AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರಗಳ ಮೇಲೆ ದುಷ್ಟರ ಅಟ್ಟಹಾಸ; ಪೆಟ್ರೋಲ್ ಸುರಿದು ಎಮ್ಮೆಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಶಿಕ್ಷಕ ಹನಮಂತಪ್ಪ ಅಕ್ಕರೆಯಿಂದ ಈ ಎಮ್ಮೆಗಳನ್ನು ಸಾಕಿದ್ದರು. ದಿನಕ್ಕೆ ಬೆಳಿಗ್ಗೆ ಎಂಟು ಲೀಟರ್ ಸಂಜೆ ಎಂಟು ಲೀಟರ್ ಅಂದರೆ ಒಂದು ಎಮ್ಮೆ ದಿನಕ್ಕೆ 16 ಲೀಟರ್ ಹಾಲು ಕೊಡುತ್ತಿತ್ತು. ಹನಮಂತಪ್ಪನ ಮನೆಯಲ್ಲಿ ನಿತ್ಯ ಎರಡು ಎಮ್ಮೆಗಳಿಂದ 32 ಲೀಟರ್ ಹಾಲು ಸಂಗ್ರಹವಾಗುತ್ತಿತ್ತು.

ಜಾನುವಾರಗಳ ಮೇಲೆ ದುಷ್ಟರ ಅಟ್ಟಹಾಸ; ಪೆಟ್ರೋಲ್ ಸುರಿದು ಎಮ್ಮೆಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು
ಬೆಂಕಿ ತಾಪಕ್ಕೆ ಎಮ್ಮೆಗಳ ಕಿರುಚಾಟ
TV9 Web
| Edited By: |

Updated on: Oct 06, 2021 | 7:29 AM

Share

ದಾವಣಗೆರೆ: ಮನೆ ಬಾಗಿಲ ಮುಂದೆ ಕಟ್ಟಿದ ಎರಡು ಎಮ್ಮೆಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಹುಚ್ಚವನಹಳ್ಳಿ ಗ್ರಾಮದಲ್ಲಿ ತಡ ರಾತ್ರಿ ಈ ಘಟನೆ ನಡೆದಿದೆ. ಬೆಂಕಿ ತಾಪಕ್ಕೆ ಎಮ್ಮೆಗಳ ಕಿರುಚಾಟ ಕೇಳಿ ಜನ ಓಡಿ ಬಂದಿದ್ದಾರೆ. ಅಷ್ಟರಲ್ಲಿಯೇ ದುಷ್ಟರು ಪರಾರಿಯಾಗಿದ್ದಾರೆ. ದಿನಕ್ಕೆ ಒಂದು ಎಮ್ಮೆ 16 ಲೀಟರ್ ಹಾಲು ಕೊಡುತ್ತಿತ್ತು. ಆದರೆ ಈಗ ಬೆಂಕಿಗೆ ಸುಟ್ಟು ಒಂದು ಎಮ್ಮೆ ಸಾವನ್ನಪ್ಪಿದ್ದರೇ, ಇನ್ನೊಂದು ಎಮ್ಮೆ ತೀವ್ರ ಸುಟ್ಟ ಗಾಯದಿಂದ ನರಳುತ್ತಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕ ಹನಮಂತಪ್ಪ ಎಂಬುವವರಿಗೆ ಸೇರಿದ ಎರಡು ಎಮ್ಮೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಹನಮಂತಪ್ಪ ತಲಾ 85 ಸಾವಿರ ಕೊಟ್ಟು ಈ ಎಮ್ಮೆಗಳನ್ನು ಖರೀದಿ ಮಾಡಿದ್ದರು. ಈಗ ಮಾರುಕಟ್ಟೆಯಲ್ಲಿ ಮುರ್ರಾ ಜಾತಿಯ ಈ ಎಮ್ಮೆಗಳ ಬೆಲೆ ತಲಾ ಒಂದು ಲಕ್ಷ ರೂಪಾಯಿ ಬೆಲೆ ಇದೆ. ಶಿಕ್ಷಕ ಹನಮಂತಪ್ಪ ಅಕ್ಕರೆಯಿಂದ ಈ ಎಮ್ಮೆಗಳನ್ನು ಸಾಕಿದ್ದರು. ದಿನಕ್ಕೆ ಬೆಳಿಗ್ಗೆ ಎಂಟು ಲೀಟರ್ ಸಂಜೆ ಎಂಟು ಲೀಟರ್ ಅಂದರೆ ಒಂದು ಎಮ್ಮೆ ದಿನಕ್ಕೆ 16 ಲೀಟರ್ ಹಾಲು ಕೊಡುತ್ತಿತ್ತು. ಹನಮಂತಪ್ಪನ ಮನೆಯಲ್ಲಿ ನಿತ್ಯ ಎರಡು ಎಮ್ಮೆಗಳಿಂದ 32 ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಹೆಚ್ಚು ಕಡಿಮೆ ದಿನಕ್ಕೆ ಒಂದು ಸಾವಿರ ರೂಪಾಯಿ ಹಾಲು ಮಾರಾಟದಿಂದ ಹನುಮಂತಪ್ಪನ ಕುಟುಂಬ ಲಾಭ ಪಡೆಯುತ್ತಿತ್ತು.

