆ.

ಹೌದು ಇದು ಯಾವುದೇ ಸಿಮೆಮಾ ಸ್ಟೋರಿ ಎಲ್ಲ. ಸತ್ಯ ಕಥೆ. ಬಿ. ದೇವೇಂದ್ರಪ್ಪ ಅವರ ಮಾದರಿ ಕತೆ. ಇವರೀಗ ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ. ನಿನ್ನೆ ಗುರುವಾರ ತಾವು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ ಜಗಳೂರಿನ ಅಮರ ಭಾರತಿ ವಿದ್ಯಾ ಸಂಸ್ಥೆಗೆ ಭೇಟಿ ನೀಡಿದ್ದರು. ಇದು ಖಾಸಗಿ ಹೈಸ್ಕೂಲ್. ಇಲ್ಲಿಯೇ ದೇವೇಂದ್ರಪ್ಪ ಜವಾನನಾಗಿ ಸೇವೆ ಮಾಡಿದ್ದು.

ತನಗೆ ಅನ್ನ ಹಾಕಿದ ಸಂಸ್ಥೆಗೆ ಇಂದು ಅವರು ಶಾಸಕನಾಗಿ ಬಂದಿದ್ದು ಮಾತ್ರ ವಿಶೇಷ. ಹೀಗೆ ಬಂದವರೇ ಶಾಲೆಯಲ್ಲಿ ಕಸಗುಡಿಸಿದರು. ಅಲ್ಲಿದ್ದ ಮುಖ್ಯ ಶಿಕ್ಷಕರಿಗೆ ನಮಸ್ಕರಿಸಿ, ಹಾಜರಿ ಪುಸ್ತಕ ಎತ್ತಿಕೊಟ್ಟರು. ಜೊತೆಗೆ ತನ್ನೊಂದಿಗೆ ಕೆಲ್ಸಾ ಮಾಡಿದ ಬಹುತೇಕರಿಗೆ ಕೈ ಜೋಡಿಸಿ ನಮಸ್ಕರಿಸಿ ಶಾಲೆಯ ಗಂಟೆ ಬಾರಿಸಿದರು. ಹೀಗೆ ಶಾಲೆ ಗಂಟೆ ಬಾರಿಸುತ್ತಿದ್ದಂತೆ ಮಕ್ಕಳೆಲ್ಲಾ ಪ್ರಾರ್ಥನೆಗೆ ಬಂದರು.

ದೇವೇಂದ್ರಪ್ಪ ಜವಾನನಾಗಿದ್ದರೂ ಸಹ ಮಹಾ ಬುದ್ದಿವಂತ. ನಿತ್ಯ ಶಿಕ್ಷಕರನ್ನು ಸಂಪರ್ಕಿಸುತ್ತಿದ್ದ. ಜೊತೆಗೆ ಮಕ್ಕಳ ಒಡನಾಟ. ಹೀಗಿದ್ದ ದೇವೇಂದ್ರಪ್ಪ ತಾನು ಮದ್ವೆ ಆಗಿ ಎರಡು ಮಕ್ಕಳ ತಂದೆಯಾದ. ಹೀಗೆಯೇ ಇದ್ದರೆ ಹೇಗೆ? ಜೀವನದಲ್ಲಿ ಬದಲಾವಣೆ ಆಗಬೇಕು ಎಂದು ತನ್ನಿಬ್ಬರು ಮಕ್ಕಳಿಗೆ ಕಷ್ಟ ಪಟ್ಟು ಶಾಲೆ ಕಲಿಸಿದ.

ಇಬ್ಬರೂ ಗಂಡು ಮಕ್ಕಳು. ಓರ್ವ ಹಿರಿಯ ಪುತ್ರ ಡಾ. ವಿಜಯ ಕುಮಾರ, ಎಂಬಿಬಿಎಸ್ ಓದಿ ವೈದ್ಯನಾದ. ನಂತರ ಐಆರ್ ಎಸ್ ಪರೀಕ್ಷೆ ಬರೆದು ಈಗ ಕರ್ನಾಟಕ ಗೋವಾ ವಿಭಾಗದ ಆದಾಯ ತೆರಿಗೆ ಅಧಿಕಾರಿ ಆಗಿದ್ದಾನೆ. ಇನ್ನೊಬ್ಬ ಪುತ್ರ ನರ್ಸಿಂಗ್ ಮಾಡಿ ಸರ್ಕಾರಿ ಉದ್ಯೋಗಕ್ಕೆ ಸೇರಿದ್ದ. ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಬಳಿಕ ನರ್ಸಿಂಗ್ ಮಾಡುತ್ತಿದ್ದ ಪುತ್ರನನ್ನ ಸೇವೆ ಬಿಡಿಸಿ ಮನೆಯಲ್ಲಿ ಇಟ್ಟುಕೊಂಡರು. ಪುತ್ರನ ಆದಾಯದಿಂದ ಮನೆಯಲ್ಲಿ ಸಮೃದ್ಧಿ ಮನೆ ಮಾಡಿತ್ತು.

