Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವಿಷ ಕುಡಿದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಹರಿಹರ ಶಾಸಕ; ಮಾನವೀಯ ಕೆಲಸಕ್ಕೆ ಮೆಚ್ಚುಗೆ

Harihara MLA Ramappa: ಆಂಬುಲೆನ್ಸ್ ಬರುವುದು ತಡವಾಗಿದ್ದರಿಂದ ಅಲ್ಲೇ ಇದ್ದ ಶಾಸಕರು ಮಾನವೀಯ ಕಾರ್ಯ ಮಾಡಿದ್ದಾರೆ. ಶಾಸಕ ರಾಮಪ್ಪ ಸ್ವಂತ ವಾಹನದಲ್ಲೇ ವಿಷ ಕುಡಿದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ದಾವಣಗೆರೆ: ವಿಷ ಕುಡಿದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಹರಿಹರ ಶಾಸಕ; ಮಾನವೀಯ ಕೆಲಸಕ್ಕೆ ಮೆಚ್ಚುಗೆ
ಶಾಸಕರು ಕಾರಿನಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿರುವುದು
Follow us
TV9 Web
| Updated By: ganapathi bhat

Updated on:Aug 10, 2021 | 5:03 PM

ದಾವಣಗೆರೆ: ವಿಷ ಕುಡಿದಿದ್ದ ವ್ಯಕ್ತಿಯನ್ನು ಹರಿಹರ ಶಾಸಕ ಆಸ್ಪತ್ರೆಗೆ ಸೇರಿಸಿದ ಮಾನವೀಯ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ದೀಟೂರು ಗ್ರಾಮದಲ್ಲಿ ನಡೆದಿದೆ. ಆಂಬುಲೆನ್ಸ್ ಬರುವುದು ತಡವಾಗಿದ್ದರಿಂದ ಅಲ್ಲೇ ಇದ್ದ ಶಾಸಕರು ಮಾನವೀಯ ಕಾರ್ಯ ಮಾಡಿದ್ದಾರೆ. ಶಾಸಕ ರಾಮಪ್ಪ ಸ್ವಂತ ವಾಹನದಲ್ಲೇ ವಿಷ ಕುಡಿದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಉತ್ತಮ ಕಾರ್ಯಕ್ಕೆ, ಹರಿಹರ ಶಾಸಕ ರಾಮಪ್ಪಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ಸಂದರ್ಭದಲ್ಲಿ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಾರ್ಯಗಳು ಜನರ ಮೆಚ್ಚುಗೆ ಗಳಿಸಿದ್ದವು. ರೇಣುಕಾಚಾರ್ಯ ಕೊವಿಡ್19 ನಿರ್ವಹಣೆಗೆ ಕೊವಿಡ್ ಕೇರ್ ಸೆಂಟರ್​ನಲ್ಲಿ ಸೋಂಕಿತರ ಜೊತೆ ತಂಗಿದ್ದರು. ಅವರಿಗೆ ಆಹಾರ ಒದಗಿಸುವುದು, ಚಪಾತಿ ಮಾಡಿಕೊಡುವುದು, ಧನಸಹಾಯ ಮಾಡುವುದು, ಮನರಂಜನಾ ಕಾರ್ಯಕ್ರಮ, ಬೀಳ್ಕೊಡುಗೆ, ಸಿಹಿ ಊಟ ಹೀಗೆ ಹಲವು ಕಾರ್ಯಗಳನ್ನು ನಡೆಸಿದ್ದರು. ಆ ಕೆಲಸಗಳು ಕೂಡ ಜನಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಹರಿಹರದ ಶಾಸಕ ರಾಮಪ್ಪ ಮಾನವೀಯ ಕಾರ್ಯ ಜನರಿಂದ ಉತ್ತಮ ಅಭಿಪ್ರಾಯ ಪಡೆದುಕೊಂಡಿದೆ.

ವಿಷಾಹಾರ ಸೇವಿಸಿ 49ಕ್ಕೂ ಹೆಚ್ಚು ಜನರು ಅಸ್ವಸ್ಥ ವಿಷಾಹಾರ ಸೇವಿಸಿ 49ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ‌ ಭಾನುವಳ್ಳಿಯಲ್ಲಿ ನಡೆದಿದೆ. ಭಾನುವಳ್ಳಿಯಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆದರೆ, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಸ್ವಸ್ಥರಿಗೆ ಹರಿಹರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಿನ್ನೆ ರಾತ್ರಿ (ಆಗಸ್ಟ್ 9) ತೊಟ್ಟಿಲು‌ ಕಾರ್ಯಕ್ರಮ ಹಿನ್ನೆಲೆ ಸಿಹಿ ಅಡುಗೆ ಮಾಡಲಾಗಿತ್ತು. ಸಿಹಿ ಅಡುಗೆ ಸೇವಿಸಿದ 45ಕ್ಕೂ ಹೆಚ್ಚು ಜನರಿಗೆ ವಾಂತಿ ಉಂಟಾಗಿದೆ. ತಕ್ಷಣವೇ ಹರಿಹರದ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಚಿಕಿತ್ಸೆಯ ನಂತರ ಬಹುತೇಕ ಎಲ್ಲರೂ ಗುಣಮುಖ ಆಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಮಗುವೊಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದೆ. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತೊಟ್ಟಿಲು ಕಾರ್ಯಕ್ರಮದಲ್ಲಿ ವಿಷಾಹಾರ ಸೇವನೆ ಮಾಡಿದ್ದರಿಂದ ಹೀಗೆ ಮಕ್ಕಳು‌, ವಯಸ್ಕರು ಸೇರಿ‌ 49 ಜನ ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಜಪಾನ್ ಮಿಯಾ ವಾಕಿ ಮಾದರಿಯಲ್ಲಿ ಹಸಿರು ಬೆಳೆಸಲು ಮುಂದಾದ ಮಹಾನಗರ ಪಾಲಿಕೆ

ದಾವಣಗೆರೆ: ಅನೈತಿಕ ಪೊಲೀಸ್ ಗಿರಿ; ಕೆಆರ್​ಎಸ್​ ಪಕ್ಷದ ಮೂರು ಕಾರ್ಯಕರ್ತರ ಬಂಧನ

(Poison intake Poison consumed person admitted to Hospital by Harihar MLA Ramappa)

Published On - 4:45 pm, Tue, 10 August 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್