ಇಂತಹ ಅಪರೂಪದ ಎಮ್ಮೆಗಳಿಂದ ಶಿಕ್ಷಕ ಕುಟುಂಬ ಆರ್ಥಿಕವಾಗಿ ಚೆನ್ನಾಗಿತ್ತು. ಆದರೆ ಹನಂತಪ್ಪನಿಗೆ ಆಗದ ಜನರು ಈ ರೀತಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಮೊದಲು ಎಮ್ಮೆಗಳ ಮೇಲೆ ಪೆಟ್ರೋಲ್ ಹಾಕಿದ್ದಾರೆ. ದೂರಿಂದ ಕಡ್ಡಿ ಗಿರಿ ಓಡಿದ್ದಾರೆ. ಮೇಲಾಗಿ ಸುತ್ತಲು ಬೈಕ್ ಸದ್ದು ಸಹ ಆಗಿಲ್ಲ. ನಡುರಾತ್ರಿ ಒಂದು ಗಂಟೆ ಆಗಿದ್ದರಿಂದ ಜನರೆಲ್ಲಾ ನಿದ್ರೆಗೆ ಜಾರಿದ್ದರು. ಎಮ್ಮೆಗಳ ಸದ್ದು ಕೇಳಿದ ತಕ್ಷಣವೇ ಜನರು ಎದ್ದು ಹೊರ ಬಂದು ನೋಡಿದಾಗ ಒಂದು ಎಮ್ಮೆ ಸಂಪೂರ್ಣವಾಗಿ ಬೆಂಕಿಯಲ್ಲಿ ಸುಡುತ್ತಿತ್ತು. ಇನ್ನೊಂದು ಎಮ್ಮೆ ಅರಚುತ್ತಿತ್ತು. ಇದನ್ನ ನೋಡಿದ ಸ್ಥಳೀಯರು ನೀರು ಹಾಕಿ ಬೆಂಕಿಯ ತಾಪ ಕಡಿಮೆ ಮಾಡಲು ಓಡಾಡಿದರು. ಅಷ್ಟರಲ್ಲಿ ಒಂದು ಎಮ್ಮೆ ಸಾವನ್ನಪ್ಪಿದೆ. ಇನ್ನೊಂದು ಎಮ್ಮೆ ತೀವ್ರಗಾಯಗೊಂಡಿದೆ.

ಈ ಬಗ್ಗೆ ಮಾಯಕೊಂಡ ಪೊಲೀಸ್ ಠಾಣೆಗೆ ಶಿಕ್ಷಕ ಹನಮಂತಪ್ಪ ಅವರು ದೂರು ನೀಡಿದ್ದಾರೆ. ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವರದಿ: ಬಸವರಾಜ್ ದೊಡ್ಮನಿ

ಇದನ್ನೂ ಓದಿ: ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿದ ಮೂವರು ಆಪ್ತ ಸ್ನೇಹಿತರು! ಹೃದಯಸ್ಪರ್ಶಿ ವಿಡಿಯೊ ನೋಡಿ

ಆಗುಂಬೆ: ಆಕಸ್ಮಿಕ ಬೆಂಕಿಯಿಂದ ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿತು ಭಾರೀ ಅವಗಢ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?