AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಅಡಿಕೆ ಮರ ಕಡಿದ ದುಷ್ಕರ್ಮಿಗಳು; ದೂರು ನೀಡಿದರೂ ಕ್ರಮ ಕೈಗೊಳ್ಳದೆ ಪೊಲೀಸರ ನಿರ್ಲಕ್ಷ್ಯ

ರುದ್ರೇಶ್ ಎಂಬುವವರ ತೋಟದಲ್ಲಿ ಅಡಿಕೆ ಮರ ಕಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮಕೈಗೊಳ್ಳುವಲ್ಲಿ ಹಿಂದೇಟು ಹಾಕಿದ್ದಾರೆ. ಹೀಗಾಗಿ ದಾವಣಗೆರೆ ಎಸ್‌ಪಿಗೆ ದೂರು ನೀಡಲು ರುದ್ರೇಶ್ ತೀರ್ಮಾನ ಮಾಡಿದ್ದಾರೆ.

35 ಅಡಿಕೆ ಮರ ಕಡಿದ ದುಷ್ಕರ್ಮಿಗಳು; ದೂರು ನೀಡಿದರೂ ಕ್ರಮ ಕೈಗೊಳ್ಳದೆ ಪೊಲೀಸರ ನಿರ್ಲಕ್ಷ್ಯ
35 ಅಡಕೆ ಮರ ಕಡಿದ ದುಷ್ಕರ್ಮಿಗಳು
TV9 Web
| Updated By: preethi shettigar|

Updated on: Aug 23, 2021 | 12:42 PM

Share

ದಾವಣಗೆರೆ: 35 ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೇಕೊಗಲೂರು ಬಳಿ ನಡೆದಿದೆ. ಹಿರೇಕೊಗಲೂರಿನ ರುದ್ರೇಶ್‌ಗೆ ಸೇರಿದ ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಹತ್ತು ಹಾಗೂ ಮತ್ತೆ ಇಂದು 35 ಫಲ ನೀಡುವ ಹಂತದಲ್ಲಿದ್ದ ಅಡಿಕೆ ಮರಗಳನ್ನು ಕಡಿದಿದ್ದಾರೆ.

6 ಜನರ ವಿರುದ್ಧ ಆರೋಪಿಸಿ ಹಿರೇಕೊಗಲೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರುದ್ರೇಶ್‌ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ರುದ್ರೇಶ್ ಎಂಬುವವರ ತೋಟದಲ್ಲಿ ಅಡಿಕೆ ಮರ ಕಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮಕೈಗೊಳ್ಳುವಲ್ಲಿ ಹಿಂದೇಟು ಹಾಕಿದ್ದಾರೆ. ಹೀಗಾಗಿ ದಾವಣಗೆರೆ ಎಸ್‌ಪಿಗೆ ದೂರು ನೀಡಲು ರುದ್ರೇಶ್ ತೀರ್ಮಾನ ಮಾಡಿದ್ದಾರೆ.

ಮಂಗಳೂರು: ಉಪ್ಪಿನಂಗಡಿಯಲ್ಲಿ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ತಡರಾತ್ರಿ ಕಿಡಿಗೇಡಿಗಳು ಮೀನಿನ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೀನು ಸಂಗ್ರಹದ ಬಾಕ್ಸ್ ಸೇರಿದಂತೆ ಅಂಗಡಿ ಸಂಪೂರ್ಣವಾಗಿ ಭಸ್ಮವಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚಲು ಕಾರಣವೇನು? ಎಂಬುದು ತಿಳಿದುಬರಬೇಕಿದೆ.

ಅಶೋಕ್ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಇಂದು ಬೆಳಿಗ್ಗೆ (ಆಗಸ್ಟ್ 23) ಆಗಮಿಸಿ, ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಘಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಹೈದರಾಬಾದ್​ನಲ್ಲಿ ಅಗ್ನಿ ಅವಗಡ ಹೈದರಾಬಾದ್​ನ ರಂಗರೆಡ್ಡಿ ಜಿಲ್ಲಾ ರಾಜೇಂದ್ರನಗರದಲ್ಲಿ ಅಗ್ನಿ ಅವಗಡ ಸಂಭವಿಸಿದೆ. ಇಂಡಸ್ಟ್ರಿವೊಂದರಲ್ಲಿ ಅಗ್ನಿ ಅವಗಡವಾಗಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿದೆ. ವಿನಾಯಕ ಸ್ಪಾಂಜ್ ಕಂಪನಿ ಹಾಗೂ ದಾನಮ್ಮ ಪ್ಲಾಸ್ಟಿಕ್ ಕಂಪನಿಯಲ್ಲಿ ಅರ್ಧ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಅರ್ಧರಾತ್ರಿ ವೇಳೆ ನಡೆದ ಅವಗಡದಿಂದಾಗಿ ಪ್ರಾಣ ಹಾನಿ ತಪ್ಪಿದೆ. ಆದರೆ ಭಾರಿ ಪ್ರಮಾಣದ ನಷ್ಟವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ:

ದಾವಣಗೆರೆಯ ರೈತರಿಗೆ ಸೇರಿದ 100ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಪರಾರಿಯಾದ ದುಷ್ಕರ್ಮಿಗಳು

ರಸ್ತೆ ಅಗಲೀಕರಣದ ನೆಪದಲ್ಲಿ ನೂರಾರು ಮರಗಳ ಹನನ; ಬೀದರ್ ಜಿಲ್ಲೆಯ ರೈತರಿಂದ ಆಕ್ರೋಶ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