AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಇಂದು ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ: ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣ ಬಂದ್

ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆ ಭೇಟಿ ಹಿನ್ನೆಲೆ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣವನ್ನು ಒಂದು ದಿನದ ಮಟ್ಟಿಗೆ ಸ್ಥಳಾಂತರಿಸಲಾಗಿದೆ.

PM Modi: ಇಂದು ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ: ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣ ಬಂದ್
ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ (ಎಡಚಿತ್ರ) ಪ್ರಧಾನಿ ಮೋದಿ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 25, 2023 | 7:30 AM

Share

ಮುಖ್ಯಾಂಶಗಳು

  • ಪ್ರಧಾನಿ ನರೇಂದ್ರ ಮೋದಿ ಇಂದು ದಾವಣಗೆರೆ ಭೇಟಿ
  • ಪ್ರಧಾನಿ ನರೇಂದ್ರ ಮೋದಿ ದಾವಣಗೆರೆ ಭೇಟಿ ಹಿನ್ನೆಲೆ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣ ಬಂದ್​
  • ದಾವಣಗೆರೆಯಲ್ಲಿ ನಡೆಯುವ ಬಿಜೆಪಿ ಮಹಾಸಂಗಮ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಮಾ.25) ರಾಜ್ಯದ ಬೆಣ್ಣೆ ನಗರಿ ದಾವಣಗೆರೆಗೆ (Davanagere) ಭೇಟಿ ನೀಡಲಿದ್ದು, ನಗರದ ಹೊರ ವಲಯದ ಜಿಎಂಐಟಿ ಕಾಲೇಜ್ ಪಕ್ಕದಲ್ಲಿ ನಡೆಯುವ ಮೋದಿ ಮಹಾಸಂಗಮದಲ್ಲಿ (Modi Maha Sangama Convention) ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಇಂದು ದಾವಣಗೆರೆಯ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಖಾಸಗಿ ಬಸ್​ ನಿಲ್ದಾಣಗಳನ್ನು ಬಂದ್​ ಮಾಡಲಾಗಿದ್ದು, ಒಂದು ದಿನದ ಮಟ್ಟಿಗೆ ನಗರದ ಹೊರವಲಯಕ್ಕೆ ಸ್ಥಳಾಂತರ ಮಾಡಲಾಗಿದೆ.

ಪ್ರಧಾನಿ ಮೋದಿ ದಾವಣಗೆರೆ ಭೇಟಿ ಸಮಯ

ಪ್ರಧಾನಿ ಮೋದಿ ಮಧ್ಯಾಹ್ನ 3.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್​​ಗೆ ಆಗಮಿಸಿ, ಮಧ್ಯಾಹ್ನ 3.20ಕ್ಕೆ ಹೆಲಿಪ್ಯಾಡ್​ನಿಂದ GMITಯಲ್ಲಿ ನಡೆಯುವ ಮಹಾಸಂಗಮದ ವೇದಿಕೆಗೆ ಬರಲಿದ್ದಾರೆ. ಸಂಜೆ 5.05ಕ್ಕೆ ಸಾರ್ವಜನಿಕ ಸಭೆ ವೇದಿಕೆಯಿಂದ ನಿರ್ಗಮಿಸಲಿದ್ದು, ಸಂಜೆ 5.15ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್​ನಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುತ್ತಾರೆ. ಸಂಜೆ 5.50ಕ್ಕೆ ಶಿವಮೊಗ್ಗ ಏರ್​ಪೋರ್ಟ್​ ತಲುಪಿ, ಸಂಜೆ 5.55ಕ್ಕೆ ಶಿವಮೊಗ್ಗ ಏರ್​ಪೋರ್ಟ್​ನಿಂದ ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: ಮೋದಿ ಮಹಾ ಸಂಗಮ ಸಮಾವೇಶಕ್ಕೆ ಬರುವ ಜನರಿಗೆ ಐದು ಕಿಮೀ ಪಾದಯಾತ್ರೆ ಅನಿವಾರ್ಯ

ಮಹಾಸಂಗಮ ಸಮಾವೇಶಕ್ಕೆ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ​​

400 ಎಕರೆ ಪ್ರದೇಶದಲ್ಲಿ ನಡೆಯುವ ಮಹಾಸಂಗಮದಲ್ಲಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಹಾವೇರಿ ಬಳ್ಳಾರಿ ಹಾಗೂ ಗದಗ 7 ಜಿಲ್ಲೆಯ ಜನರು ಸೇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಲಿದೆ. ಈ ಹಿನ್ನೆಲೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳ ಪಾರ್ಕಿಂಗ್​ಗೆ ವಿವಿಧಡೆ ವ್ಯವಸ್ಥೆ ಮಾಡಲಾಗಿದೆ.

1. ಚಿಕ್ಕಮಗಳೂರು, ಶಿವಮೊಗ್ಗ ಭದ್ರಾವತಿ, ಬೀರೂರು, ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ, ತಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಗಳೂರು ಜಿಲ್ಲೆಗಳಿಂದ ಬಾಡಾ ಕ್ರಾಸ್​ನಿಂದ  ಬರುವ ವಾಹನಗಳಿಗೆ ದಾವಣಗೆರೆಯ ಎಪಿಎಂಸಿ ಬಳಿಯ ಚಿಕ್ಕನಹಳ್ಳಿಗಳಲ್ಲಿ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗಿದೆ​​.