ಇದರ ಹೊರತಾಗಿ, ಜಗಳೂರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ದೇವೇಂದ್ರಪ್ಪ ಕೂಡಾ ವಾಲ್ಮೀಕಿ ಜನಾಂಗಕ್ಕೆ ಸೇರಿದವರು. ಹೀಗಾಗಿ 2018ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶ ಪಡೆದರು. ಜೆಡಿಎಸ್ ನಿಂದ ಸ್ಪರ್ಧಿಸಿ ಸೋತರು. ಆದ್ರೆ ಹೆಸರು ಮಾಡಿದ್ದರು. ನಂತರ ಕಾಂಗ್ರೆಸ್ ಸೇರಿ ಟಿಕೆಟ್ ಪಡೆದು ಈಗ ಶಾಸಕರಾಗಿದ್ದಾರೆ.

ಶಾಸಕರಾಗಿ ಆಯ್ಕೆಯಾಗಿರುವ ದೇವೇಂದ್ರಪ್ಪ ಅವರದು ತುಂಬು ಜೀವನ – ತುಂಬಿದ ಕೊಡ:

ಹೀಗೆ ಹಂತ ಹಂತವಾಗಿ ಮೇಲೆ ಬಂದ ದೇವೇಂದ್ರಪ್ಪ ಜಗಳೂರಿನ ಜನತೆಯ ಆರ್ಶೀವಾದ ದಿಂದ ಇತ್ತೀಚಿಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು 873 ಮತಗಳ ಅಂತರದಿಂದ ಬಿಜೆಪಿ ಪಕ್ಷದ ಎಸ್ ವಿ ರಾಮಚಂದ್ರ ಅವರನ್ನ ಸೋಲಿಸಿ ಅಚ್ಚರಿ ಮೂಡಿಸಿದ್ದರು. ಜವಾನಗಿರಿ ಮಾಡಿಕೊಂಡಿದ್ದ ವ್ಯಕ್ತಿ ಈಗ ಅಷ್ಟು ದೊಡ್ಡ ಸ್ಥಾನಕ್ಕೆ ಹೋಗುತ್ತಾನೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಆತ ಮಾತ್ರ ಇಂದು ಎಷ್ಟೇ ದೊಡ್ಡ ಸ್ಥಾನಕ್ಕೆ ಏರಿದ್ದರೂ ಸಹ ತನಗೆ ಅನ್ನ ಹಾಕಿದ ಸಂಸ್ಥೆಯನ್ನ ಮಾತ್ರ ಮರೆತಿಲ್ಲ.

ಮೂರು ಸಲ ಶಾಸಕರಾಗಿದ್ದ ರಾಮಚಂದ್ರ ಅವರ ಸೋಲು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಇಂತಹ ದೇವೇಂದ್ರಪ್ಪ ವಿಧಾನ ಸಭೆಯಲ್ಲಿ ಇತ್ತೀಚಿಗೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಕ್ಷೇತ್ರದ ಕಾರ್ಯವನ್ನ ಶಾಲೆಯ ಕಸಗೂಡಿಸುವ ಮೂಲಕ ಆರಂಭಿಸಲು ನಿರ್ಧರಿಸಿದ್ದರು. ಇಂದು ತಾನು ಜವಾನನಾಗಿ ದುಡಿದ ಶಾಲೆಯಲ್ಲಿಯೇ ಕಸಗೂಡಿಸಿ ಗಂಟೆ ಬಾರಿಸಿ ಆ ಕೆಲ್ಸ ವಿನೂತನವಾಗಿ ಆರಂಭಿಸಿದ್ದು ವಿಶೇಷವಾಗಿತ್ತು.

ಅಂದಹಾಗೆ ಇತ್ತೀಚೆಗೆ ನಡೆದ 2023ರ ಅಸೆಂಬ್ಲಿ ಚುನಾವಣೆಯಲ್ಲಿ ಬಿ. ದೇವೇಂದ್ರಪ್ಪ ಜಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ ಅವರು 50,765 ಮತಗಳನ್ನು ಪಡೆದು, 49,891 ಮತಗಳನ್ನು ಪಡೆದ ಬಿಜೆಪಿ ಅಭ್ಯರ್ಥಿ ಎಸ್. ವಿ. ರಾಮಚಂದ್ರ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಕಂಡ ಅಪರೂಪದ ಶಾಸಕ… ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ತೋರಿಸಿರುವ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ದೇವೇಂದ್ರಪ್ಪ ಅವರ ಜೀವನ ಕಥೆಯೇ ಮುಂದೊಂದು ದಿನ ಶಾಲಾ ಪಠ್ಯಕ್ಕೆ ಸೇರ್ಪಡೆಯಾದರೆ ಅದು ಕರ್ನಾಟಕದ ಹೆಮ್ಮೆಯಾದೀತು!

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?