AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಹೆಸರಲ್ಲಿ ಜಾಗಕ್ಕಾಗಿ ಆಟ ಕಾಟ! ದಶಕಗಳಿಂದ ನೆಲೆಸಿರುವ ಜಾಗದಿಂದ ವಕ್ಕಲೆಬ್ಬಿಸುವ ಭೀತಿ ಜನಕ್ಕೆ

ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಗ್ರಾಮದ ಜನರ ವಾಸ್ತವ ಸ್ಥಿತಿ ಇದು. ಈ ಗ್ರಾಮದಲ್ಲಿ ದಶಕಗಳಿಂದ ಹತ್ತಾರು ಕುಟುಂಬಗಳು ವಾಸವಾಗಿವೆ. ಬಹುತೇಕರು ಕೂಲಿ ಕಾರ್ಮಿಕರು. ಸರ್ಕಾರಿ ಗೋಮಾಳ ಎಂದು ದಶಕಗಳಿಂದ ನಿರ್ಗತಿಕ ಕುಟುಂಬಗಳು ಇಲ್ಲಿ ವಾಸವಾಗಿವೆ. ಆದ್ರೆ ಈ ಜಮೀನು ಗ್ರಾಮ ದೇವತೆ ದುರ್ಗಾಂಬಿಕಾ ದೇವಸ್ಥಾನಕ್ಕೆ ಸೇರಿದ್ದಾಗಿದೆ.

ದೇವರ ಹೆಸರಲ್ಲಿ ಜಾಗಕ್ಕಾಗಿ ಆಟ ಕಾಟ! ದಶಕಗಳಿಂದ ನೆಲೆಸಿರುವ ಜಾಗದಿಂದ ವಕ್ಕಲೆಬ್ಬಿಸುವ ಭೀತಿ ಜನಕ್ಕೆ
ದೇವರ ಹೆಸರಲ್ಲಿ ಜಾಗಕ್ಕಾಗಿ ಆಟ ಕಾಟ! ದಶಕಗಳಿಂದ ನೆಲೆಸಿರುವ ಜಾಗದಿಂದ ವಕ್ಕಲೆಬ್ಬಿಸುವ ಭೀತಿ ಜನಕ್ಕೆ
TV9 Web
| Updated By: ಆಯೇಷಾ ಬಾನು|

Updated on: Jan 26, 2022 | 12:05 PM

Share

ದಾವಣಗೆರೆ: ಅಲ್ಲಿನ ಜನ ದಶಕಗಳಿಂದ ಸೂರಿಗಾಗಿ ಪರದಾಡುತ್ತಿದ್ದಾರೆ. ನಿಂತ ಜಾಗ ಯಾವಾಗ ಖಾಲಿ ಮಾಡ್ಬೇಕಾಗುತ್ತೋ ಎಂಬ ಆತಂಕದಲ್ಲೇ ದಿನದೂಡುತ್ತಿದ್ದಾರೆ. ಯಾರದ್ದೋ ಹಿತಾಸಕ್ತಿಗೆ ದೇವರ ಹೆಸರಲ್ಲಿ ಕೆಲವರು ಆಟವಾಡುತ್ತಿದ್ದಾರೆ.

ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಗ್ರಾಮದ ಜನರ ವಾಸ್ತವ ಸ್ಥಿತಿ ಇದು. ಈ ಗ್ರಾಮದಲ್ಲಿ ದಶಕಗಳಿಂದ ಹತ್ತಾರು ಕುಟುಂಬಗಳು ವಾಸವಾಗಿವೆ. ಬಹುತೇಕರು ಕೂಲಿ ಕಾರ್ಮಿಕರು. ಸರ್ಕಾರಿ ಗೋಮಾಳ ಎಂದು ದಶಕಗಳಿಂದ ನಿರ್ಗತಿಕ ಕುಟುಂಬಗಳು ಇಲ್ಲಿ ವಾಸವಾಗಿವೆ. ಆದ್ರೆ ಈ ಜಮೀನು ಗ್ರಾಮ ದೇವತೆ ದುರ್ಗಾಂಬಿಕಾ ದೇವಸ್ಥಾನಕ್ಕೆ ಸೇರಿದ್ದಾಗಿದೆ. ಹೀಗಾಗಿ ಈ ಜಮೀನು ದೇವಸ್ಥಾನಕ್ಕೇ ಸೇರಬೇಕೆಂಬ ವಾದ ಶುರುವಾಗಿದೆ. ಇದರಿಂದ ಇಲ್ಲಿ ವಾಸವಾಗಿರುವ ಜನರಿಗೆ ಆತಂಕ ಶುರುವಾಗಿದೆ. ಮುಂದೆ ನಮ್ಮ ಗತಿ ಏನೆಂದು ಹೋರಾಟಕ್ಕೆ ಮುಂದಾಗಿದ್ದಾರೆ. ಈ ಗ್ರಾಮದ ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯೇ ಗುಡಿಸಲಿನಲ್ಲಿ ವಾಸವಾಗಿದ್ದಾರೆ.

ಹೀಗೆ ನಾಲ್ಕು ದಶಕಗಳಿಂದ ಕೆಲವರು ಹಕ್ಕು ಪತ್ರಕೊಡಿಸುವುದಾಗಿ ಹೇಳಿ ಇಲ್ಲಿನ ಜನರನ್ನ ಸುಲಿಗೆ ಮಾಡ್ತಿದ್ದಾರೆ. ಮೇಲಾಗಿ ಈ ವಿಚಾರ ಸಿರಿಗೆರೆ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ನ್ಯಾಯ ಪೀಠದಲ್ಲಿ ಸಹಚರ್ಚೆಗೆ ಬಂದಿದೆ. ಇದರಲ್ಲಿ ಕೆಲವರು ಕೋರ್ಟ್ ಮೊರೆ ಹೋದ ಹಿನ್ನೆಲೆ ಏನು ಮಾಡಲು ಆಗಲ್ಲ ಎಂಬ ಸಂದೇಶ ಬಂದಿದೆ. ಇಲ್ಲಿ ದೇವಸ್ಥಾನ ಸಮಿತಿಯವರು ಸಹ ನ್ಯಾಯ ಸಮ್ಮತವಾಗಿ ಇವರಿಗೆ ಸೈಟ್ ಬಿಟ್ಟು ಕೊಡುವ ಇಚ್ಚೆ ಹೊಂದಿದ್ದಾರೆ. ಆದ್ರೆ ಕೇಸ್ ಕೋರ್ಟ್ನಲ್ಲಿರುವುದೇ ಸಮಸ್ಯೆಯಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದಾಗ ಒಂದು ವಾರದೊಳಗೆ ಬರುತ್ತೇನೆ ಎಂದು ಭರವಸೆ ಕೊಟ್ಟವರು ಇನ್ನೂ ಬಂದಿಲ್ಲವಂತೆ. ಒಟ್ಟಾರೆ ಆದಷ್ಟು ಬೇಗ ಇಲ್ಲಿನ ನಿವಾಸಿಗಳಿಗೆ ಹಕ್ಕು ಪತ್ರ ದೊರೆಯಬೇಕಾಗಿದೆ.

ವರದಿ: ಬಸವರಾಜ್ ದೊಡ್ಮನಿ, TV9, ದಾವಣಗೆರೆ

ಇದನ್ನೂ ಓದಿ: James Special Poster: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​; ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!