PM Modi: ಇಂದು ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ: ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಂದ್
ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆ ಭೇಟಿ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಒಂದು ದಿನದ ಮಟ್ಟಿಗೆ ಸ್ಥಳಾಂತರಿಸಲಾಗಿದೆ.

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಮಾ.25) ರಾಜ್ಯದ ಬೆಣ್ಣೆ ನಗರಿ ದಾವಣಗೆರೆಗೆ (Davanagere) ಭೇಟಿ ನೀಡಲಿದ್ದು, ನಗರದ ಹೊರ ವಲಯದ ಜಿಎಂಐಟಿ ಕಾಲೇಜ್ ಪಕ್ಕದಲ್ಲಿ ನಡೆಯುವ ಮೋದಿ ಮಹಾಸಂಗಮದಲ್ಲಿ (Modi Maha Sangama Convention) ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಇಂದು ದಾವಣಗೆರೆಯ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಖಾಸಗಿ ಬಸ್ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ಒಂದು ದಿನದ ಮಟ್ಟಿಗೆ ನಗರದ ಹೊರವಲಯಕ್ಕೆ ಸ್ಥಳಾಂತರ ಮಾಡಲಾಗಿದೆ.
ಪ್ರಧಾನಿ ಮೋದಿ ದಾವಣಗೆರೆ ಭೇಟಿ ಸಮಯ
ಪ್ರಧಾನಿ ಮೋದಿ ಮಧ್ಯಾಹ್ನ 3.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ಗೆ ಆಗಮಿಸಿ, ಮಧ್ಯಾಹ್ನ 3.20ಕ್ಕೆ ಹೆಲಿಪ್ಯಾಡ್ನಿಂದ GMITಯಲ್ಲಿ ನಡೆಯುವ ಮಹಾಸಂಗಮದ ವೇದಿಕೆಗೆ ಬರಲಿದ್ದಾರೆ. ಸಂಜೆ 5.05ಕ್ಕೆ ಸಾರ್ವಜನಿಕ ಸಭೆ ವೇದಿಕೆಯಿಂದ ನಿರ್ಗಮಿಸಲಿದ್ದು, ಸಂಜೆ 5.15ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್ನಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುತ್ತಾರೆ. ಸಂಜೆ 5.50ಕ್ಕೆ ಶಿವಮೊಗ್ಗ ಏರ್ಪೋರ್ಟ್ ತಲುಪಿ, ಸಂಜೆ 5.55ಕ್ಕೆ ಶಿವಮೊಗ್ಗ ಏರ್ಪೋರ್ಟ್ನಿಂದ ದೆಹಲಿಗೆ ತೆರಳಲಿದ್ದಾರೆ.
ಇದನ್ನೂ ಓದಿ: ಮೋದಿ ಮಹಾ ಸಂಗಮ ಸಮಾವೇಶಕ್ಕೆ ಬರುವ ಜನರಿಗೆ ಐದು ಕಿಮೀ ಪಾದಯಾತ್ರೆ ಅನಿವಾರ್ಯ
ಮಹಾಸಂಗಮ ಸಮಾವೇಶಕ್ಕೆ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
400 ಎಕರೆ ಪ್ರದೇಶದಲ್ಲಿ ನಡೆಯುವ ಮಹಾಸಂಗಮದಲ್ಲಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಹಾವೇರಿ ಬಳ್ಳಾರಿ ಹಾಗೂ ಗದಗ 7 ಜಿಲ್ಲೆಯ ಜನರು ಸೇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಲಿದೆ. ಈ ಹಿನ್ನೆಲೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳ ಪಾರ್ಕಿಂಗ್ಗೆ ವಿವಿಧಡೆ ವ್ಯವಸ್ಥೆ ಮಾಡಲಾಗಿದೆ.