2. ಚನ್ನಗಿರಿ, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಮಂಗಳೂರು ಹದಡಿ ರಸ್ತೆ ಮೂಲಕ ಬರುವ ವಾಹನಗಳಿಗೆ ಡಿಆರ್​ಎಂ ಸೈನ್ಸ್​ ಕಾಲೇಜ್​, ಹೈಸ್ಕೂಲ್​ ಮೈದಾನ, ಯುಬಿಡಿಟಿ ಇಂಜಿನಿಯರಿಂಗ್​ ಕಾಲೇಜ್​ ಮೈದಾನದಲ್ಲಿ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗಿದೆ.

3. ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಹರಿಹರ ಕಡೆಯಿಂದ ಬೈಪಾಸ್​ ರಸ್ತೆ ಮುಖಾಂತರ ಹಳೆ ಕುಂದವಾಡ ಕಡೆಯಿಂದ ಬರುವ ವಾಹನಗಳಿಗೆ  ಕುಂದವಾಡ ಕೆರೆ ಹತ್ತಿರದ ಪಾರ್ಕಿಂಗ್​ ಮಾಡಲು ವ್ಯವಸ್ತೆ ಇದೆ  ಬರುವ ವಾಹನಗಳು ಅವರಗೊಳ್ಳದ ಕೇಂದ್ರೀಯ ವಿದ್ಯಾಲಯದ ಬಳಿ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗಿದೆ.

4. ಹರಪ್ಪನಹಳಿ- ಬಳ್ಳಾರಿ ,ವಿಜಯನಗರ, ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್​, ಕಲಬುರಗಿ, ಗದಗ, ಯಾದಗಿರಿ, ಹೊಸಪೇಟೆ ಕಡೆಯಿಂದ ಬರುವ ವಾಹನಗಳು ಕೊಂಡಜ್ಜಿ, ಆವರಗೊಳ್ಳ ಮುಖಾಂತರ ಬರುವ ವಾಹನಗಳಿಗೆ  ಕೇಂದ್ರೀಯ ವಿದ್ಯಾಲಯದ ಜಾಗದಲ್ಲಿ ಪಾರ್ಕಿಂಗ್​ ವ್ಯವಸ್ಥೆ ಇದೆ.

5. ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಗಿ ಜಿಲ್ಲೆಗಳಿಂದ ಜಗಳೂರು ರಸ್ತೆ ಮೂಲಕ ಬರುವ ವಾಹನಗಳನ್ನು ಬಡಗಿ ಕೃಷ್ಣಪ್ಪ ಲೇಔಟ್​ನಲ್ಲಿ ಪಾರ್ಕಿಂಗ್​ ಮಾಡಲು ವ್ಯವಸ್ಥೆ ಇರುತ್ತದೆ.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭದ್ರತೆ

ಮೋದಿ ಕಾರ್ಯಕ್ರಮದ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಿದ್ದು. ಬಾಂಬ್ ಪತ್ತೆ ದಳ ನಿರಂತರ ತಪಾಸನೆ, ಹತ್ತಾರು ಸಲ ಸುತ್ತಾಡುತ್ತಿರುವ ಸೇನಾ ಹೆಲಿಕಾಪ್ಟರ್. ಮಹಾಸಂಗಮ ನಡೆಯುವ 2 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್​ ಹಾರಾಟ, ಬ್ಲಾಕ್ ಶರ್ಟ್, ನೀರಿನ ಬಾಟಲ್, ಬ್ಯಾಗ್​ಗಳನ್ನು ನಿಷೇಧಿಸಲಾಗಿದೆ. ಜೊತೆಗೆ ಸಮಾವೇಶಕ್ಕೆ ಬರುವ ಜನರನ್ನು ಎರಡು ಹಂತದಲ್ಲಿ ತಪಾಸಣೆ ಮಾಡಲಾಗುತ್ತದೆ. ಇನ್ನು ಎಂಟು ಜನ ಎಸ್​.ಪಿ ಮತ್ತು ಎ.ಎಸ್​.ಪಿಗಳು, ಡಿವೈಎಸ್ಪಿ 32, ಇನ್ಸ್ಪೆಕ್ಟರ್​ಗಳು 85, ಹೋಮ್ ಗಾರ್ಡ್ಸ್ 900 ಸೇರಿದಂತೆ 4000 ಪೊಲೀಸರ ನಿಯೋಜನೆ ಮಾಡಲಾಗಿದೆ. ಮೋದಿ ಪ್ರೇಕ್ಷಕರ ಗ್ಯಾಲರಿಯಲ್ಲಿ ರೋಡ್ ಶೋ ನಡೆಸುವ ಸ್ಥಳದಲ್ಲಿ ಒಬ್ಬ ಎಸ್​ಪಿ ಇರಲಿದ್ದಾರೆ.

ಪಿಯುಸಿ  ಮಕ್ಕಳಿಗೆ ಪೊಲೀಸರ ಸಹಾಯಪ

ಪರೀಕ್ಷೆಗೆ ಬರುವ ಮಕ್ಕಳು ತಮ್ಮೊಂದಿಗೆ ಹಾಲ್​ಟಿಕೇಟ್​ ಮತ್ತು ಗುರುತಿನ ಚೀಟಿಯನ್ನು ಕಡ್ಡಾಯಾವಗಿ ಜೊತೆಯಲ್ಲಿಟ್ಟುಕೊಳ್ಳುವುದು ಹಾಗೂ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪೊಲೀಸರು ಯಾವುದೇ ಅಡಚಣೆ ಮಾಡದೆ ಪರೀಕ್ಷೆಗೆ ಸಂಪೂರ್ಣ ಅನುಕೂಲ ಮಾಡಿಕೊಡಲಾಗವುದು.

Published On - 7:01 am, Sat, 25 March 23

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’