1. ಚಿಕ್ಕಮಗಳೂರು, ಶಿವಮೊಗ್ಗ ಭದ್ರಾವತಿ, ಬೀರೂರು, ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ, ತಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಗಳೂರು ಜಿಲ್ಲೆಗಳಿಂದ ಬಾಡಾ ಕ್ರಾಸ್ನಿಂದ ಬರುವ ವಾಹನಗಳಿಗೆ ದಾವಣಗೆರೆಯ ಎಪಿಎಂಸಿ ಬಳಿಯ ಚಿಕ್ಕನಹಳ್ಳಿಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
2. ಚನ್ನಗಿರಿ, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಮಂಗಳೂರು ಹದಡಿ ರಸ್ತೆ ಮೂಲಕ ಬರುವ ವಾಹನಗಳಿಗೆ ಡಿಆರ್ಎಂ ಸೈನ್ಸ್ ಕಾಲೇಜ್, ಹೈಸ್ಕೂಲ್ ಮೈದಾನ, ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
3. ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಹರಿಹರ ಕಡೆಯಿಂದ ಬೈಪಾಸ್ ರಸ್ತೆ ಮುಖಾಂತರ ಹಳೆ ಕುಂದವಾಡ ಕಡೆಯಿಂದ ಬರುವ ವಾಹನಗಳಿಗೆ ಕುಂದವಾಡ ಕೆರೆ ಹತ್ತಿರದ ಪಾರ್ಕಿಂಗ್ ಮಾಡಲು ವ್ಯವಸ್ತೆ ಇದೆ ಬರುವ ವಾಹನಗಳು ಅವರಗೊಳ್ಳದ ಕೇಂದ್ರೀಯ ವಿದ್ಯಾಲಯದ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
4. ಹರಪ್ಪನಹಳಿ- ಬಳ್ಳಾರಿ ,ವಿಜಯನಗರ, ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿ, ಗದಗ, ಯಾದಗಿರಿ, ಹೊಸಪೇಟೆ ಕಡೆಯಿಂದ ಬರುವ ವಾಹನಗಳು ಕೊಂಡಜ್ಜಿ, ಆವರಗೊಳ್ಳ ಮುಖಾಂತರ ಬರುವ ವಾಹನಗಳಿಗೆ ಕೇಂದ್ರೀಯ ವಿದ್ಯಾಲಯದ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆ.
5. ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಗಿ ಜಿಲ್ಲೆಗಳಿಂದ ಜಗಳೂರು ರಸ್ತೆ ಮೂಲಕ ಬರುವ ವಾಹನಗಳನ್ನು ಬಡಗಿ ಕೃಷ್ಣಪ್ಪ ಲೇಔಟ್ನಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭದ್ರತೆ
ಮೋದಿ ಕಾರ್ಯಕ್ರಮದ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಿದ್ದು. ಬಾಂಬ್ ಪತ್ತೆ ದಳ ನಿರಂತರ ತಪಾಸನೆ, ಹತ್ತಾರು ಸಲ ಸುತ್ತಾಡುತ್ತಿರುವ ಸೇನಾ ಹೆಲಿಕಾಪ್ಟರ್. ಮಹಾಸಂಗಮ ನಡೆಯುವ 2 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ, ಬ್ಲಾಕ್ ಶರ್ಟ್, ನೀರಿನ ಬಾಟಲ್, ಬ್ಯಾಗ್ಗಳನ್ನು ನಿಷೇಧಿಸಲಾಗಿದೆ. ಜೊತೆಗೆ ಸಮಾವೇಶಕ್ಕೆ ಬರುವ ಜನರನ್ನು ಎರಡು ಹಂತದಲ್ಲಿ ತಪಾಸಣೆ ಮಾಡಲಾಗುತ್ತದೆ. ಇನ್ನು ಎಂಟು ಜನ ಎಸ್.ಪಿ ಮತ್ತು ಎ.ಎಸ್.ಪಿಗಳು, ಡಿವೈಎಸ್ಪಿ 32, ಇನ್ಸ್ಪೆಕ್ಟರ್ಗಳು 85, ಹೋಮ್ ಗಾರ್ಡ್ಸ್ 900 ಸೇರಿದಂತೆ 4000 ಪೊಲೀಸರ ನಿಯೋಜನೆ ಮಾಡಲಾಗಿದೆ. ಮೋದಿ ಪ್ರೇಕ್ಷಕರ ಗ್ಯಾಲರಿಯಲ್ಲಿ ರೋಡ್ ಶೋ ನಡೆಸುವ ಸ್ಥಳದಲ್ಲಿ ಒಬ್ಬ ಎಸ್ಪಿ ಇರಲಿದ್ದಾರೆ.
ಪಿಯುಸಿ ಮಕ್ಕಳಿಗೆ ಪೊಲೀಸರ ಸಹಾಯಪ
ಪರೀಕ್ಷೆಗೆ ಬರುವ ಮಕ್ಕಳು ತಮ್ಮೊಂದಿಗೆ ಹಾಲ್ಟಿಕೇಟ್ ಮತ್ತು ಗುರುತಿನ ಚೀಟಿಯನ್ನು ಕಡ್ಡಾಯಾವಗಿ ಜೊತೆಯಲ್ಲಿಟ್ಟುಕೊಳ್ಳುವುದು ಹಾಗೂ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪೊಲೀಸರು ಯಾವುದೇ ಅಡಚಣೆ ಮಾಡದೆ ಪರೀಕ್ಷೆಗೆ ಸಂಪೂರ್ಣ ಅನುಕೂಲ ಮಾಡಿಕೊಡಲಾಗವುದು.
Published On - 7:01 am, Sat, 25 March 